Subscribe to Updates

    Get the latest creative news from FooBar about art, design and business.

    What's Hot

    ಉಡುಪಿಯಲ್ಲಿ ‘ಯಕ್ಷ ಸಾಧಕ’ ಪ್ರಶಸ್ತಿ ಪ್ರದಾನ ಮತ್ತು ಯಕ್ಷಗಾನ ಪ್ರದರ್ಶನ

    July 22, 2025

    ತೀರ್ಥಹಳ್ಳಿ ತಾಲೂಕು ಕ.ಸಾ.ಪ. ಕನ್ನಡ ಭವನದಲ್ಲಿ ಪುಸ್ತಕ ಬಿಡುಗಡೆ ಸಮಾರಂಭ

    July 22, 2025

    ಮೂಡಬಿದೆರೆಯಲ್ಲಿ ಕೊಂಕಣಿ ಸಾಹಿತ್ಯ ಕಾರ್ಯಗಾರ

    July 21, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಹಿರಿಯ ಪತ್ರಕರ್ತ, ಅಂಕಣಕಾರ, ಅನಂತ ವೈದ್ಯ ವಿಧಿವಶ 
    Literature

    ಹಿರಿಯ ಪತ್ರಕರ್ತ, ಅಂಕಣಕಾರ, ಅನಂತ ವೈದ್ಯ ವಿಧಿವಶ 

    July 25, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಯಲ್ಲಾಪುರ: ಹಿರಿಯ ಪತ್ರಕರ್ತ, ಅಂಕಣಕಾರ, ಅನಂತ ವೈದ್ಯ ಅನಾರೋಗ್ಯದಿಂದಾಗಿ ದಿನಾಂಕ 24-07-2023ರ   ಸೋಮವಾರ ತಮ್ಮ 75ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಪಟ್ಟಣದ ಹುಲ್ಲೂರ ಮನೆಯಲ್ಲಿರುವ ಸ್ವಗೃಹದಲ್ಲಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ವಿಧಿ ವಿಧಾನ ಸಲ್ಲಿಸಲಾಯಿತು.

    ಮೃತರು ಮೂಲತ: ಅಂಕೋಲಾ ತಾಲೂಕಿನ ವೈದ್ಯ ಹೆಗ್ಗಾರಿನವರಾಗಿದ್ದು, ಮಡದಿ ಶ್ರೀಮತಿ ವಿಜಯಶ್ರೀ, ಇಬ್ಬರು ಪುತ್ರಿಯರಾದ ಕವಿತಾ, ಸಂಗೀತಾ ಹಾಗೂ ಓರ್ವ ಪುತ್ರ ಕಿರಣ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.  ಶ್ರೀಯುತರು ರಾಜ್ಯ ಮಟ್ಟದ ದಿನಪತ್ರಿಕೆಗಳಲ್ಲಿ ವರದಿಗಾರರಾಗಿ ಹಲವು ವರ್ಷ ಕೆಲಸ ಮಾಡಿದ್ದಾರೆ.

    ಯಕ್ಷಗಾನದ ಶ್ರೇಷ್ಠ ಕಲಾವಿದರೂ ಅರ್ಥಧಾರಿಗಳೂ ಆಗಿದ್ದ ಶೇಣಿ ಗೋಪಾಲಕೃಷ್ಣ ಭಟ್ಟರ ಚಿಂತನೆಗಳನ್ನು ಸಂಗ್ರಹಿಸಿ ‘ಜ್ಞಾನಯಜ್ಞ’ ಎಂಬ ಪುಸ್ತಕವನ್ನು ಸಂಪಾದಿಸಿ ಪ್ರಕಟಿಸಿದ್ದರು. ಇವರು ಬರೆದ ‘ಪಾದುಕಾ ಪ್ರಧಾನ’ ಗ್ರಂಥ ಕೆಲವು ವರ್ಷಗಳ ಹಿಂದೆ ಪ್ರಕಟಗೊಂಡಿದೆ. ಪುರಾಣ ಮತ್ತು ಭಾರತಗಳಲ್ಲಿನ ವಿಶಿಷ್ಟ ಸಂಗತಿಗಳನ್ನಾಧರಿಸಿದ ಅಂಕಣವನ್ನು ರಾಜ್ಯ ಮಟ್ಟದ ಪತ್ರಿಕೆಯಲ್ಲಿ ಬರೆದಿದ್ದಾರೆ.

    ಕನ್ನಡ ಮತ್ತು ಸಂಸ್ಕೃತದಲ್ಲಿ ಅಪಾರ ಪಾಂಡಿತ್ಯವಿದ್ದ ಜ್ಞಾನಸಾಗರ ಅನಂತ ವೈದ್ಯರು. ಯಕ್ಷಗಾನದ ಮೊಟ್ಟಮೊದಲ ಕಡತೋಕ ಮಂಜುನಾಥ ಭಾಗವತರ ಮಾಸಪತ್ರಿಕ ‘ಯಕ್ಷಗಾನ’ದಲ್ಲಿ ಸಹಸಂಪಾದಕರಾಗಿ ಹಲವು ವರ್ಷ ಸೇವೆ ಸಲ್ಲಿಸಿದ್ದರು. ಪ್ರಸಿದ್ಧ ಯಕ್ಷಗಾನ ಅರ್ಥಧಾರಿಗಳಾಗಿದ್ದ ಇವರು ಶೇಣಿ ಶ್ರೀ ಗೋಪಾಲಕೃಷ್ಣ ಭಟ್, ಶ್ರೀ ಕುಂಬ್ಳೆ ಸುಂದರ ರಾವ್, ಶ್ರೀ ಪ್ರಭಾಕರ್ ಜೋಷಿ, ಶ್ರೀ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರೀ ಮುಂತಾದ ಹಲವು ಅರ್ಥಧಾರಿಗಳ ಜೊತೆ ಹಲವು ಬಾರಿ ವೇದಿಕೆಯನ್ನು ಹಂಚಿಕೊಂಡಿದ್ದರು. ಸ್ನೇಹಶೀಲ ವ್ಯಕ್ತಿತ್ವದ್ದ ಇವರ ನಿಧನಕ್ಕೆ ಹಿರಿಯ ಅರ್ಥದಾರಿ, ವಿದ್ವಾಂಸ ಶ್ರೀ ಪ್ರಭಾಕರ್ ಜೋಷಿಯವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಯಕ್ಷ ಬಾನುಲಿ ಸರಣಿ ತಾಳಮದ್ದಳೆ
    Next Article ‘ಬಿ.ಜಿ.ಮೋಹನದಾಸ್ ಪ್ರಶಸ್ತಿ’ಗೆ ಅರ್ಜಿ ಆಹ್ವಾನ 
    roovari

    Add Comment Cancel Reply


    Related Posts

    ತೀರ್ಥಹಳ್ಳಿ ತಾಲೂಕು ಕ.ಸಾ.ಪ. ಕನ್ನಡ ಭವನದಲ್ಲಿ ಪುಸ್ತಕ ಬಿಡುಗಡೆ ಸಮಾರಂಭ

    July 22, 2025

    ಮೂಡಬಿದೆರೆಯಲ್ಲಿ ಕೊಂಕಣಿ ಸಾಹಿತ್ಯ ಕಾರ್ಯಗಾರ

    July 21, 2025

    ವಿದ್ಯಾರ್ಥಿಗಳಿಗಾಗಿ ‘ಮಿನಿ ಕಥೆ’ ರಚನೆ ಹಾಗೂ ಕವನ ರಚನೆ ಸ್ಪರ್ಧೆ | ಜುಲೈ 24

    July 21, 2025

    ಏರ್ಯ ಬೀಡಿನಲ್ಲಿ ‘ವಿದ್ಯಾರ್ಥಿಗಳ ಸಾಹಿತ್ಯ ಸಾಂಸ್ಕೃತಿಕ ಕಮ್ಮಟ’ | ಜುಲೈ 27

    July 21, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.