Subscribe to Updates

    Get the latest creative news from FooBar about art, design and business.

    What's Hot

    ಮಣಿ ಕೃಷ್ಣಸ್ವಾಮಿ ಅಕಾಡೆಮಿಯಿಂದ ಗಾಯನ ಸಂಗೀತ ಕಾರ್ಯಾಗಾರ | ಜೂನ್ 14 ಮತ್ತು 15

    June 6, 2025

    ಬೆಂಗಳೂರಿನಲ್ಲಿ ಯಕ್ಷಗಾನ ಹಿಮ್ಮೇಳ ಹಾಗೂ ಮುಮ್ಮೇಳ ತರಗತಿಗಳು

    June 6, 2025

    ಕುಷ್ಟಗಿಯಲ್ಲಿ ಮೌನೇಶ ನವಲಹಳ್ಳಿ ಇವರ ‘ನೀಲಿ ಹೊತ್ತಿಗೆ’ ಕಾದಂಬರಿ ಅವಲೋಕನ ಕಾರ್ಯಕ್ರಮ | ಜೂನ್ 08

    June 6, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಟೀಲಿನಲ್ಲಿ ‘ಸಂಜಯ 50’ ಯಕ್ಷಗಾನ ರಂಗಪ್ರವೇಶದ ಸಂಭ್ರಮ ಕಾರ್ಯಕ್ರಮ 
    Yakshagana

    ಕಟೀಲಿನಲ್ಲಿ ‘ಸಂಜಯ 50’ ಯಕ್ಷಗಾನ ರಂಗಪ್ರವೇಶದ ಸಂಭ್ರಮ ಕಾರ್ಯಕ್ರಮ 

    September 18, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಮಂಗಳೂರು : ಯಕ್ಷಗಾನದ ಖ್ಯಾತ ಸ್ತ್ರೀ ಪಾತ್ರಧಾರಿಗಳಾದ ಸಂಜಯ ಕುಮಾರ್ ಶೆಟ್ಟಿ ಇವರ  ಯಕ್ಷಗಾನ ರಂಗಪ್ರವೇಶದ 50ನೇ ವರ್ಷದ ಸಂಭ್ರಮ ‘ಸಂಜಯ 50’ ಕಾರ್ಯಕ್ರಮವು ದಿನಾಂಕ 15 ಸೆಪ್ಟೆಂಬರ್ 2024ರಂದು ಕಟೀಲಿನ ಗೋಪಾಲಕೃಷ್ಣ ಆಸ್ರಣ್ಣ ಸಭಾ ಭವನದಲ್ಲಿ ನಡೆಯಿತು.
    ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ಶ್ರೀಕ್ಷೇತ್ರ ಕಟೀಲಿನ ಪ್ರಧಾನ ಅರ್ಚಕರಾದ ವೇ. ಮೂ. ಶ್ರೀ ಲಕ್ಮೀನಾರಾಯಣ ಆಸ್ರಣ್ಣ ಮಾತನಾಡಿ “ಕಲೆಯ ಆರಾಧಕರು ಕಲಾವಿದರು. ಆ ಕಾರಣಕ್ಕಾಗಿ ಅದು ಅವರಿಗೆ ಒಲಿಯುತ್ತದೆ. ಆ ಮೂಲಕ ಕಲಾವಿದ ಪ್ರಕಾಶಕ್ಕೆ ಬಂದು ಬೆಳಗುತ್ತಾನೆ. ಗೋಣಿಬೀಡಿಂದ ಬಂದ ಸಂಜಯ ಕುಮಾರ್  ಯಕ್ಷಗಾನವನ್ನು ಪ್ರೀತಿಸುತ್ತಾ, ಕಟೀಲಮ್ಮನನ್ನು ಆರಾಧಿಸುತ್ತಾ ಯಕ್ಷ ಕಣ್ಮಣಿಯಾದರು. ಅವರ ಕಲಾಯಾನದ 50ರ ವರ್ಷಪೂರ್ತಿಯ ಕಾರ್ಯಕ್ರಮಗಳು ನೂರಾರು ನಡೆದು ಅವರಿಗೆ ಕಟೀಲ ಉಳ್ಳಾಲ್ದಿ ವರವಾಗಿ ಹರಸಲಿ” ಎಂದು ಹರಿಸಿದರು.
    ಕ. ಸಾ. ಪ. ಇದರ ಮಾಜಿ ರಾಜ್ಯಾಧ್ಯಕ್ಷರಾದ ಧರ್ಮದರ್ಶಿ ಹರಿಕೃಷ್ಣ ಪುನರೂರು ಮಾತನಾಡಿ “ಸಂಜಯ ಕುಮಾರ್ ಇವರಂತಹ ಕಲಾವಿದರು ಮಾತು ಕಡಿತ ಮಾಡಿ ಉತ್ತಮ ಸಾಧನೆ ಮಾಡಿ ಸಾಧಕರಾಗಿದ್ದಾರೆ. ಅವರಿಗೆ ಎಲ್ಲರ ಬೆಂಬಲವಿರಲಿ.” ಎಂದರು.
    ಆದಾನಿ ಗ್ರೂಪಿ ಇದರ ಶ್ರೀ ಕಿಶೋರ್ ಆಳ್ವ ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸಿ ಉದ್ಘಾಟಿಸಿದರು. ಯುಗಪುರುಷ ಕಿನ್ನಿಗೋಳಿ ಇದರ ಭುವನಾಭಿರಾಮ ಉಡುಪ, ನ್ಯಾಯವಾದಿ ಶ್ರೀ ಮೋಹನ್ ದಾಸ್ ರೈ ಹಾಗೂ ಭಾ. ಜ. ಪ. ಇದರ ಮಾಜಿ ಜಿಲ್ಲಾಧ್ಯಕ್ಷರಾದ ಎಂ. ಸಂದರ್ಶನ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
    ಡಾ. ಪ್ರಖ್ಯಾತ್ ಶೆಟ್ಟಿ ಅಳಿಕೆ ಮತ್ತು ತಂಡದಿಂದ ಯಕ್ಷಗಾನದ ಸಾಂಪ್ರದಾಯಿಕ ಪ್ರಾರ್ಥನೆ ಜರಗಿತು. ಯಕ್ಷಗರು ವರ್ಕಾಡಿ ರವಿ ಅಲೆವೂರಾಯ ನಿರೂಪಿಸಿದರು. ಶ್ರೀ ಅಕ್ಷಯ ಸುವರ್ಣ ಸಹಕರಿಸಿದರು.
    ಸಭಾ ಕಾರ್ಯಕ್ರಮದ ಬಳಿಕ ಖ್ಯಾತ ಕಲಾವಿದರಿಂದ ‘ದೇವೆರೆಗ್ ಅರ್ಪಣೆ’ ತುಳು ಯಕ್ಷಗಾನ ಪ್ರದರ್ಶನಗೊಂಡಿತು.

    Share. Facebook Twitter Pinterest LinkedIn Tumblr WhatsApp Email
    Previous Articleಧಾರವಾಡದಲ್ಲಿ ಎರಡು ದಿನಗಳ ‘ಸ್ವರಾಲಾಪ’ ಮಿನಿ ಸಂಗೀತ ಸಮ್ಮೇಳನ | ಸೆಪ್ಟೆಂಬರ್ 21 ಮತ್ತು 22
    Next Article ಕನ್ನಡ ಸಾಹಿತ್ಯ ಪರಿಷತ್ತಿನ ಮೂರ್ನಾಡು ಹೋಬಳಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ
    roovari

    Comments are closed.

    Related Posts

    ಬೆಂಗಳೂರಿನಲ್ಲಿ ಯಕ್ಷಗಾನ ಹಿಮ್ಮೇಳ ಹಾಗೂ ಮುಮ್ಮೇಳ ತರಗತಿಗಳು

    June 6, 2025

    ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ಯಕ್ಷ ಸಮಾಗಮ 7’ | ಜೂನ್ 07

    June 6, 2025

    ಮಂಗಳೂರು ಪುರಭವನದಲ್ಲಿ ಕೊಂಕಣಿ ಯಕ್ಷಗಾನ

    June 5, 2025

    ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ‘ಹಲಸಿನ ಅರಿವಿನ ಹರಿವು’ ತಾಳಮದ್ದಲೆ | ಜೂನ್ 07

    June 5, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.