Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರು ವಿವಿಯಿಂದ ಕನಕ ರಾಷ್ಟ್ರೀಯ ವಿಚಾರಸಂಕಿರಣ
    Literature

    ಮಂಗಳೂರು ವಿವಿಯಿಂದ ಕನಕ ರಾಷ್ಟ್ರೀಯ ವಿಚಾರಸಂಕಿರಣ

    March 29, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಸಿದ್ಧಕಟ್ಟೆ : ಮಂಗಳೂರು ವಿಶ್ವವಿದ್ಯಾನಿಲಯದ ಕನಕದಾಸ ಸಂಶೋಧನಾ ಕೇಂದ್ರದ ವತಿಯಿಂದ ಸಿದ್ಧಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಸಹಯೋಗದೊಂದಿಗೆ ಏರ್ಪಡಿಸಿದ ‘ಕನಕದಾಸರ ಕಾವ್ಯಗಳು : ಸ್ವರೂಪ ಮತ್ತು ಆಶಯ’ ಎಂಬ ವಿಷಯದ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣವು ದಿನಾಂಕ 28-03-2024ರಂದು ನಡೆಯಿತು.

    ಈ ವಿಚಾರ ಸಂಕಿರಣದಲ್ಲಿ ಸಂಸ್ಕೃತಿ ಚಿಂತಕ ಮುನಿರಾಜ ರೆಂಜಾಳ ಇವರು ‘ಹರಿಭಕ್ತಿಸಾರ’ ಕೃತಿಯ ಕುರಿತು ಉಪನ್ಯಾಸ ನೀಡುತ್ತಾ “ಬದುಕಿನಲ್ಲಿ ಮೌಲ್ಯ, ಋಣಪ್ರಜ್ಞೆ, ದೇವರ ಭಯ ಇರಬೇಕು. ತನ್ನ ಧರ್ಮವನ್ನು ಅರಿತು ಆಚರಿಸುವಂತೆ ಇತರೆ ಧರ್ಮಗಳನ್ನೂ ಗೌರವಿಸಬೇಕು. ದೇವರ ವಿಷಯದಲ್ಲಿ ನಾವು ಚಿಕ್ಕವರಾಗುವುದು ಬೇಡ ಎಂಬುದು ಕನಕದಾಸರನ್ನೂ ಒಳಗೊಂಡಂತೆ ಎಲ್ಲ ಸಂತರ ಸಂದೇಶ. ಕನಕದಾಸರು ಮನುಷ್ಯನ ಅಸಹಾಯಕತೆಯನ್ನು ಅರ್ಥಮಾಡಿಕೊಂಡು ಭಕ್ತಿಯ ದಾರಿಯಲ್ಲಿ ಸಾಂತ್ವನ ಹೇಳಲು ಹರಿಭಕ್ತಿಸಾರ ಮತ್ತು ಕೆಲವು ಕೀರ್ತನೆಗಳನ್ನು ರಚಿಸಿದರು” ಎಂದು ಹೇಳಿದರು.

    ‘ರಾಮಧಾನ್ಯ ಚರಿತೆ’ ಕಾವ್ಯದ ಕುರಿತು ಮಾತನಾಡಿದ ವಾಮದಪದವು ಸ.ಪ್ರ. ಕಾಲೇಜಿನ ಪ್ರಾಧ್ಯಾಪಕಿ ಡಾ. ರೇಷ್ಮಾ ಭಟ್ ಮಾತನಾಡಿ “ಹಿಂದಿನ ಕಾವ್ಯಗಳ ಓದಿನಿಂದ ನಿಜ ಭಾರತದ ಅರಿವು ಸಾಧ್ಯವಾಗುತ್ತದೆ. ಮನುಷ್ಯನ ನಡುವಿನ ತರತಮ ಭಾವವನ್ನು ಎಲ್ಲ ಸಂತರೂ ವಿರೋಧಿಸಿದ್ದರು” ಎಂದರು. ಆಳ್ವಾಸ್ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥ ಡಾ. ಯೋಗೀಶ್ ಕೈರೋಡಿ ‘ನಳಚರಿತೆ ಕಾವ್ಯಾವಲೋಕನ’ ಮಾಡಿ “ಕನಕದಾಸರು ಕವಿ ಮಾತ್ರವಲ್ಲ ಚಿಂತಕರು ಕೂಡ. ಅವರ ಕಾವ್ಯಗಳು ಮಾನಸಿಕವಾಗಿ ಕುಗ್ಗಿ ಹೋಗುವವರಿಗೆ ಆತ್ಮಸ್ಥೈರ್ಯ ತುಂಬುವ ಕಥನವಾಗಿದೆ” ಎಂದರು.

    ವಿಚಾರಸಂಕಿರಣವನ್ನು ಉದ್ಘಾಟಿಸಿದ ಕುವೆಂಪು ಭಾಷಾ ಭಾರತಿಯ ನಿಕಟಪೂರ್ವ ಅಧ್ಯಕ್ಷ ಡಾ. ಗಿರೀಶ್ ಅಜಕ್ಕಳ “ದಾಸ ಪರಂಪರೆ ಕನ್ನಡದಲ್ಲಿ ಗಾಯನ, ದೀಕ್ಷೆಗಳ ಮೂಲಕ ಇನ್ನೂ ಜೀವಂತವಾಗಿದೆ” ಎಂದರು. ಆಶಯ ಭಾಷಣ ಮಾಡಿದ ಕನಕದಾಸ ಸಂಶೋಧನ ಕೇಂದ್ರದ ಸಂಯೋಜಕ ಡಾ. ಧನಂಜಯ ಕುಂಬ್ಳೆ “ಕನಕದಾಸರಿಗೆ ಭಕ್ತಿ ಎಂಬುದು ಅಂತರಂಗ ಮತ್ತು ಬಹಿರಂಗದ ತಲ್ಲಣಗಳಿಗೆ ಸಾಂತ್ವಾನವಾಗಿತ್ತು. ಸಾಮಾಜಿಕ ತಾರತಮ್ಯವನ್ನು ಆತ್ಮತತ್ವವನ್ನು ಪ್ರತಿಪಾದಿಸಿ ಅದರ ಮೂಲಕ ವಿರೋಧಿಸಿದ್ದರು” ಎಂದರು.

    ಪ್ರಸಿದ್ಧ ಗಮಕಿ ಮಂಜುಳಾ‌ ಸುಬ್ರಹ್ಮಣ್ಯ ಮಂಚಿ ಹಾಗೂ ಪ್ರಜ್ವಲ್ ಕಿನ್ನಿಗೋಳಿ ಕನಕದಾಸರ ಕಾವ್ಯದ ಆಯ್ದ ಭಾಗಗಳನ್ನು ಪ್ರಸ್ತುತಪಡಿಸಿದರು. ಸಿದ್ಧಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ಬಿ.ಕೆ. ಹರಿಪ್ರಸಾದ್ ಸ್ವಾಗತಿಸಿದರು. ಐಕ್ಯೂಎಸಿ ಸಂಯೋಜಕ ವಿನಯ್ ಎಂ.ಎಸ್ ಉಪಸ್ಥಿತರಿದ್ದರು. ಉಪನ್ಯಾಸಕಿ ಸುಮನ್ ಶೆಟ್ಟಿ ವಂದಿಸಿ, ಕನ್ನಡ ಉಪನ್ಯಾಸಕಿ ಸಂಧ್ಯಾ ಶೆಟ್ಟಿ ನಿರೂಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನ ‘ರಂಗ ಚಂದಿರ’ ಟ್ರಸ್ಟಿನಿಂದ ವಿಶ್ವ ರಂಗಭೂಮಿ ದಿನಾಚರಣೆ
    Next Article ಕ.ಸಾ.ಪ. ವತಿಯಿಂದ ಗುರುಲಿಂಗ ಕಾಪಸೆಯವರಿಗೆ ನುಡಿ ನಮನ
    roovari

    Add Comment Cancel Reply


    Related Posts

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025

    ಖ್ಯಾತ ಸಾಹಿತಿ ಪ್ರೊ. ಜಿ.ಎಸ್. ಸಿದ್ಧಲಿಂಗಯ್ಯ ನಿಧನ

    May 8, 2025

    ಆಳ್ವಾಸ್‌ನ ಶಿವರಾಮ ಕಾರಂತ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ

    May 7, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.