Subscribe to Updates

    Get the latest creative news from FooBar about art, design and business.

    What's Hot

    ಕರ್ನಾಟಕ ಲೇಖಕಿಯರ ಸಂಘದ 2025ನೆಯ ಸಾಲಿನ ಪುಸ್ತಕ ಬಹುಮಾನಕ್ಕೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಫೆಬ್ರುವರಿ 10

    January 14, 2026

    ಮಂಗಳೂರಿನ ಪುರಭವನದಲ್ಲಿ ‘ಅನುಪಮ’ ಮಾಸಿಕದ ರಜತ ಮಹೋತ್ಸಹ ವರ್ಷಾಚರಣೆ | ಜನವರಿ 15

    January 14, 2026

    ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಶ್ರೀಮತಿ ಜಲಜಾ ಶೇಖರ್ ಆಯ್ಕೆ

    January 13, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ತೆಕ್ಕಟ್ಟೆ ಹಯಗ್ರೀವದಲ್ಲಿ ‘ಶ್ರೀ ಸರಸ್ವತಿ ಲಲಿತಕಲಾ ಟ್ರಸ್ಟ್, ಮಣೂರು’ ಸಂಸ್ಥೆಯ ಉದ್ಘಾಟನೆ
    Cultural

    ತೆಕ್ಕಟ್ಟೆ ಹಯಗ್ರೀವದಲ್ಲಿ ‘ಶ್ರೀ ಸರಸ್ವತಿ ಲಲಿತಕಲಾ ಟ್ರಸ್ಟ್, ಮಣೂರು’ ಸಂಸ್ಥೆಯ ಉದ್ಘಾಟನೆ

    January 30, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ತೆಕ್ಕಟ್ಟೆ: ಶ್ರೀ ಕೈಲಾಸ ಕಲಾಕ್ಷೇತ್ರ ಟ್ರಸ್ಟ್ ತೆಕ್ಕಟ್ಟೆ ಸಹಕಾರದೊಂದಿಗೆ ‘ಶ್ರೀ ಸರಸ್ವತಿ ಲಲಿತಕಲಾ ಟ್ರಸ್ಟ್, ಮಣೂರು’ ಸಂಸ್ಥೆಯ ಉದ್ಘಾಟನಾ ಸಮಾರಂಭವು ದಿನಾಂಕ 26-11-2023 ರಂದು ತೆಕ್ಕಟ್ಟೆ ಹಯಗ್ರೀವದಲ್ಲಿ ನಡೆಯಿತು.

    ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಉಡುಪಿ ಜಿಲ್ಲೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀಮತಿ ಪೂರ್ಣಿಮಾ “ವಿವಿಧ ಕಲೆಗಳಿಂದ ಕೂಡಿದ ಉಡುಪಿ, ಕಲಾ ವಿಭಾಗದಲ್ಲಿ ಪರಿಪೂರ್ಣತೆಯನ್ನು ಸಾಧಿಸಿದೆ. ಕುಟುಂಬದಲ್ಲಿ ಒಂದೆರಡು ಮಕ್ಕಳನ್ನು ಹೊಂದಿರುವ ಪ್ರಸ್ತುತ ಕಾಲಘಟ್ಟದಲ್ಲಿ ಓದು ಮತ್ತು ಕಲೆ ಎರಡೂ ವಿಭಾಗದಲ್ಲಿ ಬೆಳೆಯುವಂತೆ ಪೋಷಕರು ಮಕ್ಕಳನ್ನು ಬೆಳೆಸುತ್ತಾರೆ. ಹಾಗಾಗಿ ಪ್ರತೀ ಕುಟುಂಬದಲ್ಲಿಯೂ ಬೇರೆ ಬೇರೆ ಕಲಾ ವಿಭಾಗದಲ್ಲಿ ತೊಡಗಿಸಿಕೊಂಡ ಮಕ್ಕಳನ್ನು ಇಂದಿನ ಕಾಲಘಟ್ಟದಲ್ಲಿ ಕಾಣಬಹುದು. ಸಂಸ್ಕೃತಿ, ಸಂಸ್ಕಾರಗಳು ಕಲಾ ಚಟುವಟಿಕೆಯಿಂದ ವೃದ್ಧಿಸುತ್ತದೆ.” ಎಂದರು.

    ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕರಾದ ಶ್ರೀಮತಿ ಪಾರ್ವತಿ ಜಿ. ಐತಾಳ್ ಮಾತನಾಡಿ “ತೆಕ್ಕಟ್ಟೆಯ ಪರಿಸರಕ್ಕೆ ಸಾಂಸ್ಕೃತಿಕ ರಾಯಭಾರತ್ವಕ್ಕೆ ಇನ್ನೊಂದು ಸಂಸ್ಥೆ ‘ಸರಸ್ವತಿ ಲಲಿತಕಲಾ ಟ್ರಸ್ಟ್, ಮಣೂರು’ ಸೇರಿಕೊಂಡಿದೆ. ಸಂಸ್ಕೃತಿಯನ್ನು ಮನದಟ್ಟು ಮಾಡುವ ಮತ್ತು ಸಂಸ್ಕಾರದ ಚಿತ್ರಣವನ್ನು ಬಿತ್ತರಿಸುವ ಕಾರ್ಯವನ್ನು ಕಲೆ ಮಾಡಿದೆ. ಆದರೆ ಇಂದು ಶೈಕ್ಷಣಿಕ ಕ್ಷೇತ್ರದಲ್ಲಿ ಕಲೆಗೆ ಅವಕಾಶವಿಲ್ಲ. ಕಲೆಗೆ ಮಹತ್ವ ಬರಬೇಕಾದರೆ ಅದು ಶೈಕ್ಷಣಿಕದ ಭಾಗವಾಗಬೇಕಾಗುತ್ತದೆ. ಖಾಸಗಿ ಶಾಲೆಗಳು ಕಲೆಗೆ ಮಹತ್ವ ನೀಡುತ್ತಿದ್ದರೂ ಅದು ಪ್ರಾಮುಖ್ಯವಾಗಿ ನೆಲೆನಿಂತಿಲ್ಲ. ಕಲೆಗೆ ಶಾಲೆಗಳಲ್ಲಿ ಪ್ರಾತಿನಿಧ್ಯ ದೊರೆಯಬೇಕು.” ಎಂದು ಅಭಿಪ್ರಾಯಪಟ್ಟರು.

    ಯಕ್ಷಗುರುಗಳಾದ ಲಂಬೋದರ ಹೆಗಡೆ, ಡಾ. ವಾಸುದೇವ ಹೊಳ್ಳ ಉಪಸ್ಥಿತರಿದ್ದರು. ಕೈಲಾಸ ಕಲಾಕ್ಷೇತ್ರದ ಅಧ್ಯಕ್ಷ ಹೆರಿಯ ಮಾಸ್ಟರ್ ಅಧ್ಯಕ್ಷತೆ ವಹಿಸಿದ್ದ ಈ ಕಾರ್ಯಕ್ರಮದಲ್ಲಿ ಶ್ರೀಮತಿ ಶಾರದಾ ಹೊಳ್ಳ ಸ್ವಾಗತಿಸಿ, ಕು. ನೇಹ ಹೊಳ್ಳ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ರಂಗದಲ್ಲಿ ಪ್ರಸ್ತುತಿಗೊಂಡಿತು.

     

    Share. Facebook Twitter Pinterest LinkedIn Tumblr WhatsApp Email
    Previous Articleಸೋಮವಾರಪೇಟೆಯಲ್ಲಿ ‘ಗೀತಗಾಯನ ಮತ್ತು ಕವಿಗೋಷ್ಠಿ’
    Next Article ಮಣಿಪಾಲದಲ್ಲಿ ‘ಪ್ರಮಾ ಪ್ರಶಸ್ತಿ 2023’ ಪ್ರದಾನ
    roovari

    Add Comment Cancel Reply


    Related Posts

    ಮಂಗಳೂರಿನ ಪುರಭವನದಲ್ಲಿ ‘ಸ್ವರ ಸಂಕ್ರಾಂತಿ’ ಹಿಂದೂಸ್ಥಾನಿ ಸಂಗೀತ ಕಛೇರಿ | ಜನವರಿ 14

    January 13, 2026

    ಶಕ್ತಿನಗರದ ಸರಕಾರಿ ವಿದ್ಯಾ ಸಂಸ್ಥೆಯಲ್ಲಿ ‘ರಂಗೋಲಿ ಸ್ಪರ್ಧೆ’ | ಜನವರಿ 18

    January 13, 2026

    ನಾಟಕ ವಿಮರ್ಶೆ | ಡಾ. ಚಂದ್ರಶೇಖರ ಕಂಬಾರರ ‘ಜೋಕುಮಾರ ಸ್ವಾಮಿ’ ನಾಟಕದ ಅದ್ಬುತ ಪ್ರದರ್ಶನ

    January 12, 2026

    ಪುತ್ತೂರಿನಲ್ಲಿ ‘ಕುಮಾರವ್ಯಾಸ ಜಯಂತಿ’ ಆಚರಣೆಯ ಪ್ರಯುಕ್ತ ಗಮಕ ವಾಚನ- ವ್ಯಾಖ್ಯಾನ

    January 12, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.