Subscribe to Updates

    Get the latest creative news from FooBar about art, design and business.

    What's Hot

    ಭರವಸೆಯ ಕಲಾವಿದೆ ಕೀರ್ತನಾ ಶಶಾಂಕ್ ರಂಗಪ್ರವೇಶ | ಜನವರಿ 10

    January 7, 2026

    ಕದ್ರಿ ಪಾರ್ಕ್ ನಲ್ಲಿ ‘ಕಲಾಪರ್ಬ’ ಚಿತ್ರ-ಶಿಲ್ಪ-ಸಾಂಸ್ಕೃತಿಕ ಮೇಳ | ಜನವರಿ 09ರಿಂದ 11ರವರೆಗೆ

    January 7, 2026

    ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ | ಜನವರಿ 07

    January 7, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ನಾರಾಯಣ ಗುರು ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಸಾಹಿತ್ಯ ಅಭಿರುಚಿ’ ಕಾರ್ಯಕ್ರಮ
    Literature

    ನಾರಾಯಣ ಗುರು ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಸಾಹಿತ್ಯ ಅಭಿರುಚಿ’ ಕಾರ್ಯಕ್ರಮ

    September 2, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಅಮೃತ ಪ್ರಕಾಶ ಪತ್ರಿಕೆ ಹಾಗೂ ನಾರಾಯಣ ಗುರು ಸಮೂಹ ಶಿಕ್ಷಣ ಸಂಸ್ಥೆ ಕಾಟಿಪಳ್ಳ ಇವರ ಸಹಯೋಗದಲ್ಲಿ 102ನೇ ‘ಸಾಹಿತ್ಯ ಅಭಿರುಚಿ’ ಕಾರ್ಯಕ್ರಮವು ದಿನಾಂಕ 31 ಆಗಸ್ಟ್ 2024ರಂದು ಶ್ರೀ ನಾರಾಯಣ ಗುರು ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು.

    ಕಾರ್ಯಕ್ರಮವನ್ನು ಸಾಹಿತಿ, ಜನಪದ ವಿದ್ವಾಂಸ ಸಂಸ್ಥೆಯ ಆಡಳಿತ ಅಧಿಕಾರಿ ಡಾ. ಗಣೇಶ್ ಅಮೀನ್ ಸಂಕಮಾರ್ ಉದ್ಘಾಟಿಸಿ ಮಾತನಾಡಿ ಮಕ್ಕಳಲ್ಲಿ ಸಾಹಿತ್ಯದ ಅಭಿರುಚಿಗಳು ಬೆಳೆಯಲು ಮೈಗೂಡಿಸಿಕೊಳ್ಳಬೇಕಾದ ಕೆಲವು ವಿಚಾರಗಳನ್ನು ತಿಳಿಸಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಪಿ. ದಯಾಕರ್ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಮಾತನಾಡಿದ ಗೋವಿಂದ ದಾಸ ಕಾಲೇಜು ಸುರತ್ಕಲ್ ಇಲ್ಲಿನ ಪ್ರಾಂಶುಪಾಲರಾದ ಪ್ರೊ. ಕೃಷ್ಣಮೂರ್ತಿ ಮಾತನಾಡಿ “ವಿದ್ಯಾರ್ಥಿಗಳು ತಮ್ಮ ಎಳವೆಯಿಂದಲೇ ಸಾಹಿತ್ಯದ ಬಗ್ಗೆ ಒಲವು ಮೂಡಿಸಿಕೊಳ್ಳಬೇಕು” ಎಂದರು. ಇನ್ನೋರ್ವ ಮುಖ್ಯ ಅತಿಥಿ ಅತ್ತಾವರ ಮಧುಸೂದನ ಕುಶೆ ಶಾಲೆಯ ಪ್ರಾಂಶುಪಾಲರಾದ ಬಿಂದುಸಾರ ಶೆಟ್ಟಿ ಮಾತನಾಡಿ “ಸಾಹಿತ್ಯಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳು ಶಾಲಾ ಮಟ್ಟದಲ್ಲಿ ನಡೆದಾಗ ಮಕ್ಕಳು ಸಾಹಿತ್ಯದ ಸಾರ ತಿಳಿಯಲು ಸಾಧ್ಯವಾಗುತ್ತದೆ” ಎಂದರು. ನಂತರ ಸಂಪನ್ಮೂಲ ವ್ಯಕ್ತಿ ಕೆನರಾ ಕಾಲೇಜಿನ ಉಪನ್ಯಾಸಕರಾದ ಶೈಲಜಾ ಪುದುಕೋಳಿ ಮಾತನಾಡಿ “ಮಕ್ಕಳು ಕಥೆಗಳನ್ನು ಓದುವ ಮತ್ತು ಬರೆಯುವ ಅಭ್ಯಾಸ ಮಾಡಬೇಕು” ಎಂದು ತಿಳಿಸಿದರು.

    ಸಾಹಿತಿ ರವೀಂದ್ರ ಸಣ್ಣಕ್ಕಿಬೈಲು, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಶ್ರೀ ಮಹಾವೀರ್ ಜೈನ್ ಉಪಸ್ಥಿತರಿದ್ದರು. ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ಇದರ ಸಂಪಾದಕಿ ಮಾಲತಿ ಶೆಟ್ಟಿ ಮಾಣೂರು ಸ್ವಾಗತಿಸಿ, ಸುರತ್ಕಲ್ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಶ್ರೀಮತಿ ಗುಣವತಿ ರಮೇಶ್ ವಂದಿಸಿ, ಶ್ರೀಮತಿ ಅಕ್ಷತಾ ನಿರೂಪಿಸಿದರು. ಶಿಕ್ಷಕಿಯರಾದ ಶ್ರೀಮತಿ ಮಂಗಳ ಮತ್ತು ಶ್ರೀಮತಿ ಮಂಜುಳಾ ಸಹಕರಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ‘ಕೊಳಲೆ’ ಪುಸ್ತಕ ಲೋಕಾರ್ಪಣೆ ಸಮಾರಂಭ | ಸೆಪ್ಟೆಂಬರ್ 4
    Next Article ರಂಗಕಲಾವಿದ ಬಸವರಾಜ ಬೆಂಗೇರಿಯವರಿಗೆ ‘ಕಂಡ್ಲೂರು ಗಿರಿಜಮ್ಮ ಮತ್ತು ನರಸಿಂಹ ಜೋಗಿ ದತ್ತಿ ಪ್ರಶಸ್ತಿ’
    roovari

    Comments are closed.

    Related Posts

    ಕದ್ರಿ ಪಾರ್ಕ್ ನಲ್ಲಿ ‘ಕಲಾಪರ್ಬ’ ಚಿತ್ರ-ಶಿಲ್ಪ-ಸಾಂಸ್ಕೃತಿಕ ಮೇಳ | ಜನವರಿ 09ರಿಂದ 11ರವರೆಗೆ

    January 7, 2026

    ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ | ಜನವರಿ 07

    January 7, 2026

    ವಿಜಯಪುರದಲ್ಲಿ ಶ್ರೀ ಕುಮಾರವ್ಯಾಸ ಭಾರತ ವೇದಿಕೆ ವತಿಯಿಂದ ‘ಕುವೆಂಪು ಜಯಂತಿ’

    January 6, 2026

    ಮಾಂಡ್‌ ಸೊಭಾಣ್ ತಿಂಗಳ ವೇದಿಕೆ ರಜತ ವರ್ಷಕ್ಕೆ ಚಾಲನೆ

    January 6, 2026

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.