Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ಸಹೋದಯ ಸಭಾಂಗಣದಲ್ಲಿ ‘ಮರೆಯಲಾಗದ ಬ್ಯಾರಿ ಮಹನೀಯರು’ ಕೃತಿಗಳ ಲೋಕಾರ್ಪಣೆ | ಜೂನ್ 20

    June 16, 2025

    ವಿಶೇಷ ಲೇಖನ – ವೀಣಾ ವಾದನ ಗಂಧರ್ವ ಆರ್. ಕೆ. ಸೂರ್ಯನಾರಾಯಣ

    June 14, 2025

    ‘ಮಾತೋಶ್ರೀ ಶಂಕರಮ್ಮ ಪ. ಬಳಿಗಾರ್’ ಪ್ರಶಸ್ತಿ ಪ್ರದಾನ ಸಮಾರಂಭ | ಜೂನ್ 22

    June 14, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಸತ್ಯಮಾಲೋಕಂದ ಸಿರಿ’ ಕೃತಿ ಬಿಡುಗಡೆ
    Book Release

    ‘ಸತ್ಯಮಾಲೋಕಂದ ಸಿರಿ’ ಕೃತಿ ಬಿಡುಗಡೆ

    July 6, 2023Updated:August 19, 2023No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಶಿರ್ವ : ದಿನಾಂಕ 28-06-2023ರಂದು ನಂದಳಿಕೆ ಶ್ರೀ ಮಹಾಲಿಂಗೇಶ್ವರ ದೇವಾಲಯದ ಸಭಾಂಗಣದಲ್ಲಿ ಜರುಗಿದ ನಂದಳಿಕೆ ಚಾವಡಿ ಅರಮನೆ ಸರಳ ಎಸ್. ಹೆಗ್ಡೆಯವರು ಬರೆದ ‘ಸತ್ಯಮಾಲೋಕಂದ ಸಿರಿ’ ಎಂಬ ಪುಸ್ತಕವನ್ನು ವಿಜಯಾ ಬ್ಯಾಂಕ್‌ನ ವಿಶ್ರಾಂತ ಪ್ರಬಂಧಕ ಭುವನ ಪ್ರಸಾದ್ ಹೆಗ್ಡೆ ಲೋಕಾರ್ಪಣೆಗೊಳಿಸಿ, ಮಾತನಾಡುತ್ತಾ “ಸಿರಿಗಳ ಪಾಡ್ದನವು ಕಥೆಯ ರಚನೆಗೆ ಸಹಕಾರಿಯಾಗಿದೆ. ನಂದಳಿಕೆ ಸಿರಿ ಜಾತ್ರೆಗೆ ಪ್ರಸಿದ್ಧವಾಗಿರುವ ಸ್ಥಳ. ಇಲ್ಲಿಯ ಸಿರಿಗಳ ಕಥೆಗಳನ್ನು ಪುಸ್ತಕ ರೂಪದಲ್ಲಿ ಬರೆದಿರುವುದು ಅಭಿನಂದನಾರ್ಹವಾಗಿದೆ. ಮುಂದಿನ ಜನಾಂಗಕ್ಕೆ ಸ್ಥಳದ ಮಹತ್ವ ಹಾಗೂ ಇತಿಹಾಸ ಗುರುತಿಸಲು ಇದರಿಂದ ಸಾಧ್ಯವಾಗುತ್ತದೆ” ಎಂದು ಹೇಳಿದರು.

    ಮುಖ್ಯ ಆತಿಥಿಯಾಗಿ ಭಾಗವಹಿಸಿದ್ದ ಕಾರ್ಕಳ ಶ್ರೀ ಭುವನೇಂದ್ರ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಅರುಣ್ ಕುಮಾರ್, ಎಸ್.ಆರ್. ಮಾತನಾಡಿ, “ಸತ್ಯಮಾಲೋಕಂದ ಸಿರಿ ಪುಸ್ತಕದಲ್ಲಿ ಶ್ರೀಮಂತ ತುಳುನಾಡ ಸಂಸ್ಕೃತಿಯನ್ನು ತೆರೆದಿಡಲಾಗಿದೆ. ಕುಂದಾಪುರದಿಂದ ಹಿಡಿದು ಉಜಿರೆಯವರೆಗಿನ ಶ್ರೀಮಂತ ತುಳುನಾಡು ಸಿರಿಗಳ ಆರಾಧನೆಯ ಕಥೆಗಳು ಯುವ ಜನಾಂಗಕ್ಕೆ ತಿಳಿಸಿಕೊಡುವ ಪ್ರಯತ್ನ ಮಾಡಲಾಗಿದೆ. ಇಡೀ ತುಳುನಾಡಿನಲ್ಲಿ ಸುಮಾರು 75 ಕಡೆಗಳಲ್ಲಿ ಸಿರಿ ಆರಾಧನೆ ನಡೆಯುತ್ತದೆ. ಇದು ತುಳುನಾಡಿನ ಇತಿಹಾಸವಾಗಿದೆ. ಈ ಕೃತಿ ಮತ್ತೊಮ್ಮೆ ಇತಿಹಾಸ ಮತ್ತು ಸಂಸ್ಕೃತಿಯನ್ನು ಕಟ್ಟಿ ಕೊಟ್ಟ ಕೃತಿಯಾಗಿದೆ” ಎಂದರು.

    ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಉಡುಪಿ ತುಳುಕೂಟದ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ ಮಾತನಾಡಿ, “ಕೃತಿ ಬರೆಯಲು ಇಚ್ಚಾಶಕ್ತಿ, ಶ್ರದ್ಧೆಯೇ ಮುಖ್ಯವಾಗಿದೆ. ತುಳುನಾಡು ದೈವಗಳ ನಾಡು, ಸಿರಿಗಳ ಕಾರ್ಣಿಕದ ಮೂಲಕ ಸಂಸ್ಕೃತಿಯ ಶ್ರೀಮಂತಿಕೆ ತೋರಿಸುತ್ತದೆ. ಈ ಕೃತಿಯು ಒಂದು ಇತಿಹಾಸವಾಗಿದೆ” ಎಂದರು.

    ಲೇಖಕಿ ಸರಳಾ ಎಸ್. ಹೆಗ್ಡೆ ಮಾತನಾಡಿ, :ಪಾಡ್ದಾನಗಳಲ್ಲಿ ಒಂದು ರೀತಿಯ ಕಥೆಯಾದರೆ ಕೃತಿಗಳಲ್ಲಿ ಮತ್ತೊಂದು ರೀತಿಯಲ್ಲಿದೆ. ಅಲ್ಲದೆ ಒಬ್ಬರಿಂದ ಇನ್ನೊಬ್ಬರಿಗೆ ಸಿರಿ ಕಥೆಗಳು ಭಿನ್ನವಾಗಿರುತ್ತದೆ ಅದನ್ನು ಕ್ರೋಢೀಕರಿಸಿ ಪುಸ್ತಕ ಬರೆಯಲಾಗಿದೆ” ಎಂದರು.

    ನಂದಳಿಕೆ ಶ್ರೀ ಮಹಾಲಿಂಗೇಶ್ವರ ದೇವಾಲಯದ ಪ್ರಧಾನ ಅರ್ಚಕ ಹರೀಶ್‌ ತಂತ್ರಿ ಮಾತನಾಡಿ, “ಪುಸ್ತಕಗಳನ್ನು ಬರೆಯುವುದು ಅಷ್ಟೊಂದು ಸುಲಭದ ಮಾತಲ್ಲ. ಬರೆಯಲು ಮನಸ್ಸು ಹಾಗೂ ತಾಳ್ಮೆ ಅತೀ ಮುಖ್ಯ, ಜೊತೆಗೆ ಮಾಹಿತಿಯೂ ಬೇಕಾಗುತ್ತದೆ. ಹೀಗಿದ್ದಾಗ ಒಂದು ಸುಂದರ ಕೃತಿಯನ್ನು ರಚಿಸಲು ಸಾಧ್ಯವಾಗುತ್ತದೆ. ಸಿರಿಯ ಕಥೆಯನ್ನು ಬರೆಯಲು ದೇವರ ಅನುಗ್ರಹ ಹಾಗೂ ಹಿರಿಯರ ಆಶಿರ್ವಾದ ಲೇಖಕರ ಮೇಲಿತ್ತು” ಎಂದರು.

    ಕವತ್ತಾರು ದೇವಾಲಯದ ಅರ್ಚಕ ವಿಷ್ಣು ರಾಜ ಭಟ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ನಂದಳಿಕೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಚಾವಡಿ ಅರಮನೆ ಸುಂದರರಾಮ ಹೆಗ್ಡೆ, ಆಶಾ ಸುಹಾಸ್ ಹೆಗ್ಡೆ, ಡಾ. ಸಂದೇಶ್ ಮತ್ತಿತರರು ಉಪಸ್ಥಿತರಿದ್ದರು. ನಂದಳಿಕೆ ಚಾವಡಿ ಅರಮನೆ ಸುಹಾಸ್‌ ಹೆಗ್ಡೆ ಸ್ವಾಗತಿಸಿ, ಸೀತಾರಾಂ ಭಟ್ ಕಾರ್ಯಕ್ರಮ ನಿರೂಪಿಸಿ, ಸುಧಾಕರ್ ರಾವ್ ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಾರಥ್ಯದಲ್ಲಿ ‘ಭಾಗವತಿಕೆ ಅಧ್ಯಯನ ಶಿಬಿರ’
    Next Article ಸಾಹಿತಿ ಪ. ರಾಮಕೃಷ್ಣ ಶಾಸ್ತ್ರಿಗೆ ಅಭಿನಂದನಾ ಸಮಾರಂಭ | ಜುಲೈ 8ರಂದು  
    roovari

    Add Comment Cancel Reply


    Related Posts

    ಮಂಗಳೂರಿನ ಸಹೋದಯ ಸಭಾಂಗಣದಲ್ಲಿ ‘ಮರೆಯಲಾಗದ ಬ್ಯಾರಿ ಮಹನೀಯರು’ ಕೃತಿಗಳ ಲೋಕಾರ್ಪಣೆ | ಜೂನ್ 20

    June 16, 2025

    ‘ಮಾತೋಶ್ರೀ ಶಂಕರಮ್ಮ ಪ. ಬಳಿಗಾರ್’ ಪ್ರಶಸ್ತಿ ಪ್ರದಾನ ಸಮಾರಂಭ | ಜೂನ್ 22

    June 14, 2025

    ಡಾ. ಪುರುಷೋತ್ತಮ್ ಬಿಳಿಮಲೆ ಇವರಿಗೆ ‘ಕನ್ನಡ ಪಯಸ್ವಿನಿ ಪ್ರಶಸ್ತಿ’

    June 14, 2025

    ಕರುನಾಡಿನ ಹದಿನೈದು ವೀರ ವನಿತೆಯರ ಬಗ್ಗೆ ಕವನ ಆಹ್ವಾನ | ಕೊನೆಯ ದಿನಾಂಕ ಜುಲೈ 15

    June 14, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.