ನವದೆಹಲಿ: ಕೇಂದ್ರ ಸಾಹಿತ್ಯ ಅಕಾಡೆಮಿಯ 2025ನೇ ಸಾಲಿನ ‘ಯುವ ಪುರಸ್ಕಾರ’ಕ್ಕೆ ಯುವ ಲೇಖಕ ಆರ್. ಅವರ ‘ಪಚ್ಚೆಯ ಜಗುಲಿ’ ವಿಮರ್ಶಾ ಸಂಕಲನ ಹಾಗೂ ‘ಬಾಲ ಸಾಹಿತ್ಯ ಪುರಸ್ಕಾರ’ಕ್ಕೆ ಲೇಖಕ ಕೆ. ಶಿವಲಿಂಗಪ್ಪ ಹಂದಿಹಾಳು ಅವರ ‘ನೋಟ್ ಬುಕ್’ ಮಕ್ಕಳ ಕಥಾಸಂಕಲನ ಆಯ್ಕೆಯಾಗಿದೆ. ಈ ಪ್ರಶಸ್ತಿಗಳು ತಲಾ ರೂಪಾಯಿ 50 ಸಾವಿರ ನಗದು ಹಾಗೂ ಫಲಕಗಳನ್ನು ಪಡೆಯಲಿದ್ದಾರೆ.
ಶಿವಲಿಂಗಪ್ಪ ಹಂದಿಹಾಳು ಇವರು ಬಳ್ಳಾರಿ ಜಿಲ್ಲೆಯ ಹಂದಿ ಹಾಳು ಗ್ರಾಮದವರು. ಹಂದಿ ಹಾಳು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ‘ನಾನು ಮತ್ತು ಕನ್ನಡಕ’ (ಕವನ ಸಂಕಲನ), ‘ಎಳೆಬಿಸಿಲು’ (ಮಕ್ಕಳ ಸಾಹಿತ್ಯ ಸಂಪದ), ‘ಶಾವೋಲಿನ್’ (ಇಂಗ್ಲಿಷ್ ಮೂಲ ಮಕ್ಕಳ ಕತೆಗಳು), ‘ಆನಂದಾವಲೋಕನ’ (ಭಾರತೀಯ ಮಕ್ಕಳ ಸಾಹಿತ್ಯ ಕುರಿತು), ‘ಬಳ್ಳಾರಿಯ ಬೆಡಗು’ (ಕಥಾ ಸಂಕಲನ), ‘ದಿ ಯಂಗ್ ಸೈಂಟಿಸ್ಟ್’ (ಮಕ್ಕಳ ಕಾದಂಬರಿ) ಸೇರಿದಂತೆ ಹಲವು ಕೃತಿಗಳನ್ನು ರಚಿಸಿದ್ದಾರೆ. ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಕನ್ನಡ ವಿಭಾಗದಲ್ಲಿ ಬಾಲ ಸಾಹಿತ್ಯ ಪುರಸ್ಕಾರಕ್ಕೆ ಲೇಖಕರಾದ ಬಸು ಬೇವಿನಗಿಡದ, ಬೇಲೂರು ರಘುನಂದನ್ ಹಾಗೂ ಎಚ್. ಶಶಿಕಲಾ ತೀರ್ಪುಗಾರರಾಗಿದ್ದರು. ಯುವ ಪುರಸ್ಕಾರಕ್ಕೆ ಲೇಖಕರಾದ ಜಿ. ಎಂ. ಹೆಗಡೆ, ಪ್ರೊ. ವಿಕ್ರಂ ವಿಸಾಜಿ ಹಾಗೂ ವಿಮರ್ಶಕ ಟಿ.ಪಿ. ಅಶೋಕ ತೀರ್ಪುಗಾರರಾಗಿದ್ದರು.
Subscribe to Updates
Get the latest creative news from FooBar about art, design and business.
Previous Articleಪುಸ್ತಕ ವಿಮರ್ಶೆ | ‘ನೋಟ್ ಬುಕ್’ ಮಕ್ಕಳ ಕಥೆಗಳು