ಕಾಸರಗೋಡು : ಶ್ರೀನಿವಾಸ್ ಯುನಿವರ್ಸಿಟಿಯಿಂದ ಶ್ರೀ ಶ್ಯಾಮರಾವ್ ಸ್ಮರಣೆಯಲ್ಲಿ ನೀಡಲಾಗುತ್ತಿರುವ ‘ಸಾಧನಶ್ರೀ -2025’ ಪ್ರಶಸ್ತಿಗೆ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷರಾದ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಹಿರಿಯ ಭಾಗವತರಾದ ಸನ್ಮಾನ್ಯ ಶ್ರೀ ರಾಮಕೃಷ್ಣ ಮಯ್ಯ ಇವರನ್ನು ಆಯ್ಕೆ ಮಾಡಲಾಗಿದ್ದು, ದಿನಾಂಕ 14 ಫೆಬ್ರವರಿ 2025ರಂದು ಪ್ರಶಸ್ತಿ ನೀಡಿ ಪುರಸ್ಕರಿಸಲಾಗುವುದು.