Subscribe to Updates

    Get the latest creative news from FooBar about art, design and business.

    What's Hot

    ‘ಮುಖವರ್ಣಿಕೆ – ವೇಷಭೂಷಣ ಶಿಬಿರ’ದ ಸಮಾರೋಪ ಸಮಾರಂಭ

    May 15, 2026

    ನೃತ್ಯ ವಿಮರ್ಶೆ | ಭಾವ ರಸಗಳ ರಂಗಸಂಗಮದಲ್ಲಿ ಅರಳಿದ ರಂಗಪ್ರವೇಶ

    May 15, 2026

    ಪ್ರಶಸ್ತಿಗಳನ್ನು ಹೊಡೆದುಕೊಳ್ಳಬಾರದು – ಪಡೆದುಕೊಳ್ಳಬೇಕು : ಪತ್ರಕರ್ತ ರವೀಂದ್ರ ಜೋಶಿ

    May 15, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಕಾಪು ರಂಗ ತರಂಗ ತಂಡದ ಹಿರಿಯ ಕಲಾವಿದ ಸುಜಿತ್ ಶೆಟ್ಟಿ ಪಾದೂರು ನಿಧನ
    Artist

    ಕಾಪು ರಂಗ ತರಂಗ ತಂಡದ ಹಿರಿಯ ಕಲಾವಿದ ಸುಜಿತ್ ಶೆಟ್ಟಿ ಪಾದೂರು ನಿಧನ

    April 6, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ತುಳು ರಂಗಭೂಮಿಯ ಹಿರಿಯ ಕಲಾವಿದ, ಕಾಪು ರಂಗ ತರಂಗ ನಾಟಕ ತಂಡದ ಸ್ಥಾಪಕ ಸದಸ್ಯ, ಮಾಜಿ ಸಂಚಾಲಕ ಸುಜಿತ್ ಶೆಟ್ಟಿ ಪಾದೂರು (54) ಅವರು ಅನಾರೋಗ್ಯದ ಕಾರಣದಿಂದ ದಿನಾಂಕ 03 ಏಪ್ರಿಲ್ 2026ರಂದು ನಿಧನ ಹೊಂದಿದರು. ಅವರ ಅಗಲಿಕೆಯು ಕರಾವಳಿಯ ಸಾಂಸ್ಕೃತಿಕ ಮತ್ತು ರಂಗಭೂಮಿ ಕ್ಷೇತ್ರಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ.

    ಪ್ರಸಿದ್ಧ ರಂಗ ಕಲಾವಿದರಾಗಿದ್ದ ಅವರು ಹಾಸ್ಯ ಮತ್ತು ಸಾಮಾಜಿಕ ಜವಾಬ್ದಾರಿಯ ಪಾತ್ರಗಳನ್ನು ಅತ್ಯಂತ ಯಶಸ್ವಿಯಾಗಿ ನಿಭಾಯಿಸಿ, ಪ್ರೇಕ್ಷಕರ ಮನ ಗೆದ್ದಿದ್ದರು. ಗಂಭೀರ ಸಾಮಾಜಿಕ ಜವಾಬ್ದಾರಿಯ ಪಾತ್ರಗಳನ್ನು ಅಷ್ಟೇ ತನ್ಮಯತೆಯಿಂದ ನಿರ್ವಹಿಸುತ್ತಿದ್ದರು. ಇವರ ಅಭಿನಯಕ್ಕೆ ಕರಾವಳಿಯಾದ್ಯಂತ ಅಪಾರ ಅಭಿಮಾನಿ ಬಳಗವಿತ್ತು. ಕೆ. ಲೀಲಾಧರ ಶೆಟ್ಟಿ ಇವರ ಸಾರಥ್ಯದ ‘ಕಾಪು ರಂಗ ತರಂಗ’ ಕಲಾವಿದರು ತಂಡದ ಸ್ಥಾಪಕ ಸದಸ್ಯರಾಗಿ, ತಂಡದ ಸಮಗ್ರ ನಿರ್ವಹಣೆಯ ಜವಾಬ್ದಾರಿಯನ್ನು ಅತ್ಯಂತ ಯಶಸ್ವಿಯಾಗಿ ನಿಭಾಯಿಸಿದ್ದರು. ಕಳೆದ 20 ವರ್ಷಗಳಿಂದ ತಂಡದೊಂದಿಗೆ ಗುರುತಿಸಿಕೊಂಡಿದ್ದು, ಸುಜಿತ್ ಶೆಟ್ಟಿ ಅವರು ಕೇವಲ ಸಂಘಟಕರಷ್ಟೇ ಆಗಿರದೆ, ಅದ್ಭುತ ನಟರೂ ಆಗಿದ್ದರು. ತುಳು ಮತ್ತು ಕನ್ನಡ ಚಲನಚಿತ್ರಗಳಲ್ಲೂ ಪಾತ್ರ ನಿರ್ವಹಿಸಿದ್ದರು. ಉಡುಪಿ ರಂಗ ಭೂಮಿ ತಂಡದ ಸದಸ್ಯರಾಗಿದ್ದ ಇವರು ಹಲವಾರು ಸಂಘ ಸಂಸ್ಥೆ ಗಳಲ್ಲಿ ಸೇವೆ ಸಲ್ಲಿದ್ದರು. ಕೆಲವು ಸಮಯಗಳಿಂದ ಅಸೌಖ್ಯದಿಂದಾಗಿ ನಟನೆಯಿಂದ ದೂರ ಉಳಿದಿದ್ದರು. ಮೃತರು ಪತ್ನಿ ಮತ್ತು ಪುತ್ರಿಯನ್ನು ಅಗಲಿದ್ದಾರೆ.

    artist baikady roovari theatre
    Share. Facebook Twitter Pinterest LinkedIn Tumblr WhatsApp Email
    Previous Articleಕೊಕ್ಕಡದ ಗ್ರಾಮೀಣ ಪರಿಸರದಲ್ಲಿ ರಾಮಾಯಣ ಸಪ್ತಾಹದ ಐದನೆಯ ಕಾರ್ಯಕ್ರಮ
    Next Article ಕಲಾವಿದರ ಯಕ್ಷ ಪಯಣದ ಸ್ವಗತ ‘ಯಕ್ಷಾಯಣ’ ದಾಖಲೀಕರಣ ಸರಣಿ-10
    roovari

    Add Comment Cancel Reply


    Related Posts

    ‘ಮುಖವರ್ಣಿಕೆ – ವೇಷಭೂಷಣ ಶಿಬಿರ’ದ ಸಮಾರೋಪ ಸಮಾರಂಭ

    May 15, 2026

    ನೃತ್ಯ ವಿಮರ್ಶೆ | ಭಾವ ರಸಗಳ ರಂಗಸಂಗಮದಲ್ಲಿ ಅರಳಿದ ರಂಗಪ್ರವೇಶ

    May 15, 2026

    ಪ್ರಶಸ್ತಿಗಳನ್ನು ಹೊಡೆದುಕೊಳ್ಳಬಾರದು – ಪಡೆದುಕೊಳ್ಳಬೇಕು : ಪತ್ರಕರ್ತ ರವೀಂದ್ರ ಜೋಶಿ

    May 15, 2026

    ಸಂತ ಅಲೋಶಿಯಸ್ ಸಭಾಂಗಣದಲ್ಲಿ ಲೋಕಾರ್ಪಣೆಗೊಂಡ ‘ವಿಂಚ್ಣಾರ್ ಕಾಣಿಯೊ’

    May 15, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.