Subscribe to Updates

    Get the latest creative news from FooBar about art, design and business.

    What's Hot

    ಕದ್ರಿ ಯಕ್ಷ ಮಂಜುಳಾ ಮಹಿಳಾ ಬಳಗದವರಿಂದ ‘ಯಕ್ಷಗಾನ ತಾಳಮದ್ದಳೆ’ | ಫೆಬ್ರವರಿ 24

    February 21, 2026

    ಕೋಟ ‘ಅಹರ್ನಿಶ’ದಲ್ಲಿ ‘ಯಕ್ಷ ಗಾನ ವೈಭವ’

    February 21, 2026

    ‘ಮಲಬಾರ್ ವಿಶ್ವರಂಗ ಪುರಸ್ಕಾರ-2026’ಕ್ಕೆ ಐವರು ಹಿರಿಯ ರಂಗಕರ್ಮಿಗಳು

    February 21, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ರಾಜ್ಯಮಟ್ಟದ ‘ಅಮ್ಮ ಪ್ರಶಸ್ತಿ’ಗೆ ಲೇಖಕರ ಆಯ್ಕೆ
    Awards

    ರಾಜ್ಯಮಟ್ಟದ ‘ಅಮ್ಮ ಪ್ರಶಸ್ತಿ’ಗೆ ಲೇಖಕರ ಆಯ್ಕೆ

    November 20, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಲಬುರಗಿ : ಜಿಲ್ಲೆಯ ಸೇಡಂ ತಾಲೂಕಿನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದಿಂದ ಕೊಡಮಾಡುವ ರಾಜ್ಯಮಟ್ಟದ ‘ಅಮ್ಮ ಪ್ರಶಸ್ತಿ’ಗೆ 10 ಮಂದಿ ಲೇಖಕರು ಆಯ್ಕೆಯಾಗಿದ್ದಾರೆ.

    ವಿದ್ಯಾರಶ್ಮಿ ಪೆಲತ್ತಡ್ಕ – ಕರೆ ದಡ, ಡಾ. ಎಚ್.ಎಸ್. ಸತ್ಯನಾರಾಯಣ – ಬಿದಿರ ತಡಿಕೆ, ಪ್ರಭಾವತಿ ದೇಸಾಯಿ – ಸೆರಗಿಗಂಟಿದ ಕಂಪು, ವೀರೇಂದ್ರ ರಾವಿಹಾಳ್ – ಡಂಕಲ್ ಪೇಟೆ, ಪೂರ್ಣಿಮಾ ಮಾಳಗಿಮನಿ – ಮ್ಯಾಜಿಕ್ ಸೌಟು, ದ್ವಾರನಕುಂಟೆ ಪಾತಣ್ಣ – ರಾಣಿ ಅಹಲ್ಯಾಬಾಯಿ ಹೋಳ್ಕರ್, ಗುರುಪ್ರಸಾದ ಕಂಟಲಗೆರೆ – ಅಟ್ರಾಸಿಟಿ, ಡಾ. ಪರ್ವಿನ್ ಸುಲ್ತಾನಾ – ಶರಣರ ನಾಡಿನ ಸೂಫಿ ಮಾರ್ಗ, ಡಾ. ಪ್ರಕಾಶ ಭಟ್ – ಹಳ್ಳಿಗಳನ್ನು ಕಟ್ಟುವ ಕಷ್ಟ ಸುಖ ಹಾಗೂ ಮಂಜುನಾಥ ಚಾಂದ್ – ಪ್ರಿಯ ಮೀರಾ ಕೃತಿಗಳನ್ನು 24ನೇ ವರ್ಷದ ‘ಅಮ್ಮ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ ಎಂದು ಪ್ರಶಸ್ತಿ ಸಂಚಾಲಕಿ ರತ್ನಕಲಾ ಮಹಿಪಾಲ ರೆಡ್ಡಿ ಮುನ್ನೂರ್ ತಿಳಿಸಿದ್ದಾರೆ. ಪತ್ರಕರ್ತ-ಲೇಖಕ ಮಹಿಪಾಲ ರೆಡ್ಡಿ ಮುನ್ನೂರ್ ತಮ್ಮ ಅಮ್ಮನ ನೆನಪಿನಲ್ಲಿ ಸ್ಥಾಪಿಸಿರುವ ಈ ಪ್ರಶಸ್ತಿಯು ತಲಾ ರೂ.2,500/- ನಗದು ಪುರಸ್ಕಾರ, ನೆನಪಿನ ಕಾಣಿಕೆ, ಪ್ರಮಾಣ ಪತ್ರ, ಈ ನೆಲದ ತೊಗರಿ ಬೇಳೆಗಳನ್ನು ಒಳಗೊಂಡಿರುತ್ತದೆ. ಎಲ್ಲಾ ವಿಭಾಗದಲ್ಲಿ ಲೇಖಕರು ಪ್ರಶಸ್ತಿಯನ್ನು ಹಂಚಿಕೊಂಡಿದ್ದು, ದಿನಾಂಕ 26 ನವೆಂಬರ್ 2024ರಂದು ಸೇಡಂನ ಶ್ರೀ ಪಂಚಲಿಂಗೇಶ್ವರ ದೇವಾಲಯದ ಶಾಂಭವಿ ರಂಗ ಮಂಟಪದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರು ರಥಬೀದಿಯಲ್ಲಿ ‘ವಿಶ್ವಕರ್ಮ ಕಲಾ ಸಿಂಚನ 2024’ | ಕೊನೆಯ ದಿನಾಂಕ ಡಿಸೆಂಬರ್ 08
    Next Article ಮಧುರತರಂಗ ‘ಗಾಯನಜ್ಯೋತಿ’ ಮನರಂಜನಾ ಕಾರ್ಯಕ್ರಮ | ನವೆಂಬರ್ 22
    roovari

    Add Comment Cancel Reply


    Related Posts

    ‘ಮಲಬಾರ್ ವಿಶ್ವರಂಗ ಪುರಸ್ಕಾರ-2026’ಕ್ಕೆ ಐವರು ಹಿರಿಯ ರಂಗಕರ್ಮಿಗಳು

    February 21, 2026

    ವಿವೇಕಾನಂದ ಕಾಲೇಜಿನಲ್ಲಿ ಶಿವಾಜಿ ಜೀವನ ಚರಿತ್ರೆ ವಿಚಾರ ಸಂಕಿರಣ

    February 21, 2026

    ಶಿಲ್ಪಕಲಾ ಅಕಾಡೆಮಿಯ ‘ಗೌರವ’ ಮತ್ತು ‘ಶಿಲ್ಪಶ್ರೀ’ ಪ್ರಶಸ್ತಿ ಪ್ರಕಟ

    February 21, 2026

    ಪುಸ್ತಕ ವಿಮರ್ಶೆ | ಮಾಲತಿ ಪಟ್ಟಣಶೆಟ್ಟಿಯವರ ಮಕ್ಕಳ ಮೂರು ನಾಟಕಗಳು

    February 21, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.