Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ಪುರಭವನದಲ್ಲಿ ಪ್ರಶಸ್ತಿ ಪ್ರದಾನ, ನಾಟಕ ಪ್ರದರ್ಶನ ಮತ್ತು ವಿಚಾರ ಮಂಥನ ಕಾರ್ಯಕ್ರಮ | ಮೇ 11 

    May 10, 2025

    ಬೆಂಗಳೂರಿನ ಶ್ರೀ ವಿನಾಯಕ ದೇವಸ್ಥಾನದಲ್ಲಿ ‘ಸುದರ್ಶನ ಗರ್ವಭಂಗ’ ಮತ್ತು ‘ಕುಶ ಲವ ಕಾಳಗ’ ಪ್ರದರ್ಶನ | ಮೇ 17

    May 10, 2025

    ಕಟೀಲಿನಲ್ಲಿ ‘ತುಳುನಾಡು ಮತ್ತು ಕಳರಿ’ ವಿಚಾರಗೋಷ್ಠಿ ಮತ್ತು ಚರ್ಚಾಗೋಷ್ಠಿ | ಮೇ 24

    May 10, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ಸಭಾಂಗಣದಲ್ಲಿ ವಿಚಾರ ಸಂಕಿರಣ
    Literature

    ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ಸಭಾಂಗಣದಲ್ಲಿ ವಿಚಾರ ಸಂಕಿರಣ

    November 9, 2024Updated:January 7, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಮಡಿಕೇರಿ:  ಕನ್ನಡ ಸಿರಿ ಸ್ನೇಹ ಬಳಗದ ವತಿಯಿಂದ ಕರ್ನಾಟಕ ಸುವರ್ಣ ಸಂಭ್ರಮ ಅಂಗವಾಗಿ ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಸಹಯೋಗದೊಂದಿಗೆ ಪಂಜೆ ಮಂಗೇಶರಾಯರ ಬದುಕು-ಬರಹ ಕುರಿತು ವಿಚಾರ ಸಂಕಿರಣ ಹಾಗೂ ಚಿತ್ರಕಲಾ ಸ್ಪರ್ಧೆಯು ದಿನಾಂಕ 05 ನವಂಬರ್ 2024ರ ಮಂಗಳವಾರದಂದು ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ಸಭಾಂಗಣದಲ್ಲಿ ನಡೆಯಿತು.
    ಕಾರ್ಯಕ್ರಮವನ್ನು ಉದ್ಘಾseminar ಟಿಸಿದ ಮಡಿಕೇರಿ ನಗರಸಭಾ ಸದಸ್ಯ ಬಿ. ವೈ. ರಾಜೇಶ್ ಯಲ್ಲಪ್ಪ ಮಾತನಾಡಿ “ಖ್ಯಾತ ಸಾಹಿತಿ ಪಂಜೆ ಮಂಗೇಶರಾಯರ ಬದುಕು ಎಲ್ಲರಿಗೂ ಆದರ್ಶವಾಗಬೇಕು. ಮಂಗೇಶರಾಯರು ಸಾಹಿತ್ಯ ಕ್ಷೇತ್ರದಲ್ಲಿ ಸಾಕಷ್ಟು ಸಾಧನೆಗಳನ್ನು ಮಾಡಿದ್ದಾರೆ. ಅವರ ಕೊಡುಗೆ ಅಪಾರವಾದುದು. ಮಡಿಕೇರಿಯ ಪದವಿ ಪೂರ್ವ ಕಾಲೇಜಿನಲ್ಲೂ ಮುಖ್ಯ ಶಿಕ್ಷಕರಾಗಿ ಸೇವೆ ಮಾಡಿರುವುದು ಹೆಮ್ಮೆಯ ವಿಷಯ. ಅವರು ರಚಿಸಿರುವ ಹುತ್ತರಿ ಹಾಡು ಇಂದಿಗೂ ಪ್ರಸ್ತುತವಾಗಿದೆ. ಅವರ ಸರಳ ಜೀವನ ಆದರ್ಶಪ್ರಾಯವಾಗಿದೆ. ಸ್ನೇಹ ಸಿರಿ ಬಳಗದಿಂದ ಹಮ್ಮಿಕೊಳ್ಳುವ ಕಾರ್ಯಕ್ರಮಗಳಿಗೆ ಇನ್ನು ಮುಂದೆಯೂ  ಸಹಕಾರ ನೀಡಲಾಗುವುದು.” ಎಂದು ಹೇಳಿದರು.
    ಕನ್ನಡ ಸಿರಿ ಸ್ನೇಹ ಬಳಗದ ಅಧ್ಯಕ್ಷ ಹಾಗೂ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಬಿ. ಎಸ್. ಲೋಕೇಶ್ ಸಾಗರ್ ಮಾತನಾಡಿ “ಈ ವರ್ಷ ಹಲವು ಸಂಭ್ರಮಗಳಿಗೆ ಸಾಕ್ಷಿಯಾಗಿದೆ. ಕರ್ನಾಟಕಕ್ಕೆ ಸುವರ್ಣ ಸಂಭ್ರಮ, ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ಧ ಹೋರಾಡಿ ಗೆಲುವು ಸಾಧಿಸಿದ 200ನೇ ವರ್ಷ, ಅದೇ ರೀತಿ ಪಂಜೆ ಮಂಗೇಶರಾಯರು ಜನಿಸಿ 150ನೇ ವರ್ಷವಾಗಿದೆ. ಇಂತಹ ಸುಸಂದರ್ಭದಲ್ಲಿ ಮಂಗೇಶರಾಯರು ಸೇರಿದಂತೆ ನಾಡಿಗಾಗಿ ಸೇವೆ ಸಲ್ಲಿಸಿದ ಮಹನೀಯರನ್ನು ನೆನಪಿಸಿಕೊಳ್ಳವ ಮತ್ತು ಅವರ ಬಗ್ಗೆ ಇಂದಿನ ಪೀಳಿಗೆಗೆ ಪರಿಚಯ ಮಾಡಿಕೊಡುವ ಉದ್ದೇಶದಿಂದ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.” ಎಂದು ಹೇಳಿದರು.
    ನಗರಸಭಾ ಸದಸ್ಯ ಮಹೇಶ್ ಜೈನ್ ಮಾತನಾಡಿ “ಕನ್ನಡ ಸ್ನೇಹ ಸಿರಿ ಬಳಗ ಕನ್ನಡ ನಾಡು ಮತ್ತು ನುಡಿಗಾಗಿ ಸೇವೆ ಸಲ್ಲಿಸಿದವರ ನೆನಪು ಮಾಡಿಕೊಳ್ಳುವಂತಹ ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದೆ. ಪಂಜೆ ಮಂಗೇಶರಾಯರ ಬಗ್ಗೆ ಕಾರ್ಯಕ್ರಮ ಹಮ್ಮಿಕೊಂಡಿರುವುದು ಉತ್ತಮ ನಡೆ. ಇನ್ನು ಮುಂದಕ್ಕೂ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತಾಗಲಿ.” ಎಂದು ಶುಭ ಹಾರೈಸಿದರು.
    ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಇದರ ಮಾಜಿ ಅಧ್ಯಕ್ಷ ಕುಡೆಕಲ್ ಸಂತೋಷ್ ಮಾತನಾಡಿ. “ಹಲವು ಸಾಧಕರನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಿದ ಸರ್ಕಾರಿ ಪ. ಪೂ. ಕಾಲೇಜು ಸಾಧಕರ ಮನೆಯಾಗಿದೆ. ಈ ಶಾಲೆಯಲ್ಲಿ ವಿದ್ಯಾರ್ಜನೆ ಮಾಡುತ್ತಿರುವ ವಿದ್ಯಾರ್ಥಿಗಳು ಪುಣ್ಯವಂತರು. ವಿದ್ಯಾರ್ಥಿಗಳು ಪಠ್ಯ ಮಾತ್ರವಲ್ಲದೆ ಪಠ್ಯೇತರ ಚಟುವಟಿಕೆಯಲ್ಲೂ ಭಾಗವಹಿಸಬೇಕು. ಜ್ಞಾನಾರ್ಜನೆಯೊಂದಿಗೆ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಂಡಲ್ಲಿ ಉತ್ತಮ ಅಂಕ ಗಳಿಸಲು ಭವಿಷ್ಯದಲ್ಲಿ ಅನುಕೂಲವಾಗುತ್ತದೆ. ಒಳ್ಳೆಯ ವಿಚಾರಗಳತ್ತ ಗಮನ ಹರಿಸಿ, ಕೆಟ್ಟ ವಿಚಾರಗಳನ್ನು ಬದಿಗಿರಿಸಿ ಜೀವನದಲ್ಲಿ ಮುಂದುವರಿಯಬೇಕು.” ಎಂದು ಕರೆ ನೀಡಿದರು.
    ಅಧ್ಯಕ್ಷತೆ ವಹಿಸಿದ್ದ ಶಾಲಾ ಉಪ ಪ್ರಾಂಶುಪಾಲೆ ಶಶಿಕಲಾ ಮಾತನಾಡಿ “ಕನ್ನಡ ಸ್ನೇಹ ಸಿರಿ ಬಳಗದ ವತಿಯಿಂದ ಹಮ್ಮಿಕೊಂಡಿರುವ ಈ ಕಾರ್ಯಕ್ರಮ ಬಹಳ ಉಪಯುಕ್ತವಾದುದಾಗಿದೆ. ಇದರಿಂದ ಮಕ್ಕಳಿಗೆ ಉತ್ತಮ ವಿಚಾರಗಳನ್ನು ತಿಳಿದುಕೊಳ್ಳಲು ಒಂದು ವೇದಿಕೆ ಸಿಕ್ಕಂತಾಗಿದೆ. ವಿದ್ಯಾರ್ಥಿಗಳು ಪಾಠದೊಂದಿಗೆ ಇತರ ಸಾಧಕರ ವಿಚಾರಗಳನ್ನು ಕೂಡ ತಿಳಿದುಕೊಳ್ಳಬೇಕಿದೆ.” ಎಂದರು.
    ವಿದ್ಯಾರ್ಥಿಗಳಿಗೆ ಸ್ಥಳದಲ್ಲೇ ಮಂಗೇಶರಾಯರ ಚಿತ್ರ ಬಿಡಿಸುವ ಸ್ಪರ್ಧೆ ಏರ್ಪಡಿಸಿ, ವಿಜೇತರಿಗೆ ಬಹುಮಾನ ನೀಡಲಾಯಿತು. ಭಾಗವಹಿಸಿದವರೆಲ್ಲರಿಗೂ ಪ್ರಶಂಸನಾ ಪತ್ರ ವಿತರಿಸಲಾಯಿತು. ಸಭಾ ಕಾರ್ಯಕ್ರಮದ ಬಳಿಕ ನಡೆದ  ಗೀತ ಗಾಯನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ  ಶಿಕ್ಷಕರು ಮಂಗೇಶರಾಯರ ಗೀತೆಗಳು ಸೇರಿದಂತೆ ಇತರ ಭಾವಗೀತೆ, ದಾಸರ ಪದಗಳನ್ನು ಹಾಡಿದರು. ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಬಿ. ಡಿ. ಶಿವಶಂಕರ್ ಉಪಸ್ಥಿತರಿದ್ದರು. ಶಿಕ್ಷಕಿ ಸೌಮ್ಯಲತಾ ಸ್ವಾಗತಿಸಿ, ಉಷಾ ನಿರೂಪಿಸಿ, ಸುಜಾತಾ ವಂದಿಸಿದರು. ಇದೇ ಸಂದರ್ಭದಲ್ಲಿ ರಾಜೇಶ್, ಮಹೇಶ್ ಜೈನಿ ಹಾಗೂ ಉಪ ಪ್ರಾಂಶುಪಾಲೆ ಶಶಿಕಲಾ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.

    Share. Facebook Twitter Pinterest LinkedIn Tumblr WhatsApp Email
    Previous Articleಸುರತ್ಕಲ್‌ನಲ್ಲಿ ರಂಗಚಾವಡಿ ವರ್ಷದ ಹಬ್ಬ ಪ್ರಶಸ್ತಿ ಪ್ರದಾನ ಮತ್ತು ನಾಟಕ ಪ್ರದರ್ಶನ | ನವೆಂಬರ್ 10
    Next Article ಕುಶಾಲನಗರದಲ್ಲಿ ಕನ್ನಡ ಕಂಠ ಗಾಯನ | ನವಂಬರ್ 11   
    roovari

    Add Comment Cancel Reply


    Related Posts

    ಮಂಗಳೂರಿನ ಪುರಭವನದಲ್ಲಿ ಪ್ರಶಸ್ತಿ ಪ್ರದಾನ, ನಾಟಕ ಪ್ರದರ್ಶನ ಮತ್ತು ವಿಚಾರ ಮಂಥನ ಕಾರ್ಯಕ್ರಮ | ಮೇ 11 

    May 10, 2025

    ಕಟೀಲಿನಲ್ಲಿ ‘ತುಳುನಾಡು ಮತ್ತು ಕಳರಿ’ ವಿಚಾರಗೋಷ್ಠಿ ಮತ್ತು ಚರ್ಚಾಗೋಷ್ಠಿ | ಮೇ 24

    May 10, 2025

    ಮಾಣಿಕ್ಯ ಪ್ರಕಾಶನದ 2025ನೇ ಸಾಲಿನ ರಾಜ್ಯಮಟ್ಟದ ವಿವಿಧ ದತ್ತಿ ಪ್ರಶಸ್ತಿಗಳಿಗೆ ಕೃತಿಗಳ ಆಹ್ವಾನ

    May 10, 2025

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.