Subscribe to Updates

    Get the latest creative news from FooBar about art, design and business.

    What's Hot

    ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದಿಂದ ತಾಳಮದ್ದಳೆ ಕಾರ್ಯಕ್ರಮ

    May 20, 2025

    ಕಟಪಾಡಿ ವೇಣುಗಿರಿಯಲ್ಲಿ ‘ಭಜನಾ ವೈಭವ 2025’ ಸಾಂಪ್ರದಾಯಿಕ ಭಜನಾ ಸ್ಪರ್ಧೆ | ಜೂನ್ 22

    May 20, 2025

    ಸರಯೂ ಬಾಲಯಕ್ಷ ವೃಂದ ಮಕ್ಕಳ ಮೇಳದ ‘ಯಕ್ಷ ಪಕ್ಷ’ ರಜತ ಸಂಭ್ರಮ ಉದ್ಘಾಟನೆ

    May 20, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸನಾತನ ನಾಟ್ಯಾಲಯದ ವತಿಯಿಂದ ‘ಸನಾತನ ಗುರು ಪರಂಪರ’
    Bharathanatya

    ಸನಾತನ ನಾಟ್ಯಾಲಯದ ವತಿಯಿಂದ ‘ಸನಾತನ ಗುರು ಪರಂಪರ’

    July 12, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಸನಾತನ ನಾಟ್ಯಾಲಯದ ವತಿಯಿಂದ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ದಿನಾಂಕ : 09-07-2023ರಂದು ನಡೆದ ‘ಸನಾತನ ಗುರು ಪರಂಪರೆ’ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಹಿರಿಯ ಯಕ್ಷಗಾನ ಕಲಾವಿದ ಸೂರಿ ಕುಮೇರು ಗೋವಿಂದ ಭಟ್ ಗುರುನಮನ ಸ್ವೀಕರಿಸಿ ಮಾತನಾಡುತ್ತಾ “ವ್ಯಕ್ತಿಯ ಜೀವನಕ್ಕೊಂದು ಸರಿಯಾದ ಸಂಸ್ಕಾರವು ನೃತ್ಯಕಲೆಯಿಂದ ದೊರಕುತ್ತದೆ. ಹಾಗೆ ನೋಡಿದರೆ ಪ್ರತಿಯೊಂದು ಕಲೆಯೂ ಆತನ ಸಂಸ್ಕಾರದಿಂದಲೇ ಪ್ರಾಪ್ತವಾಗಲು ಸಾಧ್ಯ. ಲಲಿತ ವಿದ್ಯೆಗಳನ್ನು ಸ್ವೀಕರಿಸಲು ಪೂರ್ವ ಸಂಸ್ಕಾರ ಬೇಕು. ಸತ್ಯದ ಸಾಕ್ಷಾತ್ಕಾರವೇ ವಿದ್ಯೆಯ ಪರಮ ಲಕ್ಷ್ಯ. ಕೇಳುಗನಿಗೆ, ನೋಡುಗನಿಗೆ ಏನನ್ನು ಕೊಡಬೇಕು ಎಂಬುದನ್ನು ಕಲಾವಿದನು ತಿಳಿದಿರಬೇಕು. ಅದು ಗುರು ಮುಖೇನ ಲಭ್ಯವಾಗಬೇಕು” ಎಂದು ಹೇಳಿದರು.

    ಅಧ್ಯಕ್ಷತೆ ವಹಿಸಿದ್ದ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್ ಮಾತನಾಡಿ, “ಜೀವಿತದಲ್ಲಿ ನಮಗಿರುವ ದೊಡ್ಡ ಜವಾಬ್ದಾರಿ ಎಂದರೆ ನಮ್ಮ ಹಿರಿಯರ ಉತ್ತಮ ಪರಂಪರೆಯನ್ನು ಹೊಸ ತಲೆಮಾರಿಗೆ ದಾಟಿಸುವಂತಹುದು. ಪ್ರತ್ಯಕ್ಷ ಪೂಜೆಗಿಂತಲೂ ಗುರುವಿನ ತತ್ವ ಬೋಧನೆಯನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಅದು ಅತ್ಯುತ್ತಮ ಗುರುಪೂಜೆ” ಎಂದು ಹೇಳಿದರು.

    ಮೈಸೂರು ಮೂಗೂರು ಶೈಲಿಯ ಹಿರಿಯ ಭರತನಾಟ್ಯ ಗುರು, ಕೀರ್ತಿಶೇಷ ಕೊಡವೂರು ಮಾಧವ ಭಾಗವತರ ಸಂಸ್ಮರಣೆಯನ್ನು ನೃತ್ಯಶಿಕ್ಷಕ ರಾಮಕೃಷ್ಣ ಕೊಡಂಚ ನಡೆಸಿಕೊಟ್ಟರು.

    ಪುತ್ತೂರು ನಾಟ್ಯರಂಗ ಸಂಸ್ಥೆಯ ನೃತ್ಯಗುರು ಮಂಜುಳಾ ಸುಬ್ರಹ್ಮಣ್ಯ ಅವರಿಗೆ ‘ಗುರುಪ್ರೇರಣಾ ಪ್ರಶಸ್ತಿ’ ನೀಡಿ ಗೌರವಿಸಲಾಯಿತು. ಯಕ್ಷಗಾನ ರಂಗ ನಿರ್ದೇಶಕ ಡಾ. ದಿನಕರ ಎಸ್. ಪಚ್ಚನಾಡಿ, ಸನಾತನ ನಾಟ್ಯಾಲಯದ ನಿರ್ದೇಶಕ ಚಂದ್ರಶೇಖರ ಶೆಟ್ಟಿ ಉಪಸ್ಥಿತರಿದ್ದರು.

    ಬಳಿಕ ನೃತ್ಯಗುರುಗಳಾದ ವಿದುಷಿ ಶಾರದಾ ಮಣಿಶೇಖರ್ ಮತ್ತು ವಿದುಷಿ ಶ್ರೀಲತಾ ನಾಗರಾಜ್ ನಿರ್ದೇಶನದಲ್ಲಿ ಸನಾತನ ನಾಟ್ಯಾಲಯದ ವಿದ್ಯಾರ್ಥಿಗಳು ನೃತ್ಯ ಪ್ರದರ್ಶನ ನೀಡಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಹೊಸಕೋಟೆಯಲ್ಲಿ ಜನಮನ ರಂಜಿಸಿದ ‘ಮಾತೆ ಮಹತ್ವ’
    Next Article ಆರ್. ಪೂರ್ಣಿಮಾಗೆ ‘ನಾಗಮಣಿ ಎಸ್. ರಾವ್ ದತ್ತಿ ಪ್ರಶಸ್ತಿ’ ಪ್ರದಾನ
    roovari

    Add Comment Cancel Reply


    Related Posts

    ಶ್ರೀ ನಾಟ್ಯಾಂಜಲಿ ಕಲಾ ಅಕಾಡೆಮಿಯ ನಲ್ವತ್ತರ ನಲಿವು 11ನೇ ಸರಣಿ ಕಾರ್ಯಕ್ರಮ

    May 16, 2025

    ಶ್ರೀ ನಾಟ್ಯಾಂಜಲಿ ಕಲಾ ಮಂದಿರದಲ್ಲಿ ‘ನಲ್ವತ್ತರ ನಲಿವು -11’ | ಮೇ 13

    May 12, 2025

    ಉಡುಪಿಯ ಇನ್ಫೋಸಿಸ್ ಯಕ್ಷಗಾನ ಕಲಾರಂಗದಲ್ಲಿ ‘ಸುಮಂಜುಳ’ | ಮೇ 10

    May 6, 2025

    ಬೆಂಗಳೂರಿನ ಕಪ್ಪಣ್ಣ ಅಂಗಳದಲ್ಲಿ ‘ನೃತ್ಯ ಭಾನು’ ಶಾಸ್ತ್ರೀಯ ನೃತ್ಯ ಕಾರ್ಯಕ್ರಮ | ಮೇ 09

    May 6, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.