Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಶತಾಯುಷಿ, ಕನ್ನಡದ ಖ್ಯಾತ ಬರಹಗಾರ ಡಾ. ಎ. ಎನ್. ಮೂರ್ತಿರಾವ್

    June 16, 2025

    ಭರತಾಂಜಲಿಯಿಂದ ಕಣ್ಮನ ತಣಿಸಿದ ರಂಗಪ್ರವೇಶ…ಗುರು ನಮನ..

    June 16, 2025

    ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿ ಆಹ್ವಾನ | ಕೊನೆಯ ದಿನಾಂಕ ಜೂನ್ 30

    June 16, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಸರ್ಪಂಗಳ ಸುಬ್ರಹ್ಮಣ್ಯ ಭಟ್ ಸಂಸ್ಮರಣೆ ಹಾಗೂ ಪ್ರಶಸ್ತಿ ಪುರಸ್ಕಾರ
    Awards

    ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಸರ್ಪಂಗಳ ಸುಬ್ರಹ್ಮಣ್ಯ ಭಟ್ ಸಂಸ್ಮರಣೆ ಹಾಗೂ ಪ್ರಶಸ್ತಿ ಪುರಸ್ಕಾರ

    October 10, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಸರ್ಪಂಗಳ ಸುಬ್ರಹ್ಮಣ್ಯ ಭಟ್ ಸಂಸ್ಮರಣೆ ಹಾಗೂ ಪ್ರಶಸ್ತಿ ಪುರಸ್ಕಾರ ಸಮಾರಂಭವು ದಿನಾಂಕ 07-10-2023 ರಂದು ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನ ವಠಾರದಲ್ಲಿ ನಡೆಯಿತು.
    ಕಾರ್ಯಕ್ರಮದಲ್ಲಿ ಆಶೀರ್ವಚನವಿತ್ತ ಶ್ರೀಸೋದೆ ವಾದಿರಾಜ ಮಠಾಧೀಶ ಶ್ರೀಶ್ರೀವಿಶ್ವವಲ್ಲಭ ತೀರ್ಥ ಶ್ರೀಪಾದರು “ಯಕ್ಷಗಾನ ಕೇವಲ ಮನೋರಂಜನೆಗಾಗಿ ಇರುವ ಕಲೆಯಲ್ಲ. ಅದರಿಂದ ವ್ಯಕ್ತಿತ್ವದ ವಿಕಸನವಾಗುತ್ತದೆ, ನಾವು ಆರಾಧಿಸುವ ದೇವರ ಕಥನಗಳನ್ನು ಅರಿಯುವ ಅವಕಾಶವಾಗುತ್ತದೆ, ಯಕ್ಷಗಾನ ವೀಕ್ಷಿಸುವ ಸಾಮಾಜಿಕರಲ್ಲಿ ಸಂಸ್ಕಾರ ವೃದ್ಧಿಯಾಗುತ್ತದೆ. ಇಂಥ ಯಕ್ಷಗಾನಗಳನ್ನು ಸಂಘಟಿಸಿ, ಯಕ್ಷಗಾನ ಕಲಾವಿದರನ್ನು ಸಂಮಾನಿಸುವುದು ಪುಣ್ಯಪ್ರದವಾದ ಕಾರ್ಯವಾಗಿದೆ.ಯಕ್ಷಗಾನದ ಬೆಳವಣಿಗೆಯಲ್ಲಿ ಪ್ರೇಕ್ಷಕರು ಕಲಾವಿದರಷ್ಟೇ ಮುಖ್ಯ” ಎಂದು ಹೇಳಿದರು.

    ಹಿರಿಯ ಸ್ತ್ರೀವೇಷಧಾರಿ ಅಂಬಾಪ್ರಸಾದ್‌ ಪಾತಾಳ ಅವರಿಗೆ ‘ಸರ್ಪಂಗಳ ಸುಬ್ರಹ್ಮಣ್ಯ ಭಟ್‌ ಯಕ್ಷಗಾನ ಕಲಾಸಾಧಕ ಪ್ರಶಸ್ತಿ’ಯನ್ನು ಮತ್ತು ಚತುರ ಚಕ್ರತಾಳ ವಾದಕ ಬೆಳ್ತಂಗಡಿ ಕೃಷ್ಣ ಶೆಟ್ಟಿ ಅವರಿಗೆ ‘ಸರ್ಪಂಗಳ ಯಕ್ಷಗಾನ ಕಲಾಸೇವಾ ಪುರಸ್ಕಾರ’ವನ್ನು ಪ್ರದಾನ ಮಾಡಲಾಯಿತು. ಸಂಮಾನ ಸ್ವೀಕರಿಸಿ ಮಾತನಾಡಿದ ಅಂಬಾಪ್ರಸಾದ ಪಾತಾಳ ಅವರು ಪ್ರಶಸ್ತಿಯನ್ನು ನೀಡಿದ ಸರ್ಪಂಗಳ ಕುಟುಂಬಕ್ಕೆ ಮತ್ತು ಯಕ್ಷಗಾನ ಕಲಾರಂಗ ಸಂಸ್ಥೆಗೆ ಕೃತಜ್ಞತೆ ಹೇಳಿದರು. ಕೀರ್ತಿಶೇಷರಾಗಿರುವ ಸರ್ಪಂಗಳ ಸುಬ್ರಹ್ಮಣ್ಯ ಭಟ್ಟರನ್ನು ವೇದಿಕೆಯಲ್ಲಿ ನೆನಪಿಸಿಕೊಂಡ ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಲಿ ಕಡೆಕಾರ್‌ “ಸರ್ಪಂಗಳ ಸುಬ್ರಹ್ಮಣ್ಯ ಭಟ್ಟರು ಯಕ್ಷಗಾನವೂ ಸೇರಿದಂತೆ ಎಲ್ಲ ಕಲೆಗಳನ್ನು ಸದ್ದಿಲ್ಲದೆ ಪ್ರೋತ್ಸಾಹಿಸುತ್ತ ಬಂದವರು. ಅವರು ಮಾಡಿದ ಸತ್ಕಾರ್ಯಗಳಿಂದಾಗಿ ಅವರ ನೆನಪು ಈಗಲೂ ನಮ್ಮ ನಡುವೆ ಜೀವಂತವಾಗಿದೆ. ಅವರ ಪತ್ನಿ ಮತ್ತು ಮಕ್ಕಳು ಕಳೆದ ಹನ್ನೆರಡು ವರ್ಷಗಳಿಂದ ಆಯೋಜಿಸುತ್ತ ಬಂದಿರುವ ಸರ್ಪಂಗಳ ಯಕ್ಷೋತ್ಸವ-2023ವು ಅವರ ನಿಜವಾಗಿ ಆತ್ಮ ಸಂತೃಪ್ತಿಯನ್ನು ಉಂಟುಮಾಡುತ್ತಿರಬೇಕು” ಎಂದರು.

    ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್‌, ಸರ್ಪಂಗಳ ಯಕ್ಷೋತ್ಸವದ ಆಯೋಜಕರಾದ ನಳಿನಿ ಸುಬ್ರಹ್ಮಣ್ಯ ಭಟ್‌, ಡಾ.ಶೈಲಜಾ ಎಸ್‌, ಡಾ.ನರೇಂದ್ರ ಶೆಣೈ, ಅನಿರುದ್ಧ, ಆವಂತಿಕಾ ಉಪಸ್ಥಿತರಿದ್ದರು.ಇದೇ ಸಂದರ್ಭದಲ್ಲಿ ತೆಂಕು ತಿಟ್ಟಿನ ಪ್ರಸಿದ್ಧ ಕಲಾವಿದರಿಂದ ‘ಸಹಸ್ರಕರ’ ಯಕ್ಷಗಾನ ಸೊಗಸಾಗಿ ಪ್ರಸ್ತುತಗೊಂಡಿತು.

    Share. Facebook Twitter Pinterest LinkedIn Tumblr WhatsApp Email
    Previous Articleವಿಶೇಷ ಲೇಖನ | ಕಾರಂತರು ಮತ್ತು ಯಕ್ಷಗಾನ
    Next Article ಕಲಾ ವಿಮರ್ಶೆ | ಗಣಪತಿ ಹಾಗೂ ಕೃಷ್ಣನನ್ನು ದರ್ಶಿಸಿದ “ಮಾರುತ ಪ್ರಿಯ” ಕಲಾ ಪ್ರದರ್ಶನ
    roovari

    Add Comment Cancel Reply


    Related Posts

    ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿ ಆಹ್ವಾನ | ಕೊನೆಯ ದಿನಾಂಕ ಜೂನ್ 30

    June 16, 2025

    ಡಾ.ತಲ್ಲೂರು ಶಿವರಾಮ ಶೆಟ್ಟರಿಗೆ ‘ಕರುನಾಡ ಸೇವಾ ಕಣ್ಮಣಿ’ ರಾಜ್ಯ ಪ್ರಶಸ್ತಿ

    June 16, 2025

    ಪ್ರಸಿದ್ಧ ಚಂಡೆ ವಾದಕರಾದ ಸೂರ್ಯ ದೇವಾಡಿಗ ನಿಧನ

    June 16, 2025

    ನಮ್ಮ್ ಮದ್ದಳೆ ರಾಘು ಹೆಗಡೆ ಯು. ಕೆ. ಗೆ (ಇಂಗ್ಲೆಂಡ್ ಗೆ)

    June 16, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.