Subscribe to Updates

    Get the latest creative news from FooBar about art, design and business.

    What's Hot

    ಡಾ. ಎಂ.ಮೋಹನ ಆಳ್ವ ಇವರಿಗೆ ‘ಡಾ. ಜಿ. ಪಿ. ರಾಜ ರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ’

    June 6, 2025

    ಡಾ. ರಾಗೌ ಸಾಹಿತ್ಯ ಪ್ರಶಸ್ತಿ’ ಹಾಗೂ ‘ಕೆ. ಸಿಂಗಾರಿಗೌಡ ಪುಸ್ತಕ ಪ್ರಶಸ್ತಿ’ ಪ್ರದಾನ ಸಮಾರಂಭ | ಜೂನ್ 08

    June 6, 2025

    ಪುಸ್ತಕ ವಿಮರ್ಶೆ – ‘ಹೌಸ್ ಫುಲ್’

    June 6, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸುರತ್ಕಲ್ ರೋಟರಿ ಕ್ಲಬ್ ವತಿಯಿಂದ ‘ಸಾಹಿತ್ಯ ಮತ್ತು ಬದುಕು’ ವಿಶೇಷ ಉಪನ್ಯಾಸ ಕಾರ್ಯಕ್ರಮ
    Literature

    ಸುರತ್ಕಲ್ ರೋಟರಿ ಕ್ಲಬ್ ವತಿಯಿಂದ ‘ಸಾಹಿತ್ಯ ಮತ್ತು ಬದುಕು’ ವಿಶೇಷ ಉಪನ್ಯಾಸ ಕಾರ್ಯಕ್ರಮ

    May 9, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಸುರತ್ಕಲ್ : ಸುರತ್ಕಲ್ ರೋಟರಿ ಕ್ಲಬ್ ಆಯೋಜಿಸಿದ್ದ ಸಾಹಿತ್ಯ ಮತ್ತು ಬದುಕು ವಿಶೇಷ ಉಪನ್ಯಾಸ ಕಾರ್ಯಕ್ರಮವು ದಿನಾಂಕ 04-05-2024ರಂದು ಸುರತ್ಕಲ್ಲಿನ ವಿದ್ಯಾದಾಯಿನಿ ಸಂಕಿರಣದ ಸಭಾಭವನದಲ್ಲಿ ನಡೆಯಿತು.
    ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಯುವ ಸಾಹಿತಿ ಹಾಗೂ ಸುರತ್ಕಲ್ ಎಂ. ಆರ್. ಪಿ. ಎಲ್. ಸಂಸ್ಥೆಯ ಸಹಾಯಕ ಮೇಲ್ವಿಚಾರಕ ಅಧಿಕಾರಿ ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು “ಬದುಕಿನ ಪರಿಪೂರ್ಣತೆಗೆ ಸಾಹಿತ್ಯದ ಓದು ಅಗತ್ಯ. ಮನೋರಂಜನೆಯೊಂದಿಗೆ ಜ್ಞಾನದ ವಿಸ್ತರಣೆಗೆ ಕಾರಣವಾಗುವ ಸಾಹಿತ್ಯಾಭಿರುಚಿಯನ್ನು ಪ್ರತಿಯೊಬ್ಬರು ಮೂಡಿಸಿಕೊಳ್ಳಬೇಕು. ಭಾವನಾತ್ಮಕ ಕೌಶಲ್ಯ ಇಂದಿನ ಅಗತ್ಯವಾಗಿದ್ದು ಈ ನಿಟ್ಟಿನಲ್ಲಿ ಸಾಮಾಜಿಕ ಸೇವಾ ಸಂಸ್ಥೆಗಳ ಕಾರ್ಯ ಮಹತ್ತರದ್ದಾಗಿದೆ.” ಎಂದು ಹೇಳಿದರು.
    ಕೃಷ್ಣರಾಜ ತಂತ್ರಿ ಯು. ಎಸ್. ಎ. ಮಾತನಾಡಿ “ಮಕ್ಕಳ ಶಾಲೆಗೆ ಹೋಗುವ ಹಂತದಲ್ಲಿಯೇ ಓದಿನ ಅಭಿರುಚಿ ಬೆಳೆಸುವ ಕಾರ್ಯ ನಡೆಯಬೇಕಿರುವುದು ಭಾವನೆಗಳ ಅಭಿವ್ಯಕ್ತಿಗೆ ಸಾಹಿತ್ಯ ಮಾಧ್ಯಮ ಉಪಯುಕ್ತವಾಗಿದೆ.” ಎಂದರು.
    ಸುರತ್ಕಲ್ ರೋಟರಿ ಕ್ಲಬ್ ಅಧ್ಯಕ್ಷ ಯೋಗಿಶ್ ಕುಳಾಯಿ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪ್ರೊ. ಕೃಷ್ಣಮೂರ್ತಿ ಆಶಯನುಡಿಗಳನ್ನಾಡಿದರು. ರೋಟರಿ ಕ್ಲಬ್ ಕಾರ್ಯದರ್ಶಿ ಎಂ.ರಮೇಶ ರಾವ್ ಕಾರ್ಯಕ್ರಮ ಸಂಯೋಜಿಸಿದರು. ನಿಯೋಜಿತ ಅಧ್ಯಕ್ಷ ಸಂದೀಪ್ ರಾವ್ ಇಡ್ಯಾ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Article‘ರಜಾರಂಗು-24’ ಶಿಬಿರದಲ್ಲಿ ಮಕ್ಕಳ ನಾಟಕೋತ್ಸವ
    Next Article ಗುರುರಾಜ ಮಾರ್ಪಳ್ಳಿಯವರಿಗೆ ‘ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ’
    roovari

    Add Comment Cancel Reply


    Related Posts

    ಡಾ. ರಾಗೌ ಸಾಹಿತ್ಯ ಪ್ರಶಸ್ತಿ’ ಹಾಗೂ ‘ಕೆ. ಸಿಂಗಾರಿಗೌಡ ಪುಸ್ತಕ ಪ್ರಶಸ್ತಿ’ ಪ್ರದಾನ ಸಮಾರಂಭ | ಜೂನ್ 08

    June 6, 2025

    ಪುಸ್ತಕ ವಿಮರ್ಶೆ – ‘ಹೌಸ್ ಫುಲ್’

    June 6, 2025

    ಕುಷ್ಟಗಿಯಲ್ಲಿ ಮೌನೇಶ ನವಲಹಳ್ಳಿ ಇವರ ‘ನೀಲಿ ಹೊತ್ತಿಗೆ’ ಕಾದಂಬರಿ ಅವಲೋಕನ ಕಾರ್ಯಕ್ರಮ | ಜೂನ್ 08

    June 6, 2025

    ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನೋತ್ಸವ ಹಾಗೂ ‘ವಿಜಯ ವಿಷ್ಣು ಭಟ್ ದತ್ತಿ’ ಪ್ರಶಸ್ತಿ ಪ್ರದಾನ ಸಮಾರಂಭ

    June 6, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.