Subscribe to Updates

    Get the latest creative news from FooBar about art, design and business.

    What's Hot

    ಪುಸ್ತಕ ವಿಮರ್ಶೆ | ಮಾಲತಿ ಪಟ್ಟಣಶೆಟ್ಟಿಯವರ ‘ಬಗೆದಷ್ಟು ಜೀವಜಲ’ ಸಂಕಲನ

    February 3, 2026

    ಸಾಹಿತಿ ನಾ. ಡಿಸೋಜ ದತ್ತಿ ಮಕ್ಕಳ ಕಥಾ ಸ್ಪರ್ಧೆ | ಫೆಬ್ರುವರಿ 10

    February 3, 2026

    ಕಲಾಂಗಣದಲ್ಲಿ ಸುರ್ ಸೊಭಾಣ್ ಮಕ್ಕಳಿಂದ ‘ಸುರ್ ಸುರಾಯ್’

    February 3, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ನಿಂಬೆಕಾಯಿಪುರದಲ್ಲಿ ‘ರೊಟ್ಟಿಯ ಸಲುವಾಗಿ ಇಷ್ಟೆಲ್ಲಾ…’
    Drama

    ನಿಂಬೆಕಾಯಿಪುರದಲ್ಲಿ ‘ರೊಟ್ಟಿಯ ಸಲುವಾಗಿ ಇಷ್ಟೆಲ್ಲಾ…’

    July 12, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಹೊಸಕೋಟೆ: ನಿಂಬೆಕಾಯಿಪುರದ ಅಭಯ ಆಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿರುವ ರಂಗಮಂದಿರದಲ್ಲಿ ‘ಜನಮನದಾಟ- ಹೆಗ್ಗೋಡು’ ವಿಶೇಷ ತಿರುಗಾಟ ಪ್ರಯುಕ್ತ ಏರ್ಪಡಿಸಿದ್ದ ‘ರೊಟ್ಟಿಯ ಸಲುವಾಗಿ ಇಷ್ಟೆಲ್ಲಾ…’ ನಾಟಕದ ಪ್ರದರ್ಶನವು ದಿನಾಂಕ 09-07-2023 ರಂದು ನಡೆಯಿತು.
    ‘ಜನಪದರು ಸಾಂಸ್ಕೃತಿಕ ವೇದಿಕೆ’ಯ ಅಧ್ಯಕ್ಷರಾದ ಕೆ.ವಿ.ವೆಂಕಟರಮಣಪ್ಪ ಪಾಪಣ್ಣ ಕಾಟಂನಲ್ಲೂರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ “ಸಮಾಜದಲ್ಲಿ ಅದರಲ್ಲಿಯೂ ವಿಶೇಷವಾಗಿ ಗ್ರಾಮೀಣ ಪ್ರದೇಶದ ಜನರಲ್ಲಿ ಮೌಢ್ಯತೆ, ಅನಕ್ಷರತೆಯಂತಹ ಪಿಡುಗುಗಳ ಬಗ್ಗೆ ಜಾಗೃತಿ ಮೂಡಿಸುವಲ್ಲಿ ರಂಗಕಲೆಯು ಪರಿಣಾಮಕಾರಿಯಾದ ಸಾಧನವಾಗಿದೆ. ಪ್ರಸ್ತುತ ಸನ್ನಿವೇಶದಲ್ಲಿ ಡಾ.ಎಂ.ಗಣೇಶ್ ಇವರ ರಂಗರೂಪ ಮತ್ತು ನಿರ್ದೇಶನದಲ್ಲಿ ನವ್ಯ, ಪ್ರಗತಿಶೀಲ ಹಾಗೂ ಬಂಡಾಯದ ಮಹತ್ವದ ಲೇಖಕರಾದ ಪಿ.ಲಂಕೇಶರ ಕಥೆಗಳ ಸಂಕಲನದಲ್ಲಿನ ನಾಟಕಗಳು ಸಮಾಜಕ್ಕೆ ಉತ್ತಮ ಸಂದೇಶ ನೀಡುವಲ್ಲಿ ಯಶಸ್ವಿಯಾಗಿವೆ” ಎಂದರು.
    ನಾಟಕವು ಸಮಾಜದಲ್ಲಿರುವ ಹಸಿವು ಹಾಗೂ ಭ್ರಷ್ಟಾಚಾರದಿಂದ ನಲುಗಿ, ಅಧಿಕಾರ ಶಾಹಿಯ ಬುದ್ಧಿಗೇಡಿತನವನ್ನು ಪ್ರದರ್ಶಿಸುವ ಮೂಲಕ ಪ್ರೇಕ್ಷಕರ ಪ್ರಶಂಸೆ ಗಳಿಸಿತು. ಇದೇ ಸಂದರ್ಭದಲ್ಲಿ ನಿನಾಸಂ ಹೆಗ್ಗೋಡು ಇದರ ಪ್ರಾಂಶುಪಾಲರಾದ ಡಾ.ಎಂ.ಗಣೇಶ್‌ರನ್ನು ಸನ್ಮಾನಿಸಿ ಗೌರವಿಸಲಾಯಿತು. ವೇದಿಕೆಯಲ್ಲಿ ಪದಾಧಿಕಾರಿಗಳಾದ ಜಗದೀಶ್ ಕೆಂಗನಾಳ, ಓ ಸುರೇಶ್, ಸಿದ್ದೇಶ್ವರ ನನಸುಮನೆ, ಮುನಿರಾಜು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀ ಆಂಜನೇಯ ಯಕ್ಷಗಾನ ಕಲಾಸಂಘ ಸರಣಿ ಕಾರ್ಯಕ್ರಮ – ‘ಚೂಡಾಮಣಿ’
    Next Article ಕೊಡಗು ಜಿಲ್ಲೆಯ ಕಸಾಪದಿಂದ ನೂತನ ಜಿಲ್ಲಾಧಿಕಾರಿಯವರಿಗೆ ಸ್ವಾಗತ
    roovari

    Add Comment Cancel Reply


    Related Posts

    ಬೆಂಗಳೂರಿನ ಕಲಾಗ್ರಾಮದಲ್ಲಿ ‘ಭಾರತ ರಂಗ ಮಹೋತ್ಸವ ಹಾಗೂ ರಂಗ ಪರಿಷೆ’ | ಫೆಬ್ರವರಿ 01ರಿಂದ 06

    January 31, 2026

    ವಿಶ್ವ ಕೊಂಕಣಿ ನಾಟಕ ಮಹೋತ್ಸವ ಹಾಗೂ ಪ್ರಶಸ್ತಿ ಪದಾನ ಸಮಾರಂಭ | ಜನವರಿ 31 ಮತ್ತು ಫೆಬ್ರವರಿ 01

    January 30, 2026

    ಪ್ರಸಿದ್ಧ ಹಾಸ್ಯಗಾರ ಮಹೇಶ ಮಣಿಯಾಣಿಯವರು ‘ವನಜ-ಸುಜನಾ ರಂಗಮನೆ ಪ್ರಶಸ್ತಿ’ಗೆ ಆಯ್ಕೆ

    January 29, 2026

    ಬಿ.ವಿ. ಕಾರಂತ ನೆನಪಿನ ‘ಮಂಚಿ ನಾಟಕೋತ್ಸವ’ | ಜನವರಿ 29 ಮತ್ತು 30

    January 26, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.