Subscribe to Updates

    Get the latest creative news from FooBar about art, design and business.

    What's Hot

    ಅರೆಭಾಷೆ ರಂಗ ತರಬೇತಿ ಶಿಬಿರಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಮೇ 30

    May 14, 2025

    ಯಕ್ಷಧ್ರುವ ಪಟ್ಲ ಫೌಂಡೇಶನ್ ಯೂರೋಪ್ ಘಟಕದಿಂದ ‘ಭಾರತ್ ಕಲಾ ವೈಭವ’ ಸಾಂಸ್ಕೃತಿಕ ಉತ್ಸವ

    May 14, 2025

    ಬೆಂಗಳೂರಿನ ರಂಗಶಂಕರದಲ್ಲಿ ‘ರೊಶೊಮನ್’ ನಾಟಕ ಪ್ರದರ್ಶನ | ಮೇ 17

    May 13, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರು ಸಂಸ್ಕೃತ ಸಂಘ ಮತ್ತು ಕೆನರಾ ಪ್ರೌಢಶಾಲೆ ಉರ್ವ ಇದರ ಜಂಟಿ ಆಶ್ರಯದಲ್ಲಿ ‘ಸಂಸ್ಕೃತೋತ್ಸವಃ’ | ಆಗಸ್ಟ್ 31
    Competition

    ಮಂಗಳೂರು ಸಂಸ್ಕೃತ ಸಂಘ ಮತ್ತು ಕೆನರಾ ಪ್ರೌಢಶಾಲೆ ಉರ್ವ ಇದರ ಜಂಟಿ ಆಶ್ರಯದಲ್ಲಿ ‘ಸಂಸ್ಕೃತೋತ್ಸವಃ’ | ಆಗಸ್ಟ್ 31

    August 15, 2024Updated:August 16, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಮಂಗಳೂರು ಸಂಸ್ಕೃತ ಸಂಘ ಹಾಗೂ ಕೆನರಾ ಪ್ರೌಢಶಾಲೆ ಉರ್ವ ಇದರ ಜಂಟಿ ಆಶ್ರಯದಲ್ಲಿ ದಿನಾಂಕ 31 ಆಗಸ್ಟ್ 2024 ಶನಿವಾರ ಮಧ್ಯಾಹ್ನ 2-00 ಗಂಟೆಯಿಂದ ಉರ್ವದ ಕೆನರಾ ಪ್ರೌಢಶಾಲೆಯ ಮಿಜಾರ್ ಗೋವಿಂದ ಪೈ ಸ್ಮಾರಕ ಸಭಾಂಗಣದಲ್ಲಿ ‘ಸಂಸ್ಕೃತೋತ್ಸವಃ’ ಕಾರ್ಯಕ್ರಮದಲ್ಲಿ ವಿವಿಧ ಸಂಸ್ಕೃತ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ.

    ಸಂಸ್ಕೃತೋತ್ಸವ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಡೊಂಗರಕೇರಿಯ ಕೆನರಾ ಪ್ರೌಢಾಶಾಲಾ ಸಮಿತಿಯ ಅಧಕ್ಷರಾದ ಶ್ರೀ ಡಿ. ವಾಸುದೇವ ಕಾಮತ್ ಇವರು ವಹಿಸಲಿದ್ದು, ಸುರತ್ಕಲ್ಲಿನ ಗೋವಿಂದದಾಸ ಪದವಿ ಮಹಾವಿದ್ಯಾಲಯದ ನಿವೃತ್ತ ಸಂಸ್ಕೃತ ಪ್ರಾಧ್ಯಾಪಕ ಶ್ರೀ ಎಸ್. ವಾಗೀಶ ಶಾಸ್ತ್ರಿಯವರು ಉದ್ಘಾಟನೆ ಮಾಡಿ ಪ್ರಧಾನ ಭಾಷಣವನ್ನು ಮಾಡಲಿದ್ದಾರೆ. ಅತಿಥಿಗಳಾಗಿ ಕೆನರಾ ಪ್ರೌಢಶಾಲಾ ಮತ್ತು ಪ್ರಾಥಮಿಕ ಶಾಲಾ ಮುಖ್ಯ ಅಧ್ಯಾಪಿಕೆಯರಾದ ಶ್ರೀಮತಿ ಇಂದುಮತಿ ಮತ್ತು ಶ್ರೀಮತಿ ಲಲನಾ ಜೆ. ಶೆಣೈಯವರು ಭಾಗವಹಿಸಲಿದ್ದಾರೆ.

    ಮಧ್ಯಾಹ್ನ ಗಂಟೆ 2-30ರಿಂದ ಮಂಗಳೂರು ತಾಲೂಕು ಮಟ್ಟದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಂಸ್ಕೃತ ಸ್ತೋತ್ರ ಕಂಠಪಾಠ, ಸುಭಾಷಿತ ಕಂಠಪಾಠ, ಏಕಪಾತ್ರಾಭಿನಯ, ಸಮೂಹಗಾನ ಸ್ಪರ್ಧೆ, ಸಮೂಹ ನೃತ್ಯ, ಸಂಸ್ಕೃತ ರಸಪ್ರಶ್ನೆ ಸ್ಪರ್ಧೆ ಹಾಗೂ ಸಂಸ್ಕೃತ ಭಾಷಣ ಸ್ಪರ್ಧೆ ಜರುಗಲಿದೆ. ಸಾಯಂಕಾಲ 4-30 ಗಂಟೆಗೆ ನಡೆಯುವ ಬಹುಮಾನ ವಿತರಣಾ ಸಮಾರಂಭದಲ್ಲಿ ಸಂಸ್ಕೃತ ಸಂಘದ ಗೌರವಾಧ್ಯಕ್ಷ ಕೆ.ಪಿ. ವಾಸುದೇವ ರಾವ್ ಅಧ್ಯಕ್ಷತೆಯನ್ನು ವಹಿಸಲಿದ್ದು, ಮಂಗಳೂರು ದಕ್ಷಿಣ ವಿಧಾನಸಭಾ ಶಾಸಕರಾದ ಮಾನ್ಯ ಶ್ರೀ ಡಿ. ವೇದವ್ಯಾಸ ಕಾಮತ್, ಡೊಂಗರಕೇರಿಯ ಕೆನರಾ ಪೌಢಶಾಲಾ ಸಮಿತಿಯ ಗೌರವ ಕಾರ್ಯದರ್ಶಿಯವರಾದ ಶ್ರೀ ಎಮ್. ರಂಗನಾಥ್ ಭಟ್, ವಿದ್ವಾನ್ ಶ್ರೀ ರಾಘವೇಂದ್ರ ಆಚಾರ್ಯ ಮಂಗಳೂರು, ಮಂಗಳೂರಿನ ಸಂಚಾಲಿಕಾ ರೋಗ ನಿರೋಧಕ ಚಿಕಿತ್ಸಾಲಯದ ಶ್ರೀಮತಿ ಸುಚಿತ್ರಾ ಎಸ್. ಶೆಣೈಯವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

    ನಿವೃತ್ತ ಸಂಸ್ಕೃತ ಪ್ರಾಧ್ಯಾಪಕ ಶ್ರೀ ಎಸ್. ವಾಗೀಶ ಶಾಸ್ತ್ರಿ ಹಾಗೂ ಸಂಸ್ಕೃತ ಉಪನ್ಯಾಸಕರಾದ ವಿದ್ವಾನ್ ಶ್ರೀ ವಾಸುದೇವ ಕಾರಂತ ಮತ್ತು ವಿದ್ವಾನ್ ಶ್ರೀ ಶ್ರೀಪತಿ ಭಟ್ ಇವರನ್ನು ಮಂಗಳೂರು ಸಂಸ್ಕೃತ ಸಂಘದ ವತಿಯಿಂದ ಸನ್ಮಾನಿಸಲಾಗುವುದು ಎಂಬುದಾಗಿ ಸಂಸ್ಕೃತ ಸಂಘದ ಅಧ್ಯಕ್ಷರಾದ ಶ್ರೀ ಪೈಕ ವೆಂಕಟರಮಣ ಭಟ್ ಹಾಗೂ ಕಾರ್ಯದರ್ಶಿ ಶ್ರೀ ಶ್ರೀನಿವಾಸ ಮಧ್ಯಸ್ಥ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಸ್ಕೃತೋತ್ಸವ ಸಂಯೋಜಕರಾದ ಶ್ರೀ ಬಿ. ಮುರಾರಿ ತಂತ್ರಿ 8553375123 ಮತ್ತು ಶ್ರೀ ರಮೇಶ ಆಚಾರ್ಯ 9449332653 ಇವರನ್ನು ಸಂಪರ್ಕಿಸಲು ಕೋರಲಾಗಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಸಮಾರೋಪಗೊಂಡ ಯಕ್ಷ ಸಿದ್ದಿಸಂಭ್ರಮದ ‘ಸಿದ್ಧಿ ದಶಯಾನ’
    Next Article ಉಡುಪಿಯಲ್ಲಿ ‘ಪಣಿಯಾಡಿ ಕಾದಂಬರಿ ಪ್ರಶಸ್ತಿ’ ಪ್ರದಾನ | ಆಗಸ್ಟ್ 18
    roovari

    Comments are closed.

    Related Posts

    ಯಕ್ಷಧ್ರುವ ಪಟ್ಲ ಫೌಂಡೇಶನ್ ಯೂರೋಪ್ ಘಟಕದಿಂದ ‘ಭಾರತ್ ಕಲಾ ವೈಭವ’ ಸಾಂಸ್ಕೃತಿಕ ಉತ್ಸವ

    May 14, 2025

    ಸಂವಾಹಿನಿ ಹಳೆ ವಿದ್ಯಾರ್ಥಿ ಸಂಘದ ಅಡಿಯಲ್ಲಿ ‘ಯಾದೇ’ ಸಂಭ್ರಮಾಚರಣೆ

    May 13, 2025

    ಸುರತ್ಕಲ್ಲಿನ ಅನುಪಲ್ಲವಿಯಲ್ಲಿ ‘ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ’ | ಮೇ 17

    May 13, 2025

    ಕೊಡಗು ಪತ್ರಿಕಾ ಭವನದಲ್ಲಿ ದಿ. ಬಿ.ಎಸ್. ಗೋಪಾಲಕೃಷ್ಣರವರ ಸ್ಮರಣಾರ್ಥ ದತ್ತಿನಿಧಿ ಪ್ರಶಸ್ತಿ ಪ್ರದಾನ | ಮೇ 15

    May 13, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.