Subscribe to Updates

    Get the latest creative news from FooBar about art, design and business.

    What's Hot

    ರಾಜ್ಯಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ರಿಷಿಕಾ ದೇವಾಡಿಗ ಆಯ್ಕೆ

    November 21, 2025

    ಹೊಸಬೆಟ್ಟು ಗ್ರಂಥಾಲಯದಲ್ಲಿ ಗ್ರಂಥಾಲಯ ಸಪ್ತಾಹದ ಅಂಗವಾಗಿ ವಿವಿಧ ಸ್ಪರ್ಧೆಗಳು

    November 21, 2025

    ಮನರಂಜಿಸಿದ ‘ಕಲಾಭವ -04’ ಏಕವ್ಯಕ್ತಿ ಭರತನಾಟ್ಯ ಪ್ರಸ್ತುತಿ

    November 21, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ರಾಜ್ಯಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ರಿಷಿಕಾ ದೇವಾಡಿಗ ಆಯ್ಕೆ
    Literature

    ರಾಜ್ಯಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ರಿಷಿಕಾ ದೇವಾಡಿಗ ಆಯ್ಕೆ

    November 21, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕುಂದಾಪುರ : ಕೋಟ ಶಿವರಾಮ ಕಾರಂತ ಮಕ್ಕಳ ಸಾಹಿತ್ಯ ವೇದಿಕೆ, ಸಾಲಿಗ್ರಾಮ ಮತ್ತು ವಿದ್ಯಾಚೇತನ ಪ್ರಕಾಶನ, ಸಿಂದಗಿ, ವಿಜಯಪುರ ಹಾಗೂ ಶ್ರೀ ಸಿದ್ದಿವಿನಾಯಕ ವಸತಿ ಶಾಲೆ, ಹಟ್ಟಿಅಂಗಡಿ ಇವರ ಜಂಟಿ ಆಶ್ರಯದಲ್ಲಿ ದಿನಾಂಕ 28 ನವೆಂಬರ್ 2025ರಂದು ಶ್ರೀ ಸಿದ್ದಿವಿನಾಯಕ ವಸತಿ ಶಾಲೆ, ಹಟ್ಟಿಅಂಗಡಿಯಲ್ಲಿ ನಡೆಯುವ ರಾಜ್ಯಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಟ್ಟಿಅಂಗಡಿ ಶ್ರೀ ಸಿದ್ದಿವಿನಾಯಕ ವಸತಿ ಶಾಲೆಯ ರಿಷಿಕಾ ದೇವಾಡಿಗ ಬೈಂದೂರು ಇವರು ಆಯ್ಕೆಯಾಗಿದ್ದಾರೆ.

    ರಿಷಿಕಾ ದೇವಾಡಿಗ ಇವರು ಈಗಾಗಲೇ ರಾಜ್ಯಮಟ್ಟದ ಭಾಷಣ, ಕವನ ರಚನೆ, ಕವನ ವಾಚನ, ರಸಪ್ರಶ್ನೆ, ಏಕಪಾತ್ರಾಭಿನಯದಲ್ಲಿ ಭಾಗವಹಿಸಿ ಅಪಾರ ಜನಮನ್ನಣೆ ಹೊಂದಿರುವ ಹಲವಾರು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿರುತ್ತಾಳೆ. ಅಲ್ಲದೇ ಇವಳು ‘ಮೊದಲ ಹೆಜ್ಜೆ’ ಎಂಬ ಕಥಾ ಸಂಕಲನದ ಪುಸ್ತಕವನ್ನು ಬರೆದಿದ್ದು, ಓದಿನ ಜೊತೆಗೆ ಕಲೆ ಸಾಹಿತ್ಯದ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದಾರೆ. ಇವಳಿಗೆ ಕಳೆದ ವರ್ಷ ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರ ಪ್ರಶಸ್ತಿ ಸಹ ಲಭಿಸಿದೆ. ಈಕೆ ಶಾಲೆಯ ಉಪಪ್ರಾಂಶುಪಾಲ ರಾಮ ದೇವಾಡಿಗ ಮತ್ತು ಶಿಕ್ಷಕಿ ರೂಪಾ ದಂಪತಿಯ ಪುತ್ರಿ.

    ಈ ಸಮ್ಮೇಳನದ ಉದ್ಘಾಟಕರಾಗಿ ಧನ್ಯಶ್ರೀ ಜೋಗಿ ಕೋಟ ಹಾಗೂ ಕವನ ಗೋಷ್ಠಿಯ ಅಧ್ಯಕ್ಷರಾಗಿ ಸೃಜನ್ ಬೆಂಗಳೂರು ಹಾಗೂ ಕಥಾಗೋಷ್ಠಿಯ ಅಧ್ಯಕ್ಷರಾಗಿ ಸಿದ್ದೇಶ್ ಮೈಸೂರು ಆಯ್ಕೆಯಾಗಿದ್ದಾರೆ ಎಂದು ಕೋಟ ಶಿವರಾಮ ಕಾರಂತ ಮಕ್ಕಳ ಸಾಹಿತ್ಯ ವೇದಿಕೆಯ ಅಧ್ಯಕ್ಷ ಪ್ರೊ. ಉಪೇಂದ್ರ ಸೋಮಯಾಜಿ ಮತ್ತು ಕಾರ್ಯದರ್ಶಿಗಳೂ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ತಿಳಿಸಿದ್ದಾರೆ.

    baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಹೊಸಬೆಟ್ಟು ಗ್ರಂಥಾಲಯದಲ್ಲಿ ಗ್ರಂಥಾಲಯ ಸಪ್ತಾಹದ ಅಂಗವಾಗಿ ವಿವಿಧ ಸ್ಪರ್ಧೆಗಳು
    roovari

    Add Comment Cancel Reply


    Related Posts

    ಹೊಸಬೆಟ್ಟು ಗ್ರಂಥಾಲಯದಲ್ಲಿ ಗ್ರಂಥಾಲಯ ಸಪ್ತಾಹದ ಅಂಗವಾಗಿ ವಿವಿಧ ಸ್ಪರ್ಧೆಗಳು

    November 21, 2025

    ಮನರಂಜಿಸಿದ ‘ಕಲಾಭವ -04’ ಏಕವ್ಯಕ್ತಿ ಭರತನಾಟ್ಯ ಪ್ರಸ್ತುತಿ

    November 21, 2025

    ಯಕ್ಷಗಾನ ಕಲಾವಿದ ಈಶ್ವರ ಗೌಡ ನಿಧನ

    November 21, 2025

    ಮಂಗಳೂರಿನ ಕೆನರಾ ಕಾಲೇಜಿನಲ್ಲಿ ಕುಂಬ್ಳೆ ಸುಂದರ ರಾವ್ ಸಂಸ್ಮರಣೆ ಮತ್ತು ಪ್ರಶಸ್ತಿ ಪ್ರದಾನ | ನವೆಂಬರ್ 23

    November 21, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.