Subscribe to Updates

    Get the latest creative news from FooBar about art, design and business.

    What's Hot

    ಸಾಗರ ತಾಲೂಕಿನಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ | ಜೂನ್ 09

    June 3, 2025

    ಬೆಂಗಳೂರಿನ ಶ್ರೀ ಸಿ. ಅಶ್ವಥ್ ಕಲಾ ಭವನದಲ್ಲಿ ‘ಕಾವ್ಯ ಕಾಮಧೇನು ಎಚ್.ಎಸ್.ವಿ.’ | ಜೂನ್ 08

    June 3, 2025

    ಸಮಾರೋಪಗೊಂಡ ಯಕ್ಷಪಕ್ಷ – ರಜತ ಸರಯೂ ಕಾರ್ಯಕ್ರಮ

    June 3, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಸಾಹಿತ್ಯದಲ್ಲಿ ಹಾಸ್ಯ’ – ಉಪನ್ಯಾಸ ಕಾರ್ಯಕ್ರಮ
    Literature

    ‘ಸಾಹಿತ್ಯದಲ್ಲಿ ಹಾಸ್ಯ’ – ಉಪನ್ಯಾಸ ಕಾರ್ಯಕ್ರಮ

    May 2, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಶ್ರೀ ಗೋಕರ್ಣನಾಥೇಶ್ವರ ಪದವಿ ಕಾಲೇಜು, ಗಾಂಧಿನಗರ, ಮಂಗಳೂರು ಇದರ ಸಭಾಂಗಣದಲ್ಲಿ 2023 ಏಪ್ರಿಲ್ 27ರಂದು ‘ಸಾಹಿತ್ಯದಲ್ಲಿ ಹಾಸ್ಯ’ ಎಂಬ ವಿಷಯ ಕುರಿತು ಉಪನ್ಯಾಸ ಕಾರ್ಯಕ್ರಮವು ಜರುಗಿತು. ಈ ಕಾರ್ಯಕ್ರಮದಲ್ಲಿ ಕರ್ನಾಟಕ ಬ್ಯಾಂಕ್ ಲಿಮಿಟೆಡ್ ಇದರ ನಿವೃತ್ತ ಹಿರಿಯ ಅಧಿಕಾರಿಯಾದ ಶ್ರೀ ಯು. ರಾಮರಾವ್ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ, “ಜೀವನದಲ್ಲಿ ಹಾಸ್ಯ ಮತ್ತು ಚಪ್ಪಾಳೆ ತಟ್ಟುವುದರಿಂದ ನಮ್ಮ ಆರೋಗ್ಯದ ಸಮಸ್ಯೆ ನಿವಾರಣೆಯಾಗುತ್ತದೆ. ಡಿ.ವಿ.ಜಿ, ದಿನಕರ ದೇಸಾಯಿ ಮುಂತಾದ ಹಾಸ್ಯ ಬರಹಗಾರರ ಸಾಹಿತ್ಯ ಕೃತಿಗಳನ್ನು ವಿದ್ಯಾರ್ಥಿಗಳು ಓದಬೇಕು. ನಾವು ಹಾಸ್ಯ ಮಾಡಬೇಕು, ಆದರೆ ಇನ್ನೊಬ್ಬರಿಗೆ ಅಪಹಾಸ್ಯ ಮಾಡಬಾರದು. ಹಾಸ್ಯವಿರುವುದು ಮನಸ್ಸಿನ ಒತ್ತಡ ನಿವಾರಣೆಗಾಗಿ” ಎಂದರು.

    ಕಾಲೇಜಿನ ಪ್ರಾಂಶುಪಾಲರಾದ ಡಾ. ಆಶಾಲತಾ ಸುವರ್ಣ ಈ ಕಾರ್ಯಕ್ರಮದ ಅಧ್ಯಕ್ಷ ಸ್ಥಾನದಿಂದ ಮಾತನಾಡಿ “ನಾವಿಂದು ಧಾವಂತದ ಯುಗದಲ್ಲಿ ಬದುಕುತ್ತಿದ್ದೇವೆ. ಹಾಸ್ಯವು ವ್ಯಕ್ತಿಯ ಅನುಭವದಿಂದ ಬರುತ್ತದೆ. ನಮಗೆ ಜ್ಞಾನ ದಾಹ ಇರಬೇಕು. ಪ್ರಸ್ತುತ ನಾವಿರುವ ಸಮಾಜವನ್ನು ಅರ್ಥ ಮಾಡಿಕೊಳ್ಳಬೇಕು” ಎಂದರು. ಕಾಲೇಜಿನ ಡೀನ್ ಡಾ. ಉಮ್ಮಪ್ಪ ಪೂಜಾರಿ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು “ನಾವಿಂದು ಹಾಸ್ಯವನ್ನು ಮರೆತು ಚಿಂತೆಯಲ್ಲಿ ದಿನ ಕಳೆಯುವಂತಾಗಿದೆ. ಜೀವನದಲ್ಲಿ ಹಾಸ್ಯವಿರಬೇಕು. ಸಮಸ್ಯೆಗಳನ್ನು ನಿವಾರಿಸುವ ಶಕ್ತಿ ಹಾಸ್ಯಕ್ಕಿದೆ” ಎಂದರು.

    ಈ ಕಾರ್ಯಕ್ರಮದಲ್ಲಿ ಕನ್ನಡ ಸಂಘದ ನಾಯಕ ಮತ್ತು ನಾಯಕಿಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು ಹಾಗೂ ಎಲ್ಲಾ ವಿಭಾಗದ ಉಪನ್ಯಾಸಕರು ಮತ್ತು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಭಾಗವಹಿಸಿದ್ದರು. ಕನ್ನಡ ಉಪನ್ಯಾಸಕರಾದ ಶ್ರೀ ವಸಂತ್ ಎಲ್ಲರನ್ನು ಸ್ವಾಗತಿಸಿ, ದ್ವಿತೀಯ ಕಲಾ ವಿಭಾಗದ ಕುಮಾರಿ ವೈಷ್ಣವಿ ಕಾರ್ಯಕ್ರಮ ನಿರೂಪಿಸಿ ಹಾಗೂ ಕನ್ನಡ ಸಂಘದ ನಾಯಕಿ ಕುಮಾರಿ ಜ್ಯೋತಿ ವಂದನಾರ್ಪಣೆ ಗೈದರು.

    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀ ಭಾಸ್ಕರ ಬಾರ್ಯರಿಗೆ ‘ಅಕ್ಷಯ ತೃತೀಯ ಗೌರವ ಪ್ರಶಸ್ತಿ’
    Next Article ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದಲ್ಲಿ “ಸುಧನ್ವ ಮೋಕ್ಷ”
    roovari

    Add Comment Cancel Reply


    Related Posts

    ಬೆಂಗಳೂರಿನ ಶ್ರೀ ಸಿ. ಅಶ್ವಥ್ ಕಲಾ ಭವನದಲ್ಲಿ ‘ಕಾವ್ಯ ಕಾಮಧೇನು ಎಚ್.ಎಸ್.ವಿ.’ | ಜೂನ್ 08

    June 3, 2025

    ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಶತ ಸಂಭ್ರಮ’ ಮತ್ತು ‘ನುಡಿ ನಮನ’ ಕಾರ್ಯಕ್ರಮ | ಜೂನ್ 08

    June 3, 2025

    ಶ್ರೀಮತಿ ಬಾನು ಮುಷ್ತಾಕ್ ಹಾಗೂ ಶ್ರೀಮತಿ ದೀಪಾ ಭಾಸ್ತಿ ಇವರುಗಳಿಗೆ ಗೌರವ ಸನ್ಮಾನ | ಜೂನ್ 04

    June 3, 2025

    ಶಿವಮೊಗ್ಗದ ಕ.ಸಾ.ಪ. ಜಿಲ್ಲಾ ಸಮಿತಿ ವತಿಯಿಂದ ‘ಶ್ರೀ ಕೃಷ್ಣರಾಜ ಒಡೆಯರ್ ಜನ್ಮದಿನಾಚರಣೆ’ | ಜೂನ್ 04

    June 3, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.