Subscribe to Updates

    Get the latest creative news from FooBar about art, design and business.

    What's Hot

    ಹಂಗಾರಕಟ್ಟೆ ಯಕ್ಷಗಾನ ಕಲಾ ಕೇಂದ್ರದಲ್ಲಿ ‘ದಶಮ ಸಂಸ್ಮರಣೆ’ | ಸೆಪ್ಟೆಂಬರ್ 14

    September 10, 2025

    ಬೆಂಗಳೂರಿನ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ ‘ಕನ್ನಡ ನಾಟಕೋತ್ಸವ’ | ಸೆಪ್ಟೆಂಬರ್ 13

    September 10, 2025

    ಶ್ರೀ ಎಡನೀರು ಮಠದಲ್ಲಿ ವೇಣುವಾದನ ಮತ್ತು ಯಕ್ಷಗಾನ ಪ್ರದರ್ಶನ | ಸೆಪ್ಟೆಂಬರ್ 11

    September 10, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಅಮೃತ ಪ್ರಕಾಶ ಪತ್ರಿಕೆಯಿಂದ ರಥಬೀದಿಯಲ್ಲಿ 114ನೇ ‘ಸಾಹಿತ್ಯ ಅಭಿರುಚಿ ಕಾರ್ಯಕ್ರಮ’
    Literature

    ಅಮೃತ ಪ್ರಕಾಶ ಪತ್ರಿಕೆಯಿಂದ ರಥಬೀದಿಯಲ್ಲಿ 114ನೇ ‘ಸಾಹಿತ್ಯ ಅಭಿರುಚಿ ಕಾರ್ಯಕ್ರಮ’

    September 10, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ಹಾಗೂ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ರಥಬೀದಿ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ 114ನೇ ‘ಸಾಹಿತ್ಯ ಅಭಿರುಚಿ ಕಾರ್ಯಕ್ರಮ’ವು ದಿನಾಂಕ 09 ಸೆಪ್ಟೆಂಬರ್ 2025ರಂದು ಮಂಗಳೂರು ರಥಬೀದಿಯಲ್ಲಿರುವ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಹಿರಿಯ ಉಪನ್ಯಾಸಕರಾದ ಶ್ರೀ ಶ್ರೀನಿವಾಸ ಕೆ.ಟಿ. ಅವರು “ಪ್ರಥಮ ಕನ್ನಡ ಪತ್ರಿಕೆ ಬಿಡುಗಡೆಯಾದದ್ದು ಮಂಗಳೂರಿನಲ್ಲಿ, ಅನೇಕ ಕವಿಗಳ ತವರೂರು ಮಂಗಳೂರು ಆದರೆ ಇತ್ತೀಚಿಗೆ ಸಾಹಿತ್ಯದ ಕಡೆಗೆ ಯುವ ಪೀಳಿಗೆಯ ಒಲವು ಕಡಿಮೆಯಾಗಿದ್ದು, ಬರೆಯುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕೆಂದು, ಸಾಹಿತ್ಯವನ್ನು ಸಮೃದ್ಧವಾಗಿ ಬೆಳೆಸಬೇಕು” ಎಂದರು.

    ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಮೈ ಅಂತರಾತ್ಮ ಮ್ಯಾನೇಜ್ಮೆಂಟ್ ಕನ್ಸಲ್ಟೆಂಟ್ ಸಂಸ್ಥಾಪಕರು ಹಾಗೂ ಅಂಕಣಕಾರರಾಗಿರುವ ಶ್ರೀ ವೇಣುಶರ್ಮ “ಆಧುನಿಕ ಯುಗದಲ್ಲಿ ತಂತ್ರಜ್ಞಾನದ ಬಳಕೆ ಅತಿ ಅಗತ್ಯ ಆದರೆ ನಾವು ಅವಶ್ಯಕತೆ ಇದ್ದಷ್ಟು ಬಳಸಬೇಕು. ಮೊಬೈಲ್ ಬಳಕೆಯಿಂದ ಅನೇಕ ಅನುಕೂಲಗಳಿವೆ ಆದರೆ ನಾವು ಬೇಕಾದ ಜ್ಞಾನವನ್ನು ವೃದ್ಧಿಗೊಳಿಸದೆ ಅನವಶ್ಯಕ ವಿಚಾರಗಳಿಗೆ ಗಮನಕೊಟ್ಟು ಬದುಕಿನ ರಸಗಳಿಗೆ ಹಾಗೂ ಅಭಿವೃದ್ಧಿಯನ್ನು ಕಳೆದುಕೊಳ್ಳುತ್ತಿದ್ದೇವೆ. ವಿದ್ಯಾರ್ಥಿಗಳು ಓದುವ ಬರೆಯುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು” ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

    ಪಾದುವಾ ಕಾಲೇಜಿನ ಉಪನ್ಯಾಸಕಿ ಹಾಗೂ ಲೇಖಕಿ ಶ್ರೀಮತಿ ಅಕ್ಷಯ ಆರ್. ಶೆಟ್ಟಿಯವರು “ದಿನಪತ್ರಿಕೆ, ವಾರಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಪ್ರಾರಂಭದಲ್ಲಿ ನಿಮ್ಮ ತಿಳುವಳಿಕೆಗೆ ಬಂದಿರುವ ವಿಷಯಗಳನ್ನು ಅಕ್ಷರ ರೂಪದಲ್ಲಿ ಬರೆಯಿರಿ. ಅನೇಕ ಸಲ ಬರೆದು ಓದಿದಾಗ ಶಬ್ದಗಳ ಶ್ರೀಮಂತಿಕೆ ಹಾಗೂ ಸೌಂದರ್ಯ ನಿಮ್ಮ ಅರಿವಿಗೆ ಬರುತ್ತದೆ” ಎಂದು ತಿಳಿಸಿದರು.

    ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ ಊರ್ವ ಸ್ಟೋರ್ (ರಿ.) ಮಂಗಳೂರು ಇದರ ಅಧ್ಯಕ್ಷರಾಗಿರುವ ಶ್ರೀಮತಿ ಚಂಚಲ ತೇಜೋಮಯರವರು “ಮಕ್ಕಳಿಗೆ ಕಲಿಕೆ ಹಾಗೂ ವೃತ್ತಿಯೊಂದಿಗೆ ಹವ್ಯಾಸಗಳು ಬೇಕು. ಸಮಯವನ್ನು ವ್ಯರ್ಥ ಮಾಡದೆ ಸದುಪಯೋಗ ಮಾಡಬೇಕು. ಸ್ಪರ್ಧಾತ್ಮಕ ಯುಗದಲ್ಲಿ ನಾವು ನಮ್ಮ ಕೌಶಲ್ಯದಿಂದ ಬದುಕಬೇಕು” ಎಂದು ತಿಳಿಸಿದರು. ಕಾರ್ಯಕ್ರಮಕ್ಕೆ ಅಮೃತ ಪ್ರಕಾಶ ಪತ್ರಿಕೆಯ ಸಂಪಾದಕಿ ಶ್ರೀಮತಿ ಮಾಲತಿ ಶೆಟ್ಟಿ ಮಾಣೂರವರು ಸ್ವಾಗತಿಸಿ, ಶಿಕ್ಷಕಿ ಲೇಖಕಿ ಸುರೇಖಾ ಯಾಳವಾರ ಅವರು ಕಾರ್ಯಕ್ರಮ ನಿರೂಪಿಸಿ, ಧನ್ಯವಾದ ಸಮರ್ಪಿಸಿದರು.

    baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleದಿ. ಟಿ. ಶ್ರೀನಿವಾಸ ಸ್ಮರಣಾರ್ಥ ‘ಪಿ.ಕೆ. ನಾರಾಯಣ ಸಾಹಿತ್ಯ ದತ್ತಿ ಪ್ರಶಸ್ತಿ’ಗೆ ಆಯ್ಕೆ
    Next Article ನೃತ್ಯ ವಿಮರ್ಶೆ | ಅನನ್ಯ ಪ್ರತಿಭೆ ಆರಾಧನಾಳ ಮನಮೋಹಕ ನೃತ್ಯಸೊಬಗು
    roovari

    Add Comment Cancel Reply


    Related Posts

    ಹಂಗಾರಕಟ್ಟೆ ಯಕ್ಷಗಾನ ಕಲಾ ಕೇಂದ್ರದಲ್ಲಿ ‘ದಶಮ ಸಂಸ್ಮರಣೆ’ | ಸೆಪ್ಟೆಂಬರ್ 14

    September 10, 2025

    ಬೆಂಗಳೂರಿನ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ ‘ಕನ್ನಡ ನಾಟಕೋತ್ಸವ’ | ಸೆಪ್ಟೆಂಬರ್ 13

    September 10, 2025

    ಶ್ರೀ ಎಡನೀರು ಮಠದಲ್ಲಿ ವೇಣುವಾದನ ಮತ್ತು ಯಕ್ಷಗಾನ ಪ್ರದರ್ಶನ | ಸೆಪ್ಟೆಂಬರ್ 11

    September 10, 2025

    ನೃತ್ಯ ವಿಮರ್ಶೆ | ಅನನ್ಯ ಪ್ರತಿಭೆ ಆರಾಧನಾಳ ಮನಮೋಹಕ ನೃತ್ಯಸೊಬಗು

    September 10, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.