Subscribe to Updates

    Get the latest creative news from FooBar about art, design and business.

    What's Hot

    ಖ್ಯಾತ ಸಾಹಿತಿ ಎಚ್. ಎಸ್. ವೆಂಕಟೇಶಮೂರ್ತಿ ನಿಧನ

    May 30, 2025

    ಬೇಸಿಗೆ ರಂಗ ಶಿಬಿರದ ವಿದ್ಯಾರ್ಥಿಗಳಿಂದ ‘ಆಷಾಢದ ಒಂದು ದಿನ’ ನಾಟಕ ಪ್ರದರ್ಶನ | ಮೇ 31

    May 30, 2025

    ಬೆಂಗಳೂರಿನ ವಾಡಿಯಾ ಸಭಾಂಗಣದಲ್ಲಿ ‘ಬೀಚಿ ರಸಾಯನ’ | ಮೇ 30

    May 29, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಡುಪಿಯಲ್ಲಿ ಎಪ್ರಿಲ್ 9ಕ್ಕೆ “ಸಾರ್ವಕಾಲಿಕ” ಪುಸ್ತಕ ಬಿಡುಗಡೆ ಸಮಾರಂಭ
    Book Release

    ಉಡುಪಿಯಲ್ಲಿ ಎಪ್ರಿಲ್ 9ಕ್ಕೆ “ಸಾರ್ವಕಾಲಿಕ” ಪುಸ್ತಕ ಬಿಡುಗಡೆ ಸಮಾರಂಭ

    April 7, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    07 ಏಪ್ರಿಲ್ 2023, ಉಡುಪಿ: ರಥಬೀದಿ ಗೆಳೆಯರು (ರಿ.) ಉಡುಪಿ ಸಾಂಸ್ಕೃತಿಕ ಸಂಘಟನೆಯ ಆಶ್ರಯದಲ್ಲಿ ಹಿರಿಯ ಅಂಕಣಕಾರ ಡಾ. ಬಿ. ಭಾಸ್ಕರ ರಾವ್ ಇವರ “ಸಾರ್ವಕಾಲಿಕ” ಪುಸ್ತಕ ಬಿಡುಗಡೆ ಸಮಾರಂಭವನ್ನು ದಿನಾಂಕ 09-04-2023 ಭಾನುವಾರ ಸಂಜೆ 4-30ಕ್ಕೆ ಉಡುಪಿಯ ಎಂ.ಜಿ.ಎಂ. ಕಾಲೇಜು, ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ.

    ಈ ಕಾರ್ಯಕ್ರಮದ ಅಧ್ಯಕ್ಷತೆ ಹಾಗೂ ಪುಸ್ತಕದ ಲೋಕರ್ಪಣೆಯನ್ನು ಹಿರಿಯ ಸಾಹಿತಿಗಳಾದ ಡಾ. ನಾ.ಮೊಗಶಾಲೆಯವರು ನೆರವೇರಿಸಲಿದ್ದು, ಶಿಕ್ಷಣ ತಜ್ಞರು, ಲೇಖಕರು ಡಾ. ಮಹಾಬಲೇಶ್ವರ ರಾವ್ ಇವರು ಕೃತಿಯ ಬಗ್ಗೆ ಮಾತನಾಡಲಿದ್ದಾರೆ. ಪುಸ್ತಕದ ಲೇಖಕರಾದ ಡಾ. ಬಿ. ಭಾಸ್ಕರ ರಾವ್ ಇವರ ಉಪಸ್ಥಿತಿಯಲ್ಲಿ ಶ್ರೀ. ಜಿ.ಪಿ. ಪ್ರಭಾಕರ ತುಮರಿಯವರು ಕಾರ್ಯಕ್ರಮ ಸಂಯೋಜನೆ ಮಾಡಲಿದ್ದಾರೆ.

    ಲೇಖಕರ ಕುರಿತು :
    ಕನ್ನಡದ ಸುಪ್ರಸಿದ್ದ ಅಂಕಣಕಾರರು ಹಾಗೂ ಸಂಸ್ಕೃತಿ ವಿಮರ್ಶಕರಾಗಿರುವ ಡಾ. ಬಿ. ಭಾಸ್ಕರ ರಾವ್ ಹೈದರಾಬಾದ್ ನ ಇಂಗ್ಲೀಷ್ ಆ್ಯಂಡ್ ಫಾರಿನ್ ಲಾಂಗ್ವೇಜಸ್ ಯುನಿವರ್ಸಿಟಿ ಮತ್ತು ಇಂಗ್ಲೆಂಡ್ ಮ್ಯಾಂಚೆಸ್ಟರ್ ವಿಶ್ವವಿದ್ಯಾನಿಲಯದಲ್ಲಿ ಶಿಕ್ಷಣ ಪಡೆದು ಮೂರು ವಿದೇಶೀ ವಿಶ್ವವಿದ್ಯಾಲಯಗಳಲ್ಲಿ ನಲ್ವತ್ತು ವರ್ಷಗಳ ಕಾಲ ಇಂಗ್ಲೀಷ್ ಭಾಷಾ ತಜ್ಞರಾಗಿ ಕೆಲಸ ಮಾಡಿದ್ದಾರೆ. ಮ್ಯಾಂಚೆಸ್ಟರ್ ವಿಶ್ವವಿದ್ಯಾನಿಲಯದಿಂದ ಅನ್ವಯಿಕ ಭಾಷಾ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಗಳಿಸಿ, ಇಂಜಿನಿಯರಿಂಗ್‌ನ ವಿವಿಧ ಶಾಖೆಗಳ ಹಾಗೂ ಬ್ಯುಸಿನೆಸ್ ಮೆನೇಜ್ಮೆಂಟ್ ನ ಹದಿನೆಂಟು ಪಿ.ಎಚ್‌.ಡಿ. ಮಹಾಪ್ರಬಂಧಗಳ ಸಂಪಾದನ ಮಾಡಿದ್ದಾರೆ. ಪ್ಲೇಟೂವಿನ ದಿ ರಿಪಬ್ಲಿಕ್, ಕೌಟಿಲ್ಯನ ಅರ್ಥಶಾಸ್ತ್ರ, ಮನುಸ್ಮೃತಿ, ಥಾಮಸ್ ಹಾಬ್ಸ್ ನ ಲವಾಯಿತನ್ ಮತ್ತು ಗರುಡ ಪುರಾಣದ ಪೋಸ್ಟ್- ಡಾಕ್ಟೋರಲ್ ತೌಲನಿಕ ಅಧ್ಯಯನದ ಜತೆಗೆ ಬೈಬಲ್, ಭಗವದ್ಗೀತೆ, ಕುರಾನ್ ಹಾಗೂ ಉಪನಿಷತ್ ಗಳಲ್ಲಿರುವ ಸಾಮ್ಯತೆಗಳಲ್ಲಿ ಧೀಮಂತ ಆಸಕ್ತಿ ಹೊಂದಿರುವ ವಿದ್ವಾಂಸ ಇವರು. ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಮಹತ್ವ ಇರುವ ಮೂರು ಸಾವಿರಕ್ಕೂ ಹೆಚ್ಚು ಲೇಖನಗಳನ್ನು ಬರೆದಿರುವ ಇವರ ಎರಡು ಕೃತಿಗಳು ಪ್ರಕಟವಾಗಿದ್ದು ಪತ್ರಿಕೋದ್ಯಮದಲ್ಲಿ ಸಲ್ಲಿಸಿದ ಸೇವೆಗಾಗಿ ಮಣಿಪಾಲದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಇದರ ಗೌರವ ಫೆಲೋಶಿಪ್‌ ಪಡೆದಿರುವುದಲ್ಲದೇ ಹಲವು ಸಮಾರಂಭಗಳಲ್ಲಿ ಗೌರವಿಸಲ್ಪಟ್ಟಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನಲ್ಲಿ ಗಮಕ ಪರಿಷತ್ತಿನಿಂದ ಮನೆ ಮನೆಗೆ ಗಮಕ
    Next Article ಪುತ್ತೂರಿನಲ್ಲಿ ‘ಮುಖಗಳು’ – ಆದಿತ್ಯ ಸದಾಶಿವ ಮೂರ್ತಿಯವರ ಜಲ ವರ್ಣದ ವಿಶೇಷ ಕಲಾ ಪ್ರದರ್ಶನ – ಎಪ್ರಿಲ್ 8ರಿಂದ 20
    roovari

    Add Comment Cancel Reply


    Related Posts

    ಖ್ಯಾತ ಸಾಹಿತಿ ಎಚ್. ಎಸ್. ವೆಂಕಟೇಶಮೂರ್ತಿ ನಿಧನ

    May 30, 2025

    ಬೆಂಗಳೂರಿನ ವಾಡಿಯಾ ಸಭಾಂಗಣದಲ್ಲಿ ‘ಬೀಚಿ ರಸಾಯನ’ | ಮೇ 30

    May 29, 2025

    ಡಾ. ನಳಿನಿ ಮೂರ್ತಿ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ

    May 29, 2025

    ಹಾಸನದ ಸಾಹಿತ್ಯ ಸಂಘಟನೆಯಿಂದ 330ನೇ ಮನೆ ಮನೆ ಕವಿಗೋಷ್ಠಿ | ಜೂನ್ 01

    May 29, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.