Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ರಂಗಶಂಕರದಲ್ಲಿ ‘ರೊಶೊಮನ್’ ನಾಟಕ ಪ್ರದರ್ಶನ | ಮೇ 17

    May 13, 2025

    ಸಂವಾಹಿನಿ ಹಳೆ ವಿದ್ಯಾರ್ಥಿ ಸಂಘದ ಅಡಿಯಲ್ಲಿ ‘ಯಾದೇ’ ಸಂಭ್ರಮಾಚರಣೆ

    May 13, 2025

    ಸಂಪೆಕಟ್ಟೆಯಲ್ಲಿ ಯಶಸ್ವಿ ಕಲಾವೃಂದದ ಮಕ್ಕಳ ಮೇಳದ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ

    May 13, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಾಸರಗೋಡಿನಲ್ಲಿ ‘ಸಾಹಿತ್ಯ ಹಬ್ಬ 2024’ ನೋಂದಾವಣೆಗೆ ಕೊನೆಯ ದಿನಾಂಕ ಮಾರ್ಚ್ 5
    Literature

    ಕಾಸರಗೋಡಿನಲ್ಲಿ ‘ಸಾಹಿತ್ಯ ಹಬ್ಬ 2024’ ನೋಂದಾವಣೆಗೆ ಕೊನೆಯ ದಿನಾಂಕ ಮಾರ್ಚ್ 5

    February 8, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾಸರಗೋಡು : ಧಾರವಾಡದ ರಾಘವೇಂದ್ರ ಪಾಟೀಲ ಸಾಹಿತ್ಯ ವೇದಿಕೆ ಮತ್ತು ಬೆಂಗಳೂರಿನ ಶಂಪಾ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ಧಾರವಾಡ ಕಟ್ಟೆ ಮತ್ತು ಕಾಸರಗೋಡಿನ ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಸಹಕಾರದೊಂದಿಗೆ ದಿನಾಂಕ 16-03-2024 ಮತ್ತು 17-03-2024ರಂದು ಕಾಸರಗೋಡಿನಲ್ಲಿ ಎರಡು ದಿನಗಳ ‘ಸಾಹಿತ್ಯ ಹಬ್ಬ’ವನ್ನು ಆಯೋಜಿಸಲಾಗಿದೆ. ಇದರಲ್ಲಿ ನಾಡಿನ ಖ್ಯಾತ ಸಾಹಿತಿಗಳು ಮತ್ತು ವಿದ್ವಾಂಸರು ಪಾಲ್ಗೊಳ್ಳಲಿದ್ದಾರೆ. ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಕುರಿತು ವಿಶೇಷ ಉಪನ್ಯಾಸ, ವಿಚಾರ ಗೋಷ್ಠಿ ಮತ್ತು ಸಂವಾದಗಳು ನಡೆಯಲಿವೆ. ಈ ಸಾಹಿತ್ಯ ಹಬ್ಬದಲ್ಲಿ ನೋಂದಾಯಿತ ಪ್ರತಿನಿಧಿಗಳು ಮಾತ್ರ ಭಾಗವಹಿಸಬಹುದು.

    * ಸಾಮಾನ್ಯ ಪ್ರತಿನಿಧಿ ಪ್ರವೇಶ ಶುಲ್ಕ ರೂ.1000/-
    * ವಿದ್ಯಾರ್ಥಿ ಪ್ರತಿನಿಧಿ ಪ್ರವೇಶ ಶುಲ್ಕ ರೂ.500/-
    * ಪದವಿ, ಸ್ನಾತಕೋತ್ತರ ಪದವಿ ಮತ್ತು ಸಂಶೋಧನ ವಿದ್ಯಾರ್ಥಿಗಳು ತಮ್ಮ ಕಾಲೇಜಿನ ಪ್ರಾಂಶುಪಾಲರು ಮತ್ತು ವಿಭಾಗ ಮುಖ್ಯಸ್ಥರಿಂದ ಪಡೆದ ದೃಢೀಕರಣ ಪತ್ರ ನೀಡಿದಲ್ಲಿ ಮಾತ್ರ ರೂ.500/- ಶುಲ್ಕ ಪಾವತಿಸಬಹುದು. ಇಲ್ಲದಿದ್ದರೆ ರೂ.1000/- ಶುಲ್ಕ ಪಾವತಿಸಬೇಕಾಗುವುದು.
    * ನೋಂದಾಯಿತ ಪ್ರತಿನಿಧಿಗಳಿಗೆ ಮಾತ್ರ ಎರಡು ದಿನಗಳ ಕಾಲ ಉಪಹಾರ, ಊಟ ಮತ್ತು ವಸತಿಯ ವ್ಯವಸ್ಥೆ ಕಲ್ಪಿಸಲಾಗುವುದು.
    * ಎಲ್ಲಾ ನೋಂದಾಯಿತ ಪ್ರತಿನಿಧಿಗಳಿಗೆ ಪ್ರಮಾಣ ಪತ್ರ ನೀಡಲಾಗುವುದು.
    * ಪ್ರತಿನಿಧಿಗಳಾಗಿ ನೋಂದಾಯಿಸಿಕೊಳ್ಳಲು ದಿನಾಂಕ 05-03-2024 ಕೊನೆಯ ದಿನವಾಗಿರುತ್ತದೆ.
    * ಸೀಮಿತ ಸಂಖ್ಯೆಯ ಪ್ರತಿನಿಧಿಗಳಿಗೆ ಅವಕಾಶವಿರುವುದರಿಂದ ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು.
    * ಅರ್ಜಿ ಮತ್ತು ದೃಢೀಕರಣ ಪತ್ರಗಳ ಮುದ್ರಿತ ಪ್ರತಿಗಳಲ್ಲಿ ಮಾಹಿತಿ ತುಂಬಿ ಅದರ ಫೋಟೋ ಮತ್ತು ಆನ್ ಲೈನ್ ಮೂಲಕ ನೋಂದಣಿ ಶುಲ್ಕವನ್ನು 9110687473 ಎಂಬ ಮೊಬೈಲ್ ನಂಬರಿಗೆ ಫೋನ್ ಪೇ ಮೂಲಕ ಪಾವತಿಸಿದ ಬಳಿಕ ರಶೀದಿಯ ಫೋಟೋವನ್ನು ಅದೇ ವಾಟ್ಸಪ್ ಸಂಖ್ಯೆಗೆ ಕಳುಹಿಸುವುದರ ಮೂಲಕ ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.

    ಹೆಚ್ಚಿನ ಮಾಹಿತಿಗಾಗಿ ಸಂಚಾಲಕರನ್ನು ಸಂಪರ್ಕಿಸಿ
    ವಿಕಾಸ ಹೊಸಮನಿ – 9110687473 ಮತ್ತು ಡಾ. ಸುಭಾಷ ಪಟ್ಟಾಜೆ – 9645081966
    ವಿಳಾಸ : ನಿಸರ್ಗ ಧಾಮ, 618/ಬಿ, ಕುಡ್ತಡ್ಕ, ಕುಡಾಲ್ ಮೇರ್ಕಳ ಪೋಸ್ಟ್, ಚೇವಾರ್, ವಯ ಉಪ್ಪಳ, ಕಾಸರಗೋಡು.

    Share. Facebook Twitter Pinterest LinkedIn Tumblr WhatsApp Email
    Previous Articleವರ್ಕಾಡಿ ಶ್ರೀ ರವಿ ಅಲೆವೂರಾಯರ ಷಷ್ಠ್ಯಬ್ದಿ ಪ್ರಯುಕ್ತ ‘ಅಭಿನಂದನಾ ಕಾರ್ಯಕ್ರಮ’ | ಫೆಬ್ರವರಿ 11
    Next Article ಎಕ್ಕಾರಿನಲ್ಲಿ ಭ್ರಾಮರಿ ಹವ್ಯಾಸಿ ಯಕ್ಷಗಾನ ಬಳಗದ ವಾರ್ಷಿಕೋತ್ಸವ
    roovari

    Add Comment Cancel Reply


    Related Posts

    ಸಂವಾಹಿನಿ ಹಳೆ ವಿದ್ಯಾರ್ಥಿ ಸಂಘದ ಅಡಿಯಲ್ಲಿ ‘ಯಾದೇ’ ಸಂಭ್ರಮಾಚರಣೆ

    May 13, 2025

    ಕೊಡಗು ಪತ್ರಿಕಾ ಭವನದಲ್ಲಿ ದಿ. ಬಿ.ಎಸ್. ಗೋಪಾಲಕೃಷ್ಣರವರ ಸ್ಮರಣಾರ್ಥ ದತ್ತಿನಿಧಿ ಪ್ರಶಸ್ತಿ ಪ್ರದಾನ | ಮೇ 15

    May 13, 2025

    ವಿವೇಕವಾಣಿ ಸರಣಿ ಉಪನ್ಯಾಸ ಕಾರ್ಯಕ್ರಮದ ನಲ್ವತ್ತೈದನೇ ಉಪನ್ಯಾಸ

    May 13, 2025

    ಗಣೇಶ ಪ್ರಸಾದಜೀಯವರ 9ನೆಯ ಕೃತಿ ‘ಕಾಂತೆ ಕವಿತೆ’ ಲೋಕಾರ್ಪಣೆ

    May 13, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.