Subscribe to Updates

    Get the latest creative news from FooBar about art, design and business.

    What's Hot

    ಹಿರಿಯ ಹವ್ಯಾಸಿ ಭಾಗವತ ನಿಟ್ಟೂರು ಶೀನಪ್ಪ ಸುವರ್ಣ ನಿಧನ

    November 28, 2025

    ಬ್ರಹ್ಮಾವರದಲ್ಲಿ ಕಿಶೋರ ಯಕ್ಷಗಾನ ಸಂಭ್ರಮ 2025 ಉದ್ಘಾಟನೆ

    November 28, 2025

    ಸ್ವರ, ತಾಳ, ಲಯಗಳ ಮಿಲನವೇ ಸಂಗೀತ – ನಿವೃತ್ತ ಡಿವೈಎಸ್ಪಿ ಟಿ.ಪಿ. ರಂಜಿತ್

    November 27, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಹಿರಿಯ ವಿದ್ವಾಂಸ ಡಾ. ವಾಮನ ನಂದಾವರ ನಿಧನ
    Kannada

    ಹಿರಿಯ ವಿದ್ವಾಂಸ ಡಾ. ವಾಮನ ನಂದಾವರ ನಿಧನ

    March 15, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಹಿರಿಯ ವಿದ್ವಾಂಸ ಡಾ. ವಾಮನ ನಂದಾವರ ಇವರು ಕಳೆದ ಕೆಲ ವರ್ಷಗಳಿಂದ ಅನಾರೋಗ್ಯ ಪೀಡಿತರಾಗಿದ್ದು, ದಿನಾಂಕ 15 ಮಾರ್ಚ್ 2025ರಂದು ಬೆಳಗ್ಗೆ ಗಂಟೆ 8-30ಕ್ಕೆ ನಿಧನ ಹೊಂದಿದ್ದಾರೆ. ಇವರಿಗೆ 81 ವರ್ಷ ವಯಸ್ಸಾಗಿತ್ತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರು. ಹೆಸರಾಂತ ಜಾನಪದ ವಿದ್ವಾಂಸರೂ ಹಲವಾರು ಪುಸ್ತಕಗಳನ್ನು ಬರೆದ ಹೆಸರಾಂತ ಲೇಖಕರೂ ಆಗಿ ಜನಪ್ರೀತಿ ಗಳಿಸಿದ ಇವರು  ಹೇಮಾಂಶು ಪ್ರಕಾಶನದ ಮೂಲಕ ಅನೇಕ ಬರಹಗಾರರನ್ನು ಹಾಗೂ ಕಲಾವಿದರನ್ನು ರೂಪಿಸಿದ ತುಳು ಕನ್ನಡ ವಿದ್ವಾಂಸರಾಗಿದ್ದರು.

    ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಂದಾವರ ಗ್ರಾಮದವರಾದ ಇವರು ಕನ್ನಡ ಹಾಗೂ ತುಳು ಭಾಷಾ ವಿದ್ವಾಂಸ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾಗಿದ್ದರು. ಇವರು ಸಂತ ಅಲೋಶಿಯಸ್‌ ಕಾಲೇಜಿನಲ್ಲಿ ತಮ್ಮ ಪದವಿ ವ್ಯಾಸಂಗವನ್ನು ಮಾಡಿದ್ದು, ನಂತರ ಮಂಗಳೂರು ಸರಕಾರಿ ಮಹಾವಿದ್ಯಾಲಯದಲ್ಲಿ ಬಿ.ಎಡ್‌., ಕರ್ನಾಟಕ ವಿ.ವಿ.ಯಿಂದ ಎಂ.ಎ. ಕನ್ನಡ ಪದವಿ ಗಳಿಸಿದ್ದರು. ಇವರು ಮಂಡಿಸಿದ್ದ ‘ಕೋಟಿ ಚನ್ನಯ’ ಜಾನಪದೀಯ ಅಧ್ಯಯನ ಮಹಾಪ್ರಬಂಧಕ್ಕೆ ಪಿ.ಎಚ್‌.ಡಿ. ಪದವಿ ದೊರಕಿತ್ತು.

    ಇಂದು ಮಧ್ಯಾಹ್ನ 2-00 ಗಂಟೆಗೆ ಉರ್ವಸ್ಟೋರ್ ನಲ್ಲಿರುವ ತುಳು ಸಾಹಿತ್ಯ ಅಕಾಡೆಮಿಯ ತುಳು ಭವನದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಲಾಗಿದೆ. ಮಧ್ಯಾಹ್ನ 1-00 ಗಂಟೆ ತನಕ ಪಾರ್ಥಿವ ಶರೀರವು ಉಳಾಯಿಬೆಟ್ಟು ‘ಅವತಾರ್’ ವಿಶ್ರಾಂತಿ ಮನೆಯಲ್ಲಿರುತ್ತದೆ.

    baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಕುದ್ರೋಳಿ ಗಣೇಶ್ ಇವರಿಗೆ ‘ಗೋಲ್ಡನ್ ಮ್ಯಾಜಿಷಿಯನ್’ ರಾಷ್ಟ್ರೀಯ ಜಾದೂ ಪ್ರಶಸ್ತಿ
    Next Article ಪುತ್ತೂರಿನ ಸರ್ವೆ ಬಳಿಯ ಮೇಗಿನಗುತ್ತು ಮನೆಯಲ್ಲಿ ತಾಳಮದ್ದಲೆ
    roovari

    Add Comment Cancel Reply


    Related Posts

    ಹಿರಿಯ ಹವ್ಯಾಸಿ ಭಾಗವತ ನಿಟ್ಟೂರು ಶೀನಪ್ಪ ಸುವರ್ಣ ನಿಧನ

    November 28, 2025

    ಬ್ರಹ್ಮಾವರದಲ್ಲಿ ಕಿಶೋರ ಯಕ್ಷಗಾನ ಸಂಭ್ರಮ 2025 ಉದ್ಘಾಟನೆ

    November 28, 2025

    ತುಳುಪರ್ಬ ಸಂಭ್ರಮೊ ವಿಚಾರಗೋಷ್ಠಿ ಬೊಕ್ಕ ಕವಿ ಗೋಷ್ಠಿ | 5 ಡಿಸೆಂಬರ್ 2025

    November 27, 2025

    ಸಾಹಿತ್ಯರಚನೆ ಪ್ರಾಮಾಣಿಕವಾಗಿದ್ದಾಗ ಸಮಾಜಕ್ಕೆ ಒಳಿತು – ಡಾ. ವಸಂತಕುಮಾರ ಪೆರ್ಲ

    November 25, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.