Subscribe to Updates

    Get the latest creative news from FooBar about art, design and business.

    What's Hot

    ಸುಸಂಪನ್ನಗೊಂಡ ವೀಣಾವಾದಿನಿಯ ವಾರ್ಷಿಕೋತ್ಸವ ‘ವೇದ ನಾದ ಯೋಗ ತರಂಗಿಣಿ’

    January 1, 2026

    ಕವನ | ಅಮ್ಮ ನೆನಪಾಗುತ್ತಾಳೆ

    January 1, 2026

    ಬೆಂಗಳೂರಿನ ವೆಂಕಟಗಿರಿ ಸಭಾಂಗಣದಲ್ಲಿ ‘ಪಂಚಮ ಪದ’ ನಾಟಕ ಪ್ರದರ್ಶನ | ಜನವರಿ 02 

    January 1, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಾರ್ಕಳದ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನಲ್ಲಿ ‘ಸಾಹಿತ್ಯ-ಸಾಂಗತ್ಯ’ ಸರಣಿ ಕಾರ್ಯಕ್ರಮ -7
    Literature

    ಕಾರ್ಕಳದ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನಲ್ಲಿ ‘ಸಾಹಿತ್ಯ-ಸಾಂಗತ್ಯ’ ಸರಣಿ ಕಾರ್ಯಕ್ರಮ -7

    July 29, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಕಾರ್ಕಳ : ಕಾರ್ಕಳದ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜು ಆಯೋಜಿಸಿದ ‘ಸಾಹಿತ್ಯ-ಸಾಂಗತ್ಯ’ ಸರಣಿ ಕಾರ್ಯಕ್ರಮ -7 ದಿನಾಂಕ 17-07-2023ರಂದು ಕಾಲೇಜಿನ ನೇಸರ ಸಭಾಂಗಣದಲ್ಲಿ ನಡೆಯಿತು.
    ಉಪನ್ಯಾಸಕರಾಗಿ ಆಗಮಿಸಿದ ಕಳಸಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಶ್ರೀ ಎಚ್‌.ಎಂ.ನಾಗರಾಜ ರಾವ್‌ ಕಲ್ಕಟ್ಟೆ ಮಾತನಾಡುತ್ತಾ “ಯಶಸ್ಸಿಗಾಗಿ ನಿರೀಕ್ಷೆಗಳಿರುತ್ತವೆ. ನಿರೀಕ್ಷೆಯೇ ಪ್ರಧಾನವಾಗಬಾರದು. ಪ್ರತೀ ಸಲವೂ ಪ್ರಯತ್ನ ಪಡುವ ಮೂಲಕ ಯಶಸ್ಸು ಗಳಿಸಲು ಸಾಧ್ಯವಿದೆ. ಅಪಾರ ಪ್ರಯತ್ನಕ್ಕೆ ಅಪರಿಮಿತ ಫಲವಿದೆ. ಭಾಷೆ ಎಂಬುದು ಜ್ಞಾನದ ವಾಹಿನಿ. ಅದು ಜ್ಞಾನವೇ ಆಗಿರಬೇಕಿಲ್ಲ. ಸಂವಹನದಲ್ಲೂ ಸಾಹಿತ್ಯವಿದೆ. ಅದು ಹೃದಯದ ಭಾಷೆಯೇ ಆದಾಗ ಸರಳ ಸಾಹಿತ್ಯವಾಗುತ್ತದೆ. ಯಾವ ಮಾಧ್ಯಮದಲ್ಲಿ ಕಲಿತರೂ ಜ್ಞಾನಕ್ಕಾಗಿ ಕಲಿಯಬೇಕೇ ಹೊರತು ಹೊಟ್ಟೆಪಾಡಿಗಲ್ಲ. ಹಾಗೆಯೇ ಸಾಹಿತ್ಯವೆಂದರೆ ಮನಸ್ಸಿನ ತುಡಿತಗಳನ್ನು ಪ್ರತಿಬಿಂಬಿಸುವ ಮಾಧ್ಯಮ. ಸಂತೋಷಕ್ಕಾಗಿ ಸಾಹಿತ್ಯ ಓದಬೇಕು” ಎಂದು ಕರೆ ನೀಡಿದರು.
    ಈ ಸಂದರ್ಭದಲ್ಲಿ ಉಪನ್ಯಾಸಕ ಶ್ರೀ ಎಚ್‌.ಎಂ. ನಾಗರಾಜ ರಾವ್‌ ಕಲ್ಕಟ್ಟೆಯವರನ್ನು ಕಾಲೇಜಿನ ಪರವಾಗಿ ಗೌರವಿಸಲಾಯಿತು.   ಪ್ರಾಂಶುಪಾಲರಾದ ವಿದ್ವಾನ್‌ ಗಣಪತಿ ಭಟ್‌, ಸಂಸ್ಥಾಪಕರಾದ ಶ್ರೀ ಅಶ್ವತ್‌ ಎಸ್‌.ಎಲ್, ಗಣಪತಿ ಭಟ್‌ ಕೆ.ಎಸ್‌. ಹಾಗೂ ಉಪನ್ಯಾಸಕ ವರ್ಗದವರು ಉಪಸ್ಥಿತರಿದ್ದರು. ಅಶ್ವತ್‌ ಎಸ್.ಎಲ್‌ ಪ್ರಸ್ತಾವನೆಗೈದು, ಉಪನ್ಯಾಸಕಿ ಪ್ರಿಯಾಂಕ ಅತಿಥಿಗಳನ್ನು ಪರಿಚಯಿಸಿ, ಉಪನ್ಯಾಸಕ ರಾಮಕೃಷ್ಣ ಹೆಗಡೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleನಾಟ್ಯ ಗುರು ರಾಜಶ್ರೀ ಉಳ್ಳಾಲ ತಂಡದಿಂದ ಶ್ರೀಲಂಕಾದಲ್ಲಿ ನೃತ್ಯ ಕಾರ್ಯಕ್ರಮ
    Next Article ಬಂಟ್ವಾಳದಲ್ಲಿ ಜನತಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚುಟುಕು ಸಾಹಿತ್ಯ ರಚನೆ ತರಬೇತಿ
    roovari

    Add Comment Cancel Reply


    Related Posts

    ಕವನ | ಅಮ್ಮ ನೆನಪಾಗುತ್ತಾಳೆ

    January 1, 2026

    ರಾಯಚೂರು ಕನ್ನಡ ಭವನದಲ್ಲಿ ‘ಮಹಿಳಾ ಪರಿಷತ್’ ಇದರ ಉದ್ಘಾಟನಾ ಕಾರ್ಯಕ್ರಮ | ಜನವರಿ 04

    January 1, 2026

    ಜಾನಪದ ಅಕಾಡೆಮಿಯ ಜಾನಪದ ತಜ್ಞ, ಗೌರವ ಪ್ರಶಸ್ತಿ ಮತ್ತು ಪುಸ್ತಕ ಬಹುಮಾನ ಪ್ರಕಟ

    January 1, 2026

    ಪುಸ್ತಕ ವಿಮರ್ಶೆ | ಮಾಲತಿ ಪಟ್ಟಣಶೆಟ್ಟಿಯವರ ‘ಮೌನ ಕರಗುವ ಹೊತ್ತು’

    December 31, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.