Subscribe to Updates

    Get the latest creative news from FooBar about art, design and business.

    What's Hot

    ಕಟಪಾಡಿ ವೇಣುಗಿರಿಯಲ್ಲಿ ‘ಭಜನಾ ವೈಭವ 2025’ ಸಾಂಪ್ರದಾಯಿಕ ಭಜನಾ ಸ್ಪರ್ಧೆ | ಜೂನ್ 22

    May 20, 2025

    ಸರಯೂ ಬಾಲಯಕ್ಷ ವೃಂದ ಮಕ್ಕಳ ಮೇಳದ ‘ಯಕ್ಷ ಪಕ್ಷ’ ರಜತ ಸಂಭ್ರಮ ಉದ್ಘಾಟನೆ

    May 20, 2025

    ನಿಡ್ಲೆಯಲ್ಲಿರುವ ಕರುಂಬಿತ್ತಿಲ್ ಮನೆಯಲ್ಲಿ ‘ಕರುಂಬಿತ್ತಿಲ್ ಶಿಬಿರ 2025’ | ಮೇ 20ರಿಂದ 25

    May 19, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಳ್ಳಾಲಕ್ಕೆ ಆಗಮಿಸಿದ ಸಾಹಿತ್ಯ ರಥ 
    Literature

    ಉಳ್ಳಾಲಕ್ಕೆ ಆಗಮಿಸಿದ ಸಾಹಿತ್ಯ ರಥ 

    November 8, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಉಳ್ಳಾಲ: ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಭಾಗವಾಗಿ ನಾಡಿನೆಲ್ಲದೆ ಸಂಚರಿಸುತ್ತಿರುವ ಸಾಹಿತ್ಯ ರಥವನ್ನು ದಿನಾಂಕ 08 ನವಂಬರ್ 2024ರ ಗುರುವಾರ ಸಂಜೆ ತೊಕ್ಕೊಟ್ಟಿನಲ್ಲಿ ಸ್ವಾಗತಿಸಲಾಯಿತು.
    ಕಾರ್ಯಕ್ರಮದಲ್ಲಿ ಉಳ್ಳಾಲ ತಾಲೂಕು ತಹಶೀಲ್ದಾರ್ ಪುಟ್ಟರಾಜು ಮಾತನಾಡಿ “ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ  ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಸಾಹಿತ್ಯ ಸಮ್ಮೇಳನವು ಊರು ಊರುಗಳಲ್ಲಿ ಕನ್ನಡದ ಹಬ್ಬದಂತೆ ಸಂಭ್ರಮಿಸುವಂತಾಗಲಿ. ನಾವೆಲ್ಲ ಕನ್ನಡಿಗರು ಎಂಬ ಸಂಭ್ರಮ ಅಭಿಮಾನವನ್ನು ಸಮ್ಮೇಳನ ಉಂಟುಮಾಡಲಿ.” ಎಂದು ಹೇಳಿದರು.
    ದ. ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಡಾ. ಎಂ. ಪಿ. ಶ್ರೀನಾಥ್ ಸಮ್ಮೇಳನದ ಆಶಯವನ್ನು ವಿವರಿಸಿ ಸಮ್ಮೇಳನದ ಯಶಸ್ಸಿಗೆ ಹಾರೈಸಿದರು.
    ಉಳ್ಳಾಲ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಇದರ ಅಧ್ಯಕ್ಷರಾದ ಡಾ.ಧನಂಜಯ ಕುಂಬ್ಳೆ ಮಾತನಾಡಿ “ಸಾಹಿತ್ಯ ಸಮ್ಮೇಳನವು ಯಾವುದೇ ಗೊಂದಲಗಳಿಲ್ಲದೇ ಕನ್ನಡ ಸಾಹಿತ್ಯ, ಸಂಸ್ಕೃತಿ ಮತ್ತು ಕನ್ನಡದ ವೈಚಾರಿಕತೆಯನ್ನು ಪ್ರಚುರಪಡಿಸಲಿ.” ಎಂದರು.
    ಉಳ್ಳಾಲ ತಾಲೂಕು ಕಾರ್ಯನಿರ್ವಹಣಾಧಿಕಾರಿ ಗುರುದತ್ತ್,  ನಗರಸಭಾಧ್ಯಕ್ಷ್ಯೆ ಶಶಿಕಲಾ ಚೆಂಬುಗುಡ್ಡೆ, ಕೌನ್ಸಿಲರ್ ಅಸ್ಗರ್ ಅಲಿ,  ಉಳ್ಳಾಲ ಕ. ಸಾ. ಪ. ಗೌರವ ಕಾರ್ಯದರ್ಶಿ ರವೀಂದ್ರ ರೈ ಕಲ್ಲಿಮಾರು, ಕೋಶಾಧಿಕಾರಿ ಲಯನ್ ಚಂದ್ರಹಾಸ ರೈ ದೇರಳಕಟ್ಟೆ, ಉಳ್ಳಾಲ ಕ. ಸಾ. ಪ. ಹೋಬಳಿ ಅಧ್ಯಕ್ಷ್ಯೆ ವಿಜಯಲಕ್ಷ್ಮಿ ಪ್ರಸಾದ್ ರೈ, ಪದಾಧಿಕಾರಿಗಳಾದ ತೋನ್ಸೆ ಪುಷ್ಕಳ ಕುಮಾರ್, ತ್ಯಾಗಂ ಹರೇಕಳ, ಗುಣಾಜೆ ರಾಮಚಂದ್ರ ಭಟ್, ಕಾರ್ಯದರ್ಶಿ ಎಡ್ವರ್ಡ್ ಲೋಬೋ, ಮುಖಂಡರಾದ ಪ್ರಸಾದ್ ರೈ ಕಲ್ಲಿಮಾರ್, ನಗರಸಭೆಯ ಪದಾಧಿಕಾರಿಗಳು ಸಿಬ್ಬಂದಿಗಳು ಭಾಗವಹಿಸಿದ್ದರು. ತ್ಯಾಗಂ ಹರೇಕಳ ನಿರೂಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleವಿಜೃಂಭಣೆಯಿಂದ ಸಮಾಪನಗೊಂಡ ನೃತ್ಯನಿಕೇತನದ ‘ನೃತ್ಯ ದೀಪೋತ್ಸವ’
    Next Article ‘ಕನಕ ಗೌರವ ಪ್ರಶಸ್ತಿ’ ಮತ್ತು ‘ಕನಕ ಯುವ ಪುರಸ್ಕಾರ’ಗಳ ಘೋಷಣೆ
    roovari

    Add Comment Cancel Reply


    Related Posts

    ರಾಜ್ಯ ಮಟ್ಟದ ಕವನ ಮತ್ತು ಸಣ್ಣಕಥಾ ಸ್ಪರ್ಧೆಯ ಫಲಿತಾಂಶ ಪ್ರಕಟ

    May 19, 2025

    ‘ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ’ಗೆ ಎಂಟು ಕೃತಿಗಳ ಆಯ್ಕೆ

    May 19, 2025

    ಡಾ. ಹಂಪನಾ ‘ನಾಲ್ವಡಿ ಶ್ರೀ ಕೃಷ್ಣರಾಜ ಒಡೆಯರ್ ಪ್ರಶಸ್ತಿ’ಗೆ ಆಯ್ಕೆ

    May 17, 2025

    ಡಿ.ಎಸ್. ಕರ್ಕಿ ‘ಕಾವ್ಯ ಪ್ರಶಸ್ತಿ’ಗೆ ಕವನ ಸಂಕಲನ ಆಹ್ವಾನ

    May 17, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.