Subscribe to Updates

    Get the latest creative news from FooBar about art, design and business.

    What's Hot

    ಯಕ್ಷಧ್ರುವ ಪಟ್ಲ ಫೌಂಡೇಶನ್ ಯೂರೋಪ್ ಘಟಕದಿಂದ ‘ಭಾರತ್ ಕಲಾ ವೈಭವ’ ಸಾಂಸ್ಕೃತಿಕ ಉತ್ಸವ

    May 14, 2025

    ಬೆಂಗಳೂರಿನ ರಂಗಶಂಕರದಲ್ಲಿ ‘ರೊಶೊಮನ್’ ನಾಟಕ ಪ್ರದರ್ಶನ | ಮೇ 17

    May 13, 2025

    ಸಂವಾಹಿನಿ ಹಳೆ ವಿದ್ಯಾರ್ಥಿ ಸಂಘದ ಅಡಿಯಲ್ಲಿ ‘ಯಾದೇ’ ಸಂಭ್ರಮಾಚರಣೆ

    May 13, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಭಾಸ್ಕರ ರೈ ಕುಕ್ಕುವಳ್ಳಿಯವರ ಕವನ ಸಂಕಲನ ಲೋಕಾರ್ಪಣೆ – ವಿಚಾರಗೋಷ್ಠಿ
    Book Release

    ಭಾಸ್ಕರ ರೈ ಕುಕ್ಕುವಳ್ಳಿಯವರ ಕವನ ಸಂಕಲನ ಲೋಕಾರ್ಪಣೆ – ವಿಚಾರಗೋಷ್ಠಿ

    November 20, 2024Updated:January 7, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಯಕ್ಷಾಂಗಣ ಮಂಗಳೂರು, ಯಕ್ಷಗಾನ ಚಿಂತನ ಮಂಥನ ಮತ್ತು ಪ್ರದರ್ಶನ ವೇದಿಕೆ ಸಹಯೋಗದಲ್ಲಿ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಇವರ ನೂತನ ಕೃತಿ ‘ಸೀಯನ’ ಚೀಪೆ ಕೋಪೆದ ಪಾಕ ಪದೊಕುಲು ಕವನ ಸಂಕಲನದ  ಲೋಕಾರ್ಪಣೆ ಮತ್ತು ವಿಚಾರಗೋಷ್ಠಿ ಕಾರ್ಯಕ್ರಮವು ದಿನಾಂಕ 17 ನವೆಂಬರ್ 2024ರಂದು ಕದ್ರಿ ಶ್ರೀ ಮಂಜುನಾಥ ದೇವಾಲಯದ ಆವರಣದಲ್ಲಿ ನಡೆಯಿತು.
    ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳಿಸಿದ ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ವಿಶ್ರಾಂತ ಪ್ರಾಧ್ಯಾಪಕ ಮತ್ತು ಹಿರಿಯ ಜಾನಪದ ಸಂಶೋಧಕರಾದ ಪ್ರೊ. ಎ. ವಿ. ನಾವಡ ಮಾತನಾಡಿ “ತುಳು ಭಾಷೆಯಲ್ಲಿ ಬರೆಯುವ ಹೆಚ್ಚಿನ ಲೇಖಕರು ಭಾಷೆಯ ಬಗ್ಗೆ ಗಂಭೀರವಾಗಿ ಯೋಚಿಸುವುದಿಲ್ಲ. ಆದರೆ ಭಾಸ್ಕರ ರೈ ಕುಕ್ಕುವಳ್ಳಿಯವರ ‘ಸೀಯನ’ ಕೃತಿಯಲ್ಲಿ ವಸ್ತುವೈವಿಧ್ಯತೆಯೊಂದಿಗೆ ಭಾಷೆಯನ್ನು ಸಶಕ್ತವಾಗಿ ಬಳಸಲಾಗಿದೆ. ‘ಸೀಯನ’ ಶೀರ್ಷಿಕೆಯೇ ಅಪ್ಪಟ ತುಳು ದೇಸಿ ಪದ. ಮೂರು ವಿಭಾಗಗಳಲ್ಲಿ ಪ್ರಕಟವಾಗಿರುವ ನೂರಕ್ಕೂ ಹೆಚ್ಚಿನ ಅವರ ಕವಿತೆಗಳಲ್ಲಿ ತುಳು ಬದುಕಿನ ನೈಜ ಚಿತ್ರಣವನ್ನು ವಿವಿಧ ಆಯಾಮಗಳಲ್ಲಿ ಕಟ್ಟಿ ಕೊಡಲಾಗಿದೆ. ಆಧುನಿಕ ಕವಿತೆಗಳು ನವೋದಯ ಕಾವ್ಯದ ದಾರಿಯಲ್ಲಿ ಸಾಗುತ್ತಿವೆ. ಅಲ್ಲಿ ಕನ್ನಡ, ಸಂಸ್ಕೃತ, ಇಂಗ್ಲಿಷ್ ಪದಗಳು ಧಾರಾಳ ಬಳಕೆಯಾಗುತ್ತವೆ. ತುಳು ಕವಿಗಳೂ ಅದನ್ನು ಅನುಸರಿಸುತ್ತಿರುವುದು ಖೇದಕರ. ನಮ್ಮ ಕವಿಗಳು ಹೆಚ್ಚೆಚ್ಚು ತುಳು ಪಾಡ್ದನಗಳನ್ನು ಓದಬೇಕಾದ ಅಗತ್ಯವಿದೆ. ಜೊತೆಗೆ ತುಳು  ಕೃತಿಗಳ ಭಾಷಾಂತರ ಪ್ರಕ್ರಿಯೆಯೂ ಬಿರುಸಾಗಿ ನಡೆದು, ಅಕಾಡೆಮಿ ಅದನ್ನು ಪ್ರಕಟಿಸಬೇಕು. ‘ಸೀಯನ’ದ ಹಾಡುಗಳು ಕನ್ನಡದಲ್ಲೂ ಬರಲಿ.” ಎಂದು ಆಶಿಸಿದರು.
     ಇದೇ ಸಂದರ್ಭದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ‘ತುಳು ಆಟೊ – ಪ್ರಸಂಗ ಬೊಕ್ಕ ಪ್ರಯೋಗ’ ವಿಷಯದಲ್ಲಿ ಯಕ್ಷಗಾನ ವಿಚಾರಗೋಷ್ಠಿ ಜರಗಿತು. ಯಕ್ಷಗಾನ ಕಲಾವಿದ ಮತ್ತು ಪ್ರಸಂಗಕರ್ತ ತಾರಾನಾಥ ವರ್ಕಾಡಿ ‘ತುಳುಟು ಪುರಾಣ ಪ್ರಸಂಗೊಲು’ ವಿಷಯದ ಕುರಿತು ಮಾತನಾಡಿದರು. ಶಿಕ್ಷಕ, ಭಾಗವತ ಮತ್ತು ಪ್ರಸಂಗಕರ್ತ ಹರೀಶ್ ಶೆಟ್ಟಿ ಸೂಡ ‘ ತುಳು ಜಾನಪದ ಪ್ರಸಂಗೊ ಬೊಕ್ಕ ಕಲ್ಪ ಕತೆಕ್ಲು’ ವಿಚಾರವಾಗಿ ಪ್ರಬಂಧ ಮಂಡಿಸಿದರು. ಕರ್ನಾಟಕ ಜಾನಪದ, ಯಕ್ಷಗಾನ ಮತ್ತು ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಗೋಷ್ಠಿಯ ಅಧ್ಯಕ್ಷತೆ ವಹಿಸಿ ಸಮನ್ವಯಗೊಳಿಸಿದರು. ಮಹಾಬಲ ಶೆಟ್ಟಿ ಕೂಡ್ಲು ಮತ್ತು ಹರಿಶ್ಚಂದ್ರ ನಾಯಗ ಮಾಡೂರು ಪ್ರತಿಕ್ರಿಯೆ ಸಲ್ಲಿಸಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಎ. ಸಿ. ಭಂಡಾರಿ ದೀಪ ಬೆಳಗಿಸಿ ಸಮಾರಂಭವನ್ನು ಉದ್ಘಾಟಿಸಿದರು.  ಕೃತಿಕರ್ತ ಭಾಸ್ಕರ ರೈ ಕುಕ್ಕುವಳ್ಳಿ ಸ್ವಾಗತಿಸಿ, ರವೀಂದ್ರ ರೈ ಕಲ್ಲಿಮಾರು ಕೃತಿ ಪರಿಚಯ ನೀಡಿದರು.  ಎ. ಕೆ. ಜಯರಾಮ ಶೇಖ, ರಾಜಾರಾಮ ಶೆಟ್ಟಿ ಮನವಳಿಕೆ, ಲಕ್ಷ್ಮೀನಾರಾಯಣ ರೈ ಹರೇಕಳ, ವಾಸಪ್ಪ ಶೆಟ್ಟಿ ಬೆಳ್ಳಾರೆ, ನಿವೇದಿತಾ ಎನ್. ಶೆಟ್ಟಿ, ಸುಮಾ ಪ್ರಸಾದ್ ಉಪಸ್ಥಿತರಿದ್ದರು. ಜಿಲ್ಲೆಯ ಖ್ಯಾತ ಗಾಯಕ ಹಾಗೂ ಆರ್ಯಭಟ ಪ್ರಶಸ್ತಿ ಪುರಸ್ಕೃತರಾದ ತೋನ್ಸೆ ಪುಷ್ಕಳ ಕುಮಾರ್ ಮತ್ತು ತಂಡದವರು ‘ಸೀಯನ ಪದರಂಗಿತ’ ಕಾರ್ಯಕ್ರಮದಲ್ಲಿ ಕವನ ಸಂಕಲನದ ಪ್ರಮುಖ ಹಾಡುಗಳನ್ನು  ಸ್ವರ ಸಂಯೋಜಿಸಿ ಹಾಡಿದರು.
    ಕಾರ್ಯಕ್ರಮದ ಅಂಗವಾಗಿ ಹರೀಶ್ ಶೆಟ್ಟಿ ಸೂಡ ವಿರಚಿತ ‘ರೆಂಜೆ ಬನೊತ ಲೆಕ್ಯೆಸಿರಿ’ ತುಳು ಯಕ್ಷಗಾನ ತಾಳಮದ್ದಳೆ ಜರಗಿತು. ಅರ್ಥದಾರಿಗಳಾಗಿ ಭಾಸ್ಕರ ರೈ ಕುಕ್ಕುವಳ್ಳಿ , ಸಂಜಯ ಕುಮಾರ್ ಶೆಟ್ಟಿ ಗೋಣಿಬೀಡು, ಡಾ. ದಿನಕರ ಎಸ್. ಪಚ್ಚನಾಡಿ, ಗಣೇಶ್ ಶೆಟ್ಟಿ ಕನ್ನಡಿಕಟ್ಟೆ, ಅವಿನಾಶ್ ಶೆಟ್ಟಿ ಉಬರಡ್ಕ, ಜಯರಾಮ ಪೂಜಾರಿ ನರಿಕೊಂಬು ಹಾಗೂ ಹಿಮ್ಮೇಳದಲ್ಲಿ ಭಾಗವತರಾಗಿ ಹರೀಶ್ ಶೆಟ್ಟಿ ಸೂಡಾ, ಚೆಂಡೆ-ಮದ್ದಳೆಗಳಲ್ಲಿ ಕೋಳ್ಯೂರು ಭಾಸ್ಕರ ಮತ್ತು ರೋಹಿತ್ ಉಚ್ಚಿಲ್ ಸಹಕರಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಸಾಹಿತ್ಯ ಸದನದಲ್ಲಿ ‘ಓದು ಸಂವಾದ’ ಮತ್ತು ‘ಕೃತಿ ಬಿಡುಗಡೆ’ ಸಮಾರಂಭ | ನವೆಂಬರ್ 23 ಮತ್ತು 24
    Next Article ಮಂಗಳೂರಿನ ಸನಾತನ ನಾಟ್ಯಾಲಯದಲ್ಲಿ ‘ಭರತನಾಟ್ಯಂ ಕಾರ್ಯಾಗಾರ’ | ಡಿಸೆಂಬರ್ 9 ಮತ್ತು 10
    roovari

    Add Comment Cancel Reply


    Related Posts

    ಸಂವಾಹಿನಿ ಹಳೆ ವಿದ್ಯಾರ್ಥಿ ಸಂಘದ ಅಡಿಯಲ್ಲಿ ‘ಯಾದೇ’ ಸಂಭ್ರಮಾಚರಣೆ

    May 13, 2025

    ಕೊಡಗು ಪತ್ರಿಕಾ ಭವನದಲ್ಲಿ ದಿ. ಬಿ.ಎಸ್. ಗೋಪಾಲಕೃಷ್ಣರವರ ಸ್ಮರಣಾರ್ಥ ದತ್ತಿನಿಧಿ ಪ್ರಶಸ್ತಿ ಪ್ರದಾನ | ಮೇ 15

    May 13, 2025

    ವಿವೇಕವಾಣಿ ಸರಣಿ ಉಪನ್ಯಾಸ ಕಾರ್ಯಕ್ರಮದ ನಲ್ವತ್ತೈದನೇ ಉಪನ್ಯಾಸ

    May 13, 2025

    ಗಣೇಶ ಪ್ರಸಾದಜೀಯವರ 9ನೆಯ ಕೃತಿ ‘ಕಾಂತೆ ಕವಿತೆ’ ಲೋಕಾರ್ಪಣೆ

    May 13, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.