Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರಿನ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದಲ್ಲಿ ‘ಸಮರ್ಪಣಂ ಕಲೋತ್ಸವ 2025’ | ಏಪ್ರಿಲ್ 03
    Awards

    ಮಂಗಳೂರಿನ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದಲ್ಲಿ ‘ಸಮರ್ಪಣಂ ಕಲೋತ್ಸವ 2025’ | ಏಪ್ರಿಲ್ 03

    March 27, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನ ಇದರ ಆಶ್ರಯದಲ್ಲಿ ವಿಶ್ವಕರ್ಮ ಕಲಾ ಪರಿಷತ್ ಮಂಗಳೂರು ಹಮ್ಮಿಕೊಂಡಿರುವ ‘ಸಮರ್ಪಣಂ ಕಲೋತ್ಸವ 2025’ವನ್ನು ದಿನಾಂಕ 03 ಏಪ್ರಿಲ್ 2025ರಂದು ಪೂರ್ವಾಹ್ನ 10-00 ಗಂಟೆಗೆ ಮಂಗಳೂರಿನ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಆವರಣದಲ್ಲಿ ಆಯೋಜಿಸಲಾಗಿದೆ.

    ಬೆಳಿಗ್ಗೆ 10-00 ಗಂಟೆಗೆ ವಿಶ್ವಕರ್ಮ ಕಲಾ ಪರಿಷತ್ ಸದಸ್ಯರಿಂದ ಸಾಂಸ್ಕೃತಿಕ ಸೌರಭ ಪ್ರಸ್ತುತಗೊಳ್ಳಲಿದೆ. ‘ಸಮರ್ಪಣಂ ಕಲೋತ್ಸವ’ದ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಮಜ್ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಪೀಠಾಧೀಶ್ವರ ಪರಮ ಪೂಜ್ಯ ಜಗದ್ಗುರು ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರು ದೀಪ ಪ್ರಜ್ವಲನೆ ಮಾಡಿ ನೆರವೇರಿಸಲಿರುವರು. ಇದೇ ಸಂದರ್ಭದಲ್ಲಿ ಪ್ರಾಚೀನ ವಿಶ್ವಬ್ರಾಹ್ಮಣ ಪರಂಪರೆಯ ಸಮರ್ಥ ರಾಯಭಾರಿ ಸಂಶೋಧಕ ಲೇಖಕ ಮೇರು ವಿದ್ವಾಂಸ ಡಾ. ಜಿ. ಜ್ಞಾನಾನಂದ ಇವರಿಗೆ ‘ಭೌವನ ವಿಶ್ವಕರ್ಮ ಕಲಾ ಪ್ರಶಸ್ತಿ’ ಪ್ರದಾನ ಹಾಗೂ ಗೌರವಾಭಿನಂದನೆ ನಡೆಯಲಿದೆ. ಬೆಂಗಳೂರಿನ ಶ್ರೀ ಭ್ರಮರಿ ಕ್ರಿಯೇಷನ್ಸ್ ಪ್ರೈವೇಟ್ ಲಿ. ಇದರ ವ್ಯವಸ್ಥಾಪಕ ನಿರ್ದೇಶಕರಾದ ಹರೀಶ್ಚಂದ್ರ ಎನ್. ಆಚಾರ್ಯ ಇವರು ಕಲೋತ್ಸವಕ್ಕೆ ಚಾಲನೆ ನೀಡಲಿದ್ದು, ಮಂಗಳೂರಿನ ವಿಶ್ವಕರ್ಮ ಕಲಾ ಪರಿಷತ್ ಇದರ ಅಧ್ಯಕ್ಷರಾದ ಡಾ. ಎಸ್.ಪಿ. ಗುರುದಾಸ್ ಇವರು ಅಧ್ಯಕ್ಷತೆ ವಹಿಸಲಿದ್ದಾರೆ.

    ಹಿರಿಯ ಖ್ಯಾತ ಯಕ್ಷಗಾನ ಕಲಾವಿದ ಎಂ.ಕೆ. ರಮೇಶ ಆಚಾರ್ಯ ತೀರ್ಥಹಳ್ಳಿ, ಹಿರಿಯ ಹರಿದಾಸ ಕೀರ್ತನ ಕಲಾಗ್ರೇಸರ ಆಚಾರ್ಯ ಡಾ. ಕೆ. ಶ್ರೀಧರ ದಾಸಜೀ ಕುಂಭಾಶಿ, ಹಿರಿಯ ಸ್ವರ್ಣಶಿಲ್ಪಿ ಸಮಾಜ ಸೇವಕ ಅಡ್ಡೂರು ಉಪೇಂದ್ರ ಆಚಾರ್ಯ ಮಂಗಳೂರು, ಹಿರಿಯ ಚಿತ್ರಕಲಾವಿದ ವೈ.ಎನ್. ಗಣೇಶ್ ಆಚಾರ್ಯ ಮಂಗಳೂರು ಮತ್ತು ಹಿರಿಯ ಅಯಸ್ ಶಿಲ್ಪಿ ಲಿಂಗಪ್ಪ ಆಚಾರ್ಯ ವಾಮಂಜೂರು ಇವರುಗಳಿಗೆ ದಿ. ಶಿವಪುರ ಪದ್ಮನಾಭ ಆಚಾರ್ಯ ಪುರಸ್ಕಾರ ಸಹಿತ ವಿಶ್ವಕರ್ಮ ಕಲಾ ಪ್ರಶಸ್ತಿ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಚಿತ್ರಕಲಾವಿದ ಕರಣ್ ಆಚಾರ್ಯ ಉಡುಪಿ, ಖ್ಯಾತ ಎರಕ ಶಿಲ್ಪಿ ಡಾ. ಜ್ಞಾನಾನಂದರ ಶಿಷ್ಯ ಶಿಲ್ಪಿ ಶರತ್ ಎಲ್. ಆಚಾರ್ಯ, ಖ್ಯಾತ ನೃತ್ಯ ಕಲಾವಿದೆ ವಿದುಷಿ ಮಂಜುಳಾ ಸುಬ್ರಹ್ಮಣ್ಯ, ಲೇಖಕ ಕವಿ ಯುವಸಾಹಿತಿ ಅಶೋಕ ಎನ್. ಕಡೇಶಿವಾಲಯ ಮತ್ತು ಖ್ಯಾತ ಸೂಕ್ಷ್ಮ ಕಲಾವಿದ ವೆಂಕಟೇಶ್ ಆಚಾರ್ಯ ತಲೆಬೈಲು ಕಾಸರಗೋಡು ಇವರುಗಳಿಗೆ ಪಿ.ಎನ್. ಆಚಾರ್ಯ ಪುರಸ್ಕಾರ ಸಹಿತ ವಿಶ್ವಕರ್ಮ ಕಲಾ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಡಾ. ಜಿ. ಜ್ಞಾನಾನಂದ ಇವರಿಗೆ ಅಶೋಕ ಎನ್. ಕಡೇಶಿವಾಲಯ ಇವರಿಂದ ಕಾವ್ಯಾಭಿವಂದನೆ ಮತ್ತು ವಿದುಷಿ ಲಾವಣ್ಯ ಸುಧಾಕರ್ ಇವರಿಂದ ಗಾನಾಭಿವಂದನೆ, ವಿಶ್ವ ಬ್ರಾಹ್ಮಣ ಸಮಾಜದ ಕಲಾವಿದರಿಂದ ಶಿಲ್ಪಿಗಳು ಹಾಗೂ ಕುಶಲ ಕರ್ಮಿಗಳಿಂದ ವೈವಿಧ್ಯಮಯ ಕಾಲಕೃತಿಗಳ ಪ್ರದರ್ಶನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರಸ್ತುತಗೊಳ್ಳಲಿದೆ.

    award baikady dance exhibition felicitation Music roovari
    Share. Facebook Twitter Pinterest LinkedIn Tumblr WhatsApp Email
    Previous Articleಕ. ಸಾ. ಪ ಕೇರಳ ಗಡಿನಾಡ ಘಟಕದಿಂದ ಉಪನ್ಯಾಸ ಮತ್ತು ಸಂವಾದ | ಮಾರ್ಚ್ 30
    Next Article ಹರಿಹರಪುರದ ಶ್ರೀ ಮಠದಲ್ಲಿ ‘ತರಣಿಸೇನ ಕಾಳಗ’ ತಾಳಮದ್ದಲೆ | ಮಾರ್ಚ್ 29
    roovari

    Add Comment Cancel Reply


    Related Posts

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025

    ಖ್ಯಾತ ಸಾಹಿತಿ ಪ್ರೊ. ಜಿ.ಎಸ್. ಸಿದ್ಧಲಿಂಗಯ್ಯ ನಿಧನ

    May 8, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.