Subscribe to Updates

    Get the latest creative news from FooBar about art, design and business.

    What's Hot

    ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 10

    May 31, 2025

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸರೋಜಿನಿ ಮಧುಸೂದನ ಕುಶೆ ವಿದ್ಯಾಸಂಸ್ಥೆಯಲ್ಲಿ ‘ಸರೋಜ್ ಮಧುಕಲಾ ಉತ್ಸವ’
    Cultural

    ಸರೋಜಿನಿ ಮಧುಸೂದನ ಕುಶೆ ವಿದ್ಯಾಸಂಸ್ಥೆಯಲ್ಲಿ ‘ಸರೋಜ್ ಮಧುಕಲಾ ಉತ್ಸವ’

    November 27, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಮಂಗಳೂರು: ಸರೋಜಿನಿ ಮಧುಸೂದನ ಕುಶೆ ವಿದ್ಯಾಸಂಸ್ಥೆಯಲ್ಲಿ ನಡೆದ ಸರೋಜ್ ಮಧುಕಲಾ ಉತ್ಸವದ ಸಮಾರಂಭವು ದಿನಾಂಕ 23 ನವೆಂಬರ್ 2024ರ ಶನಿವಾರ ಶಾಲಾ ಸಂಸ್ಥಾಪಕ ಸರೋಜಿನಿ ಮಧುಸೂದನ ಕುಶೆ ಅಧ್ಯಕ್ಷತೆಯಲ್ಲಿ ನಡೆಯಿತು.
    ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ಮಂಗಳೂರಿನ ಐ. ಸಿ. ಎ. ಐ. ಇದರ ಮಾಜಿ ಅಧ್ಯಕ್ಷರಾದ  ಸಿಎ ಎಸ್. ಎಸ್. ನಾಯಕ್ ಮಾತನಾಡಿ “ಮಕ್ಕಳಿಗೆ ಅಭಿರುಚಿ ಇರುವ ಕ್ಷೇತ್ರದಲ್ಲೇ ಅವರಿಗೆ ಪ್ರೋತ್ಸಾಹ ನೀಡಬೇಕು, ಕೇವಲ ಅಂಕಗಳಿಸುವುದೇ ಜೀವನದ ಗುರಿಯಾಗಿರಬಾರದು. ನಮ್ಮಲ್ಲಿ ಇರುವ ಪ್ರತಿಭೆಗಳಿಂದಲೇ ಜೀವನದಲ್ಲಿ ಯಶಸ್ಸು ಗಳಿಸಬಹುದು. ಸಮಯ ವ್ಯರ್ಥ ಮಾಡದೆ ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ನಾವು ಅಂದುಕೊಂಡದ್ದನ್ನು ಸಾಧಿಸಬಹುದು, ಮಕ್ಕಳ ಅನಾವರಣಕ್ಕೆ ಇದು ಉತ್ತಮ ವೇದಿಕೆಯಾಗಿದೆ.” ಎಂದು ಹೇಳಿದರು.
    ಮತ್ತೋರ್ವ ಅತಿಥಿ ರಂಗಭೂಮಿ ಮತ್ತು ಸಿನಿಮಾ ಕಲಾವಿದರಾದ ಪ್ರದೀಪ್ ಚಂದ್ರ ಕುತ್ಪಾಡಿ ಮಾತನಾಡಿ “ಇಂದಿನ ಕಾಲಘಟ್ಟದಲ್ಲಿ ನಮ್ಮ ಕಲೆ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕು ಎಂಬ ಅಭಿಲಾಷೆ ಹೊಂದಿರುವ ಕುಶೆ ಸಂಸ್ಥೆಯ ಸಾಧನೆ ಅಮೋಘವಾದುದು, ಮಕ್ಕಳಲ್ಲಿರುವ ವ್ಯಕ್ತಿತ್ವ ವಿಕಸನಕ್ಕೆ ಪಠ್ಯದ ಜೊತೆಗೆ ಪಠ್ಯತರ ವಿಷಯಗಳು ಕೂಡ ಅತಿ ಅಗತ್ಯ, ನಮ್ಮೊಳಗಿನ ಕನಸನ್ನು ನನಸಾಗಿಸಿಕೊಳ್ಳಬೇಕಾದರೆ ಇಂತಹ ಸ್ಪರ್ಧೆಗಳ ಅಗತ್ಯವಿದೆ, ಪ್ರತಿಯೊಬ್ಬರಲ್ಲೂ ಒಂದೊಂದು ಪ್ರತಿಭೆ ಇರುತ್ತದೆ ಅದನ್ನು ಗುರುತಿಸಿ ಹೊರ ತರಬೇಕು ಎಂದರು.
    ಶಾಲೆಯ ಟ್ರಸ್ಟಿ ವಸಂತಿ ಹೊಸಬೆಟ್ಕರ್, ಪಿ. ವಿ. ಎಸ್ ಸಮೂಹ ಸಂಸ್ಥೆಯ ಮ್ಯಾನೇಜರ್ ಸಂದೇಶ್, ಅಧಿಕಾರಿ ರಾಜಾರಾಮ್ ನಾಟೇಕರ್, ಲೆಕ್ಕ ಪರಿಶೋಧಕ ರಾಮುಲ್ ನಾಯ್ಡು, ವಕೀಲರಾದ ಮಣಿರಾಜ್, ಕಾಲೇಜಿನ ಎ. ಒ. ಮುರಳೀಧರ್ ರಾವ್, ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ್ಯೆ ರಂಜಿತ, ಉಪ ಕಾರ್ಯದರ್ಶಿ ಪ್ರಶಾಂತಿ ಎಸ್., ಉಪ ಪ್ರಾಂಶುಪಾಲೆ ಪವಿತ್ರ, ಸಹ ಮುಖ್ಯ ಶಿಕ್ಷಕಿ ಸೌಜನ್ಯ ಉಪಸ್ಥಿತರಿದ್ದರು.
    ಸಾಂಸ್ಕೃತಿಕ ಸ್ಪರ್ಧೆಯ ಎಲ್ಲಾ ವಿಜೇತರಿಗೆ ಪ್ರಶಸ್ತಿ ಫಲಕ, ಪ್ರಮಾಣಪತ್ರ ಹಾಗೂ ನಗದು ನೀಡಿ ಗೌರವಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಬಿಂದುಸಾರ ಶೆಟ್ಟಿ ಸ್ವಾಗತಿಸಿ, ಉಪನ್ಯಾಸಕಿ ಅಕ್ಷತ ನಿರೂಪಿಸಿದರು, ರೇಷ್ಮಾ ಮೋಹನ್ ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleತೀರ್ಥಹಳ್ಳಿಯಲ್ಲಿ ‘ಶ್ರೀ ಹರಿ ಲೀಲಾಮೃತ’ ಯಕ್ಷಗಾನ ಪ್ರದರ್ಶನ | ನವೆಂಬರ್ 29
    Next Article ಕಾಸರಗೋಡು ಕನ್ನಡ ಭವನದಲ್ಲಿ “ಕನ್ನಡ ರಾಜ್ಯೋತ್ಸವದ ಸವಿ ಸಂಭ್ರಮ “
    roovari

    Add Comment Cancel Reply


    Related Posts

    ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ ‘ಯಕ್ಷಧ್ರುವ ಪಟ್ಲ ದಶಮ ಸಂಭ್ರಮ 2025’ | ಜೂನ್ 01

    May 28, 2025

    ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಹಿರಿಯ ಚೇತನ ಪ್ರೊ. ಹೇರಂಜೆ ಕೃಷ್ಣ ಭಟ್ಟರ ನುಡಿ ನಮನ

    May 21, 2025

    ಯಕ್ಷಧ್ರುವ ಪಟ್ಲ ಫೌಂಡೇಶನ್ ಯೂರೋಪ್ ಘಟಕದಿಂದ ‘ಭಾರತ್ ಕಲಾ ವೈಭವ’ ಸಾಂಸ್ಕೃತಿಕ ಉತ್ಸವ

    May 14, 2025

    ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಿರಿಪರ್ಬ- 2025’ ತುಳು ಸಾಂಸ್ಕೃತಿಕ ಉತ್ಸವ

    May 10, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.