Subscribe to Updates

    Get the latest creative news from FooBar about art, design and business.

    What's Hot

    ಸಿಂಧನೂರು ಸತ್ಯಾ ಗಾರ್ಡನ್ ನಲ್ಲಿ 11ನೇ ‘ಮೇ ಸಾಹಿತ್ಯ ಮೇಳ’ | ಮೇ 17 ಮತ್ತು 18

    May 16, 2025

    ಕಯ್ಯಾರರ ಜನ್ಮದಿನ ಸಂಭ್ರಮದಲ್ಲಿ ಭಾಗವಹಿಸಲು ಆಸಕ್ತರಿಗೆ ಆಹ್ವಾನ

    May 16, 2025

    ಶ್ರೀ ನಾಟ್ಯಾಂಜಲಿ ಕಲಾ ಅಕಾಡೆಮಿಯ ನಲ್ವತ್ತರ ನಲಿವು 11ನೇ ಸರಣಿ ಕಾರ್ಯಕ್ರಮ

    May 16, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ನಿವೃತ್ತ ಮುಖ್ಯ ಶಿಕ್ಷಕ ಕೆ. ನಾರಾಯಣ ಗಟ್ಟಿ ಮಾಸ್ಟ‌ರ್ ಇವರಿಗೆ ಕ.ಸಾ.ಪ.ದಿಂದ ಅಭಿನಂದನೆ
    Literature

    ನಿವೃತ್ತ ಮುಖ್ಯ ಶಿಕ್ಷಕ ಕೆ. ನಾರಾಯಣ ಗಟ್ಟಿ ಮಾಸ್ಟ‌ರ್ ಇವರಿಗೆ ಕ.ಸಾ.ಪ.ದಿಂದ ಅಭಿನಂದನೆ

    July 3, 2024Updated:July 2, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕುಂಬಳೆ : ಕನ್ನಡ ಭಾಷೆ, ಸಂಸ್ಕೃತಿಗಳಿಗೆ ಅಮೂಲ್ಯ ಕೊಡುಗೆ ನೀಡಿದ ಹಿರಿಯ ಸಾಧಕರನ್ನು ಅವರ ಮನೆಯಂಗಳದಲ್ಲಿ ಗೌರವಿಸುವ, ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕದ ‘ಸಾಹಿತ್ಯ ಪರಿಷತ್‌ ನಡಿಗೆ ಹಿರಿಯ ಸಾಧಕರ ಕಡೆಗೆ’ ಎಂಬ ಕಾರ್ಯಕ್ರಮದ ಅಂಗವಾಗಿ ಹಿರಿಯ ಕನ್ನಡ ಧುರೀಣ, ನಿವೃತ್ತ ಮುಖ್ಯ ಶಿಕ್ಷಕ ಕೆ. ನಾರಾಯಣ ಗಟ್ಟಿ ಮಾಸ್ಟ‌ರ್ ಅವರನ್ನು ಕುಂಬಳೆ ಸಮೀಪದ ಮಳಿಯಲ್ಲಿರುವ ಅವರ ನಿವಾಸದಲ್ಲಿ ದಿನಾಂಕ 30-06-2024ರಂದು ಅಭಿನಂದಿಸಲಾಯಿತು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ. ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಅವರು ನಾರಾಯಣ ಗಟ್ಟಿ ಅವರನ್ನು ಅಭಿನಂದಿಸಿದರು. ಕಣಿಪುರ ಪತ್ರಿಕೆಯ ಸಂಪಾದಕ ಎಂ.ನಾ. ಚಂಬಲ್ತಿಮಾರ್ ಅಭಿನಂದನಾ ಭಾಷಣ ಮಾಡಿದರು. ಕಥೆಗಾರ್ತಿ ಸ್ನೇಹಲತಾ ದಿವಾಕರ, ಕವಯತ್ರಿ ದಿವ್ಯಾ ಗಟ್ಟಿ ಪರಕ್ಕಿಲ, ಸಂಘಟನಾ ಕಾರ್ಯದರ್ಶಿ ರಾಮಚಂದ್ರ ಭಟ್ ಧರ್ಮತ್ತಡ್ಕ ಇವರೆಲ್ಲರು ಕೆ. ನಾರಾಯಣ ಗಟ್ಟಿ ಮಾಸ್ಟರ್ ಅವರ ವ್ಯಕ್ತಿತ್ವವನ್ನು ಅವರು ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ವಿವರಿಸಿದರು.

    ಸನ್ಮಾನಕ್ಕೆ ಕೃತಜ್ಞತೆ ಸಲ್ಲಿಸಿ ಮಾತನಾಡಿದ ನಾರಾಯಣ ಗಟ್ಟಿಯವರು “ಮಾಜಿ ಶಾಸಕರೂ ಕನ್ನಡ ಹೋರಾಟಗಾರರೂ ಆಗಿರುವ ಎಂ. ಉಮೇಶ ರಾವ್, ಕಳ್ಳಿಗೆ ಮಹಾಬಲ ಭಂಡಾರಿ, ಯು.ಪಿ. ಕುಣಿಕುಳ್ಳಾಯ, ಮಾಜಿ ಸಂಸದ ಎಂ. ರಾಮಣ್ಣ ರೈ ಮೊದಲಾಗಿ ಹಲವು ಕನ್ನಡ ಮತ್ತು ಸಾಂಸ್ಕೃತಿಕ ನಾಯಕರು ಹಾಗೂ ಸಾಹಿತಿಗಳು, ಸಾಂಸ್ಕೃತಿಕ ನಾಯಕರು ಕಾಸರಗೋಡಿನಲ್ಲಿ ಕನ್ನಡಕ್ಕೆ ಸಲ್ಲಿಸಿದ ಸೇವೆಯನ್ನು ಸ್ಮರಿಸಿದರು. ಕೀರ್ತಿಶೇಷರಾದ ಕಾಸರಗೋಡಿನ ಇಂತಹ ಕನ್ನಡದ ಧುರೀಣರ, ಸಾಹಿತಿಗಳ, ಸಾಂಸ್ಕೃತಿಕ ನಾಯಕರ ಬರೆದ ಇಲ್ಲಿನ ಕೋಟೆ ಕೊತ್ತಲಗಳ ಕುರಿತು ಚಿಕ್ಕ ಚಿಕ್ಕ ಪುಸ್ತಕಗಳನ್ನು ಪ್ರಕಟಿಸಿ, ಮುಂದಿನ ಪೀಳಿಗೆಗೆ ಹಿಂದಿನವರು ಮಾಡಿದ ಕನ್ನಡ ಕಾಯಕವನ್ನು ತಲುಪಿಸುವ ಕೆಲಸ ನಡೆಯಬೇಕು” ಎಂದು ಹೇಳಿದರು.

    ಸಾಹಿತ್ಯ ಪರಿಷತ್ತಿನ ಸಂಘಟನಾ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ಗೌರವ ಕಾರ್ಯದರ್ಶಿ ಶೇಖರ ಶೆಟ್ಟಿ ಬಾಯಾರು ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ ಪುಸ್ತಕ ಖರೀದಿ ಯೋಜನೆ
    Next Article  ವಿಮರ್ಶೆ | ಪುಟ್ಟ ಬಾಲಕನ ದಿಟ್ಟ ಪ್ರಥಮ ಸಂಗೀತ ಕಾರ್ಯಕ್ರಮ
    roovari

    Add Comment Cancel Reply


    Related Posts

    ಸಿಂಧನೂರು ಸತ್ಯಾ ಗಾರ್ಡನ್ ನಲ್ಲಿ 11ನೇ ‘ಮೇ ಸಾಹಿತ್ಯ ಮೇಳ’ | ಮೇ 17 ಮತ್ತು 18

    May 16, 2025

    ಕಯ್ಯಾರರ ಜನ್ಮದಿನ ಸಂಭ್ರಮದಲ್ಲಿ ಭಾಗವಹಿಸಲು ಆಸಕ್ತರಿಗೆ ಆಹ್ವಾನ

    May 16, 2025

    ಶ್ರೀ ನಾಟ್ಯಾಂಜಲಿ ಕಲಾ ಅಕಾಡೆಮಿಯ ನಲ್ವತ್ತರ ನಲಿವು 11ನೇ ಸರಣಿ ಕಾರ್ಯಕ್ರಮ

    May 16, 2025

    ಸಾಹಿತಿ ರತ್ನ ಕುಮಾರ್ ಎಂ. ಇವರಿಗೆ ಕ.ಸಾ.ಪ.ದಿಂದ ಸನ್ಮಾನ

    May 15, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.