Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರು ಪುರಭವನದಲ್ಲಿ ಕೊಂಕಣಿ ಯಕ್ಷಗಾನ

    June 5, 2025

    ಕನ್ನಡ ಸಾಹಿತ್ಯ ಪರಿಷತ್ತಿನ ಮಂದಿರದಲ್ಲಿ ರಾಜರ್ಷಿ ನಾಲ್ವಡಿ ಶ್ರೀಕೃಷ್ಣರಾಜ ಒಡೆಯರ್ ಅವರ ಜಯಂತ್ಯುತ್ಸವ

    June 5, 2025

    ಶ್ರೀ ಮಹಾಂತೇಶ ಎಂ. ಗಜೇಂದ್ರಗಡ ಇವರಿಗೆ “ಮೇಘರತ್ನ ಪ್ರಶಸ್ತಿ”

    June 5, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ ವತಿಯಿಂದ ‘ಸಾಹಿತ್ಯ ಸಮಾವೇಶ-2023’
    Literature

    ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ ವತಿಯಿಂದ ‘ಸಾಹಿತ್ಯ ಸಮಾವೇಶ-2023’

    February 1, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕೊಣಾಜೆ : ಕೈರಂಗಳದ ಶಾರದಾ ಗಣಪತಿ ವಿದ್ಯಾ ಕೇಂದ್ರದಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ ವತಿಯಿಂದ ಹಿರಿಯ ಸಾಹಿತಿ ಶ್ರೀನಿವಾಸ ಭಟ್ ಸೇರಾಜೆ ಅವರ ಸರ್ವಾಧ್ಯಕ್ಷತೆಯಲ್ಲಿ ‘ಸಾಹಿತ್ಯ ಸಮಾವೇಶ-2023’ವು ದಿನಾಂಕ 01-12-2023ರಂದು ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ದ.ಕ. ಜಿಲ್ಲಾ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಅಧ್ಯಕ್ಷ ಎಸ್.ಎಸ್. ನಾಯಕ್ ಮಾತನಾಡಿ “ಸಾಹಿತ್ಯ, ಸಂಗೀತ, ಕಲೆಗಳಲ್ಲಿ ಅಭಿರುಚಿ ಇಲ್ಲದ ವ್ಯಕ್ತಿ ಪಶುವಿಗೆ ಸಮಾನ. ಹಾಗಾಗಿ ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಅಭಿರುಚಿ ಹೆಚ್ಚಿಸಬೇಕು” ಎಂದು ಹೇಳಿದರು.

    ಸರ್ವಾಧ್ಯಕ್ಷತೆ ವಹಿಸಿದ ಸಾಹಿತಿ, ಶಾರದಾ ಗಣಪತಿ ವಿದ್ಯಾಕೇಂದ್ರದ ಹಿಂದಿ ಶಿಕ್ಷಕ ಶ್ರೀನಿವಾಸ ಭಟ್ ಸೇರಾಜೆ ಮಾತನಾಡಿ, “ವಿಚಾರಗಳಿಂದ ಚರ್ಚೆ ಆಗಬೇಕೇ ಹೊರತು ಚರ್ಚೆಯೇ ವಿಚಾರ ಆಗಬಾರದು. ಅಧ್ಯಯನಶೀಲತೆ ಮುಖ್ಯ. ಜ್ಞಾನವನ್ನು ಪಡೆದು ಪಸರಿಸಬೇಕು. ಹಾಗಾಗಿ ಬಾಲ್ಯದಲ್ಲಿಯೇ ವಿದ್ಯಾರ್ಥಿಗಳನ್ನು ಸಾಹಿತ್ಯ ಕ್ಷೇತ್ರದ ಸೇವೆಗೆ ನಾವು ಸಿದ್ಧಪಡಿಸಬೇಕು” ಎಂದರು.

    ಶಾರದಾ ಗಣಪತಿ ವಿದ್ಯಾಕೇಂದ್ರದ ಸಂಚಾಲಕರಾದ ಟಿ.ಜಿ. ರಾಜಾರಾಮ್ ಭಟ್ ಮಾತನಾಡಿ “ಶಾರದಾ ಗಣಪತಿ ವಿದ್ಯಾಕೇಂದ್ರದಲ್ಲಿ ಯಾವುದೇ ಕಾರ್ಯಕ್ರಮಗಳು ನಡೆದರೂ ದಾಖಲಾರ್ಹವಾಗಿರುತ್ತವೆ. ಮುಂದಿನ ವರ್ಷದಿಂದ ಇಲ್ಲಿ 10 ಸಾವಿರ ಚದರಡಿಯ ವಿಶಾಲವಾದ ಭವ್ಯ ಸಭಾಂಗಣ ತಲೆ ಎತ್ತಲಿದ್ದು, ಯಾವುದೇ ಸಾಹಿತ್ಯ, ಸಂಗೀತ, ಕಲೆ ಸೇರಿದಂತೆ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಜ್ಞಾನಕ್ಕೆ ಪೂರಕವಾಗುವಂತೆ ಹಾಗೂ ಯೋಜಿತ ಕಾರ್ಯಕ್ರಮ ಅದ್ದೂರಿಯ ಜತೆಗೆ ವಿಶಿಷ್ಟ ರೀತಿಯಲ್ಲಿ ಆಯೋಜಿಸಲಾಗುವುದು” ಎಂದು ಹೇಳಿದರು.

    ಕಾರ್ಯಕ್ರಮದ ಪ್ರಯುಕ್ತ ಅಭಿರುಚಿ ಗೋಷ್ಠಿ, ಸಾಹಿತ್ಯ ಸೌರಭ, ಪ್ರತಿಭಾ ಪುರಸ್ಕಾರ, ಗೋಷ್ಠಿಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಯೋಜಿಸಲಾಗಿತ್ತು. ಅ.ಭಾ.ಸಾ.ಪ. ಜಿಲ್ಲಾಧ್ಯಕ್ಷ ಹಿರಿಯ ಪತ್ರಕರ್ತ ಪಿ.ಬಿ. ಹರೀಶ್ ರೈ ಆಶಯ ಭಾಷಣ ಮಾಡಿದರು. ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಗೌರವಾಧ್ಯಕ್ಷ ಇರಾ ನೇಮು ಪೂಜಾರಿ, ಪತ್ರಕರ್ತ ರೇಮಂಡ್ ಡಿಕುನ್ಹಾ ತಾಕೋಡೆ ಉಪಸ್ಥಿತರಿದ್ದರು. ಸ್ವಾಗತ ಸಮಿತಿ ಅಧ್ಯಕ್ಷ ಟಿ.ಜಿ. ರಾಜಾರಾಮ್ ಭಟ್ ಶುಭ ಹಾರೈಸಿದರು. ಬಂಟ್ವಾಳ ಸಮಿತಿ ಅಧ್ಯಕ್ಷ ಡಾ. ಸುರೇಶ ನೆಗಳಗುಳಿ ಪ್ರಾಸ್ತಾವಿಕ ಮಾತುಗಳನ್ನಾಡಿ, ಜಯಾನಂದ ವಂದಿಸಿದರು.

     

    Share. Facebook Twitter Pinterest LinkedIn Tumblr WhatsApp Email
    Previous Articleಕೊಡಗು ವಿಶ್ವವಿದ್ಯಾಲಯದಲ್ಲಿ ‘ಭಾರತೀಯ ಭಾಷೆಗಳು-ಸಾಹಿತ್ಯ: ವೈವಿಧ್ಯತೆ ಹಾಗೂ ಐಕ್ಯತೆ’ ವಿಶೇಷ ಉಪನ್ಯಾಸ
    Next Article ತಲಪಾಡಿ ದೇವಿ ನಗರದಲ್ಲಿ ‘ದಮಯಂತಿ ಸ್ವಯಂವರ’ ಗಮಕ ವ್ಯಾಖ್ಯಾನ
    roovari

    Add Comment Cancel Reply


    Related Posts

    ಶ್ರೀ ಮಹಾಂತೇಶ ಎಂ. ಗಜೇಂದ್ರಗಡ ಇವರಿಗೆ “ಮೇಘರತ್ನ ಪ್ರಶಸ್ತಿ”

    June 5, 2025

    ಪುಸ್ತಕ ವಿಮರ್ಶೆ | ‘ಡಾ. ಜಿ.ಎಸ್. ಆಮೂರ ಅವರ ಸಮಗ್ರ ಬೇಂದ್ರೆ ವಿಮರ್ಶೆ’

    June 5, 2025

    ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ‘ಹಲಸಿನ ಅರಿವಿನ ಹರಿವು’ ತಾಳಮದ್ದಲೆ | ಜೂನ್ 07

    June 5, 2025

    ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ ಸ್ವೀಕಾರ

    June 4, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.