Subscribe to Updates

    Get the latest creative news from FooBar about art, design and business.

    What's Hot

    ಕರ್ನಾಟಕ ಲೇಖಕಿಯರ ಸಂಘದ 2025ನೆಯ ಸಾಲಿನ ಪುಸ್ತಕ ಬಹುಮಾನಕ್ಕೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಫೆಬ್ರುವರಿ 10

    January 14, 2026

    ಮಂಗಳೂರಿನ ಪುರಭವನದಲ್ಲಿ ‘ಅನುಪಮ’ ಮಾಸಿಕದ ರಜತ ಮಹೋತ್ಸಹ ವರ್ಷಾಚರಣೆ | ಜನವರಿ 15

    January 14, 2026

    ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಶ್ರೀಮತಿ ಜಲಜಾ ಶೇಖರ್ ಆಯ್ಕೆ

    January 13, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಸರ್ಪಂಗಳ ಸುಬ್ರಹ್ಮಣ್ಯ ಭಟ್ ಸಂಸ್ಮರಣೆ ಹಾಗೂ ಪ್ರಶಸ್ತಿ ಪುರಸ್ಕಾರ
    Awards

    ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಸರ್ಪಂಗಳ ಸುಬ್ರಹ್ಮಣ್ಯ ಭಟ್ ಸಂಸ್ಮರಣೆ ಹಾಗೂ ಪ್ರಶಸ್ತಿ ಪುರಸ್ಕಾರ

    October 10, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಸರ್ಪಂಗಳ ಸುಬ್ರಹ್ಮಣ್ಯ ಭಟ್ ಸಂಸ್ಮರಣೆ ಹಾಗೂ ಪ್ರಶಸ್ತಿ ಪುರಸ್ಕಾರ ಸಮಾರಂಭವು ದಿನಾಂಕ 07-10-2023 ರಂದು ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನ ವಠಾರದಲ್ಲಿ ನಡೆಯಿತು.
    ಕಾರ್ಯಕ್ರಮದಲ್ಲಿ ಆಶೀರ್ವಚನವಿತ್ತ ಶ್ರೀಸೋದೆ ವಾದಿರಾಜ ಮಠಾಧೀಶ ಶ್ರೀಶ್ರೀವಿಶ್ವವಲ್ಲಭ ತೀರ್ಥ ಶ್ರೀಪಾದರು “ಯಕ್ಷಗಾನ ಕೇವಲ ಮನೋರಂಜನೆಗಾಗಿ ಇರುವ ಕಲೆಯಲ್ಲ. ಅದರಿಂದ ವ್ಯಕ್ತಿತ್ವದ ವಿಕಸನವಾಗುತ್ತದೆ, ನಾವು ಆರಾಧಿಸುವ ದೇವರ ಕಥನಗಳನ್ನು ಅರಿಯುವ ಅವಕಾಶವಾಗುತ್ತದೆ, ಯಕ್ಷಗಾನ ವೀಕ್ಷಿಸುವ ಸಾಮಾಜಿಕರಲ್ಲಿ ಸಂಸ್ಕಾರ ವೃದ್ಧಿಯಾಗುತ್ತದೆ. ಇಂಥ ಯಕ್ಷಗಾನಗಳನ್ನು ಸಂಘಟಿಸಿ, ಯಕ್ಷಗಾನ ಕಲಾವಿದರನ್ನು ಸಂಮಾನಿಸುವುದು ಪುಣ್ಯಪ್ರದವಾದ ಕಾರ್ಯವಾಗಿದೆ.ಯಕ್ಷಗಾನದ ಬೆಳವಣಿಗೆಯಲ್ಲಿ ಪ್ರೇಕ್ಷಕರು ಕಲಾವಿದರಷ್ಟೇ ಮುಖ್ಯ” ಎಂದು ಹೇಳಿದರು.

    ಹಿರಿಯ ಸ್ತ್ರೀವೇಷಧಾರಿ ಅಂಬಾಪ್ರಸಾದ್‌ ಪಾತಾಳ ಅವರಿಗೆ ‘ಸರ್ಪಂಗಳ ಸುಬ್ರಹ್ಮಣ್ಯ ಭಟ್‌ ಯಕ್ಷಗಾನ ಕಲಾಸಾಧಕ ಪ್ರಶಸ್ತಿ’ಯನ್ನು ಮತ್ತು ಚತುರ ಚಕ್ರತಾಳ ವಾದಕ ಬೆಳ್ತಂಗಡಿ ಕೃಷ್ಣ ಶೆಟ್ಟಿ ಅವರಿಗೆ ‘ಸರ್ಪಂಗಳ ಯಕ್ಷಗಾನ ಕಲಾಸೇವಾ ಪುರಸ್ಕಾರ’ವನ್ನು ಪ್ರದಾನ ಮಾಡಲಾಯಿತು. ಸಂಮಾನ ಸ್ವೀಕರಿಸಿ ಮಾತನಾಡಿದ ಅಂಬಾಪ್ರಸಾದ ಪಾತಾಳ ಅವರು ಪ್ರಶಸ್ತಿಯನ್ನು ನೀಡಿದ ಸರ್ಪಂಗಳ ಕುಟುಂಬಕ್ಕೆ ಮತ್ತು ಯಕ್ಷಗಾನ ಕಲಾರಂಗ ಸಂಸ್ಥೆಗೆ ಕೃತಜ್ಞತೆ ಹೇಳಿದರು. ಕೀರ್ತಿಶೇಷರಾಗಿರುವ ಸರ್ಪಂಗಳ ಸುಬ್ರಹ್ಮಣ್ಯ ಭಟ್ಟರನ್ನು ವೇದಿಕೆಯಲ್ಲಿ ನೆನಪಿಸಿಕೊಂಡ ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಲಿ ಕಡೆಕಾರ್‌ “ಸರ್ಪಂಗಳ ಸುಬ್ರಹ್ಮಣ್ಯ ಭಟ್ಟರು ಯಕ್ಷಗಾನವೂ ಸೇರಿದಂತೆ ಎಲ್ಲ ಕಲೆಗಳನ್ನು ಸದ್ದಿಲ್ಲದೆ ಪ್ರೋತ್ಸಾಹಿಸುತ್ತ ಬಂದವರು. ಅವರು ಮಾಡಿದ ಸತ್ಕಾರ್ಯಗಳಿಂದಾಗಿ ಅವರ ನೆನಪು ಈಗಲೂ ನಮ್ಮ ನಡುವೆ ಜೀವಂತವಾಗಿದೆ. ಅವರ ಪತ್ನಿ ಮತ್ತು ಮಕ್ಕಳು ಕಳೆದ ಹನ್ನೆರಡು ವರ್ಷಗಳಿಂದ ಆಯೋಜಿಸುತ್ತ ಬಂದಿರುವ ಸರ್ಪಂಗಳ ಯಕ್ಷೋತ್ಸವ-2023ವು ಅವರ ನಿಜವಾಗಿ ಆತ್ಮ ಸಂತೃಪ್ತಿಯನ್ನು ಉಂಟುಮಾಡುತ್ತಿರಬೇಕು” ಎಂದರು.

    ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್‌, ಸರ್ಪಂಗಳ ಯಕ್ಷೋತ್ಸವದ ಆಯೋಜಕರಾದ ನಳಿನಿ ಸುಬ್ರಹ್ಮಣ್ಯ ಭಟ್‌, ಡಾ.ಶೈಲಜಾ ಎಸ್‌, ಡಾ.ನರೇಂದ್ರ ಶೆಣೈ, ಅನಿರುದ್ಧ, ಆವಂತಿಕಾ ಉಪಸ್ಥಿತರಿದ್ದರು.ಇದೇ ಸಂದರ್ಭದಲ್ಲಿ ತೆಂಕು ತಿಟ್ಟಿನ ಪ್ರಸಿದ್ಧ ಕಲಾವಿದರಿಂದ ‘ಸಹಸ್ರಕರ’ ಯಕ್ಷಗಾನ ಸೊಗಸಾಗಿ ಪ್ರಸ್ತುತಗೊಂಡಿತು.

    Share. Facebook Twitter Pinterest LinkedIn Tumblr WhatsApp Email
    Previous Articleವಿಶೇಷ ಲೇಖನ | ಕಾರಂತರು ಮತ್ತು ಯಕ್ಷಗಾನ
    Next Article ಕಲಾ ವಿಮರ್ಶೆ | ಗಣಪತಿ ಹಾಗೂ ಕೃಷ್ಣನನ್ನು ದರ್ಶಿಸಿದ “ಮಾರುತ ಪ್ರಿಯ” ಕಲಾ ಪ್ರದರ್ಶನ
    roovari

    Add Comment Cancel Reply


    Related Posts

    ಕರ್ನಾಟಕ ಲೇಖಕಿಯರ ಸಂಘದ 2025ನೆಯ ಸಾಲಿನ ಪುಸ್ತಕ ಬಹುಮಾನಕ್ಕೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಫೆಬ್ರುವರಿ 10

    January 14, 2026

    ‘ಶ್ರೀಮತಿ ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಜನವರಿ 25

    January 13, 2026

    ಮಂಗಳೂರಿನ ಪುರಭವನದಲ್ಲಿ ‘ಸ್ವರ ಸಂಕ್ರಾಂತಿ’ ಹಿಂದೂಸ್ಥಾನಿ ಸಂಗೀತ ಕಛೇರಿ | ಜನವರಿ 14

    January 13, 2026

    ‘ಶಾಂತಕವಿ ಸಕ್ಕರಿ ಬಾಳಾಚಾರ್ಯ ಶಾಂತರಂಗ ನಾಟಕಕಾರ ಪ್ರಶಸ್ತಿ’ಗೆ ನಾಟಕ ಕೃತಿಗಳ ಆಯ್ಕೆ

    January 13, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.