Subscribe to Updates

    Get the latest creative news from FooBar about art, design and business.

    What's Hot

    ನೀನಾಸಂ ರಂಗಶಿಕ್ಷಣಕ್ಕೆ ಅರ್ಜಿ ಆಹ್ವಾನ

    June 6, 2026

    ಬೈಲೂರು ದೇವಸ್ಥಾನದಲ್ಲಿ ಅರ್ಥಪೂರ್ಣ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

    June 6, 2026

    ಯಕ್ಷಗಾನ ಮಾರ್ಗದರ್ಶಿ ಶಿಬಿರದ ಸಮಾರೋಪ ಸಮಾರಂಭ ಮತ್ತು ಪ್ರಶಸ್ತಿ ಪ್ರದಾನ

    June 6, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಬಂಗಾಳಿ ಲೇಖಕ ಡಾ. ರಾಮ್‌ಕುಮಾ‌ರ್ ಇವರ ಕೃತಿಗೆ ‘ಸರಸ್ವತಿ ಸಮ್ಮಾನ್ ಪ್ರಶಸ್ತಿ’
    Awards

    ಬಂಗಾಳಿ ಲೇಖಕ ಡಾ. ರಾಮ್‌ಕುಮಾ‌ರ್ ಇವರ ಕೃತಿಗೆ ‘ಸರಸ್ವತಿ ಸಮ್ಮಾನ್ ಪ್ರಶಸ್ತಿ’

    March 28, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಹೊಸದಿಲ್ಲಿ : ಹೆಸರಾಂತ ಬಂಗಾಳಿ ಲೇಖಕ ಡಾ. ರಾಮ್ ಕುಮಾ‌ರ್ ಮುಖ್ಯೋಪಾಧ್ಯಾಯ ಇವರ ‘ಹರ-ಪಾರ್ವತಿ ಕಥಾ’ ಕಾದಂಬರಿಯನ್ನು ಪ್ರತಿಷ್ಠಿತ 2025ನೇ ಸಾಲಿನ ‘ಸರಸ್ವತಿ ಸಮ್ಮಾನ್ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ. ಈ ಕಾದಂಬರಿಯು ಶಿವ ಮತ್ತು ಪಾರ್ವತಿ ಕುರಿತ ಪೌರಾಣಿಕ ಕಥಾ ಹಂದರವನ್ನು ಆಧುನಿಕ ಸೌಂದರ್ಯ ಪ್ರಜ್ಞೆಯ ದೃಷ್ಟಿಕೋನದಲ್ಲಿ ವ್ಯಾಖ್ಯಾನಿಸುವ ವಿಷಯವನ್ನು ಹೊಂದಿದೆ. ಭಾರತೀಯ ಪ್ರಜೆಗಳು ದೇಶದ ಯಾವುದೇ ಭಾಷೆಯಲ್ಲಿ ಬರೆದ ಶ್ರೇಷ್ಠ ಸಾಹಿತ್ಯ ಕೃತಿಗೆ ಕೆ.ಕೆ. ಬಿರ್ಲಾ ಫೌಂಡೇಷನ್ 1991ರಿಂದ ಈ ಪ್ರಶಸ್ತಿಯನ್ನು ನೀಡುತ್ತಿದ್ದು, ಪ್ರಶಸ್ತಿ ಮೊತ್ತವು ರೂ.ಹದಿನೈದು ಲಕ್ಷ ಆಗಿದ್ದು, ಪಾರಿತೋಷಕವನ್ನು ಒಳಗೊಂಡಿದೆ.

    ರಾಮ್‌ಕುಮಾ‌ರ್ ಮುಖ್ಯೋಪಾಧ್ಯಾಯ ಇವರು ಕೋಲ್ಕತ್ತದಲ್ಲಿ 1956 ಅಕ್ಟೋಬರ್ 5ರಂದು ಜನಿಸಿದರು. ಹೌರಾದ ರಾಮಕೃಷ್ಣ ಮಿಷನ್‌ ವಿದ್ಯಾಮಂದಿರದಲ್ಲಿ ಪದವಿ ಮತ್ತು ಕಲ್ಕತ್ತ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಜಾದವ್‌ಪುರ ವಿಶ್ವವಿದ್ಯಾಲಯದಲ್ಲಿ ಪಿ.ಎಚ್‌ಡಿ ಮಾಡಿದ್ದಾರೆ. ಸಾಹಿತ್ಯ ಅಕಾಡೆಮಿಯ ಪೂರ್ವ ಮತ್ತು ಈಶಾನ್ಯ ಪ್ರದೇಶದ ಕಾರ್ಯದರ್ಶಿಯಾಗಿ ಮತ್ತು ವಿಶ್ವ ಭಾರತಿ ಪ್ರಕಾಶನ ಇಲಾಖೆಯ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ ಬಹುಮುಖಿ ಪ್ರತಿಭೆಯನ್ನು ಹೊಂದಿರುವ ರಾಮ್ ಕುಮಾರ್ ಇವರು 9 ಕಾದಂಬರಿ, 11 ಕಥಾ ಸಂಗ್ರಹ ಹಾಗೂ 4 ಪ್ರಬಂಧ ಸಂಗ್ರಹಗಳನ್ನು ಹೊರತಂದಿದ್ದಾರೆ. ಎರಡು ಪ್ರವಾಸ ಕಥನಗಳನ್ನು ಬರೆದಿದ್ದಾರೆ. ಅಲ್ಲದೇ, 54 ಭಾಷೆಗಳ ಸುಮಾರು 128 ಜನಪದ ಕಥೆಗಳನ್ನು ಸಂಗ್ರಹಿಸಿದ್ದಾರೆ. 2020ರಲ್ಲಿ ‘ಹರ-ಪಾರ್ವತಿ ಕಥಾ’ ಕಾದಂಬರಿ ಪ್ರಕಟವಾಗಿದ್ದು, ಬಂಕಿಮಚಂದ್ರ ಪುರಸ್ಕಾರ ಮತ್ತು ಬಾಂಗ್ಲಾ ಅಕಾಡೆಮಿ ಪುರಸ್ಕಾರ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಅವರು ಭಾಜನರಾಗಿದ್ದಾರೆ.

    award baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನಲ್ಲಿ ‘ಮಲಬಾರ್ ವಿಶ್ವ ರಂಗಭೂಮಿ ಪ್ರಶಸ್ತಿ’ ಪ್ರದಾನ
    Next Article ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ‘ಸಂಪ್ರದಾಯ ದಿನ’
    roovari

    Add Comment Cancel Reply


    Related Posts

    ನೀನಾಸಂ ರಂಗಶಿಕ್ಷಣಕ್ಕೆ ಅರ್ಜಿ ಆಹ್ವಾನ

    June 6, 2026

    ಬೈಲೂರು ದೇವಸ್ಥಾನದಲ್ಲಿ ಅರ್ಥಪೂರ್ಣ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

    June 6, 2026

    ಯಕ್ಷಗಾನ ಮಾರ್ಗದರ್ಶಿ ಶಿಬಿರದ ಸಮಾರೋಪ ಸಮಾರಂಭ ಮತ್ತು ಪ್ರಶಸ್ತಿ ಪ್ರದಾನ

    June 6, 2026

    ಉತ್ಕೃಷ್ಟವಾದ ವೇಣುವಾದನ ಕಚೇರಿ ‘ರಾಗರತ್ನ ಮಾಲಿಕೆ-49’

    June 6, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.