Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ಪುರಭವನದಲ್ಲಿ ಪ್ರಶಸ್ತಿ ಪ್ರದಾನ, ನಾಟಕ ಪ್ರದರ್ಶನ ಮತ್ತು ವಿಚಾರ ಮಂಥನ ಕಾರ್ಯಕ್ರಮ | ಮೇ 11 

    May 10, 2025

    ಬೆಂಗಳೂರಿನ ಶ್ರೀ ವಿನಾಯಕ ದೇವಸ್ಥಾನದಲ್ಲಿ ‘ಸುದರ್ಶನ ಗರ್ವಭಂಗ’ ಮತ್ತು ‘ಕುಶ ಲವ ಕಾಳಗ’ ಪ್ರದರ್ಶನ | ಮೇ 17

    May 10, 2025

    ಕಟೀಲಿನಲ್ಲಿ ‘ತುಳುನಾಡು ಮತ್ತು ಕಳರಿ’ ವಿಚಾರಗೋಷ್ಠಿ ಮತ್ತು ಚರ್ಚಾಗೋಷ್ಠಿ | ಮೇ 24

    May 10, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸಾಹಿತ್ಯ ಕೂಟ ಮಂಗಳೂರು ತಂಡದಿಂದ ‘ಸಾಹಿತ್ಯ ಕಲರವ’ ಕಾರ್ಯಕ್ರಮ
    Literature

    ಸಾಹಿತ್ಯ ಕೂಟ ಮಂಗಳೂರು ತಂಡದಿಂದ ‘ಸಾಹಿತ್ಯ ಕಲರವ’ ಕಾರ್ಯಕ್ರಮ

    August 13, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಸಾಹಿತ್ಯ ಕೂಟ ಮಂಗಳೂರು ಇವರ ಆಶ್ರಯದಲ್ಲಿ ಪುತ್ತೂರಿನ ಬಾಲ್ನಾಡಿನ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ದಿನಾಂಕ 11 ಆಗಸ್ಟ್ 2024ರಂದು ‘ಸಾಹಿತ್ಯ ಕಲರವ’ ಕಾರ್ಯಕ್ರಮ ನಡೆಯಿತು.

    ಈ ಕಾರ್ಯಕ್ರಮದ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಖ್ಯಾತ ಕವಿ, ಲೇಖಕ ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಇವರು ‘ಕಾವ್ಯ ಒಂದು ರಸಾನುಭವ’ ಎನ್ನುವ ವಿಷಯದ ಕುರಿತು ಉಪನ್ಯಾಸ ನೀಡಿದರು. “ಕಾವ್ಯದ ಶಕ್ತಿ ಕವಿಯಲ್ಲಿ ಅಡಕವಾಗಿರುತ್ತದೆ. ಅದು ಆತನ ಕವಿತ್ವವನ್ನು ಪ್ರಕಟಗೊಳಿಸುತ್ತದೆ. ವಿದ್ಯಾರ್ಥಿಗಳು ಬರೆಯುವ ಕಡೆ ಹೆಚ್ಚಿನ ಗಮನ ವಹಿಸಬೇಕು. ಅದುವೇ ಒಂದು ವಿಶೇಷವಾದ ರಸಾನುಭವ” ಎಂದು ಹೇಳಿದರು.

    ಹವ್ಯಾಸಿ ಬರಹಗಾರ ಮತ್ತು ಎಸ್.ವಿ.ಎಸ್. ಕಾಲೇಜಿನ ಪ್ರಾಧ್ಯಾಪಕ ಕಿಟ್ಟು ರಾಮಕುಂಜ ‘ಮಕ್ಕಳಲ್ಲಿ ಸಾಹಿತ್ಯ ಅಭಿರುಚಿ ಏಕಿರಬೇಕು’ ಎನ್ನುವ ವಿಷಯದ ಕುರಿತು ಉಪನ್ಯಾಸ ನೀಡುತ್ತಾ, “ಸಾಹಿತ್ಯಾಸಕ್ತಿ ವಿದ್ಯಾರ್ಥಿಗಳಲ್ಲಿ ಹೆಚ್ಚು ಜ್ಞಾನ ಪಡೆಯುವುದಕ್ಕೆ ಸಹಕಾರಿಯಾಗುತ್ತದೆ. ಜ್ಞಾನಾರ್ಜನೆಗೆ ಸಾಹಿತ್ಯವೇ ಒಂದು ಪ್ರಬಲವಾದ ಶಕ್ತಿ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸಾಹಿತ್ಯ ಸೃಜನೆಯತ್ತ ಮನಸ್ಸು ಮಾಡಬೇಕು. ಇಂತಹ ಕಾರ್ಯಕ್ರಮದ ಮುಖಾಂತರ ಮಕ್ಕಳಲ್ಲಿ ಸಾಹಿತ್ಯದ ಕಡೆ ಒಲವು ಮತ್ತಷ್ಟು ಮೂಡುವಂತೆ ಮಾಡಬೇಕು. ಮಕ್ಕಳಲ್ಲಿ ಸಾಹಿತ್ಯದ ಆಸಕ್ತಿ ಮೂಡಬೇಕು ಹಾಗೂ ಒಳ್ಳೆಯ ಬರಹಗಾರರನ್ನಾಗಿ ಮಾಡಬೇಕು ಎನ್ನುವ ಉದ್ದೇಶದೊಂದಿಗೆ ಈ ಸಾಹಿತ್ಯಕೂಟ ಮಂಗಳೂರು ತಂಡ ಇಂತಹ ಶಾಲೆಗಳಲ್ಲಿ ಕಾರ್ಯಕ್ರಮವನ್ನು ಮಾಡುತ್ತಿದೆ. ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು” ಎಂದು ನುಡಿದರು.

    ಈ ಕಾರ್ಯಕ್ರಮದಲ್ಲಿ ಸಾಹಿತ್ಯ ಕೂಟ ಮಂಗಳೂರು ತಂಡದ ಸದಸ್ಯಾರುಗಳಾದ ರಂಜಿತ್ ರೈ, ರೇಷ್ಮಾ, ಶ್ರದ್ಧಾ, ಜಿತೇಶ್, ಸುಕೀರ್ತ್, ವಿದ್ಯಾರ್ಥಿಗಳು, ಶಿಕ್ಷಕರು ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleತೆಕ್ಕಟ್ಟೆ ಹಯಗ್ರೀವದಲ್ಲಿ ಕುಂದಾಪುರ ಕನ್ನಡ ದಿನಾಚರಣೆ ಕಾರ್ಯಕ್ರಮ
    Next Article ವಿವೇಕಾನಂದ ಪದವಿಪೂರ್ವ ವಿದ್ಯಾಲಯದಲ್ಲಿ ‘ವಿವೇಕ ಜಾಗೃತಿ’ – ಉಪನ್ಯಾಸ ಕಾರ್ಯಕ್ರಮ | ಆಗಸ್ಟ್ 14
    roovari

    Comments are closed.

    Related Posts

    ಮಂಗಳೂರಿನ ಪುರಭವನದಲ್ಲಿ ಪ್ರಶಸ್ತಿ ಪ್ರದಾನ, ನಾಟಕ ಪ್ರದರ್ಶನ ಮತ್ತು ವಿಚಾರ ಮಂಥನ ಕಾರ್ಯಕ್ರಮ | ಮೇ 11 

    May 10, 2025

    ಕಟೀಲಿನಲ್ಲಿ ‘ತುಳುನಾಡು ಮತ್ತು ಕಳರಿ’ ವಿಚಾರಗೋಷ್ಠಿ ಮತ್ತು ಚರ್ಚಾಗೋಷ್ಠಿ | ಮೇ 24

    May 10, 2025

    ಮಾಣಿಕ್ಯ ಪ್ರಕಾಶನದ 2025ನೇ ಸಾಲಿನ ರಾಜ್ಯಮಟ್ಟದ ವಿವಿಧ ದತ್ತಿ ಪ್ರಶಸ್ತಿಗಳಿಗೆ ಕೃತಿಗಳ ಆಹ್ವಾನ

    May 10, 2025

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.