Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ಇಂದಿರಾ ಪ್ರಿಯದರ್ಶಿನಿ ಉದ್ಯಾನವನದಲ್ಲಿ ‘ಕನ್ನಡದ ಕಂಪು ಸರಣಿ -7’ | ಫೆಬ್ರುವರಿ 08 

    January 31, 2026

    ನರೇಂದ್ರ ಎಸ್. ಗಂಗೊಳ್ಳಿಯವರ ‘ಅವಳ ನಿಟ್ಟುಸಿರು’ ಕೃತಿ ಲೋಕಾರ್ಪಣೆ

    January 31, 2026

    ‘ವೀರರಾಣಿ ಅಬ್ಬಕ್ಕ ಪ್ರಶಸ್ತಿ’ಗೆ ಡಾ. ಸಾಯಿಗೀತಾ ಮತ್ತು ವಿದುಷಿ ರಾಜಶ್ರೀ ಉಳ್ಳಾಲ್‌ ಆಯ್ಕೆ

    January 31, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಹಿರಿಯ ರಂಗಕರ್ಮಿ ಮಂಜು ವಿಟ್ಲ ನಿಧನ
    Drama

    ಹಿರಿಯ ರಂಗಕರ್ಮಿ ಮಂಜು ವಿಟ್ಲ ನಿಧನ

    September 7, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬಂಟ್ವಾಳ : ಪಂಚಾಯತ್ ರಾಜ್ ನ ರಾಷ್ಟ್ರೀಯ ತರಬೇತುದಾರ, ಹಿರಿಯ ರಂಗಕರ್ಮಿ, ರಂಗ ನಿರ್ದೇಶಕ ಮಂಜು ವಿಟ್ಲ (77) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಕುಂಟಿಕಾನದಲ್ಲಿರುವ ತಮ್ಮ ಪುತ್ರಿಯ ಮನೆಯಲ್ಲಿ ದಿನಾಂಕ 06-09-2023ರಂದು ನಿಧನರಾಗಿದ್ದಾರೆ. ಧಾರ್ಮಿಕ, ಸಾಮಾಜಿಕ, ವ್ಯಕ್ತಿತ್ವ ವಿಕಸನ, ಮಹಿಳಾ ಸಬಲೀಕರಣ, ನಾಟಕ, ರೂಪಕ, ವರ್ಣಾಲಂಕಾರ, ರಂಗ ಸಜ್ಜಿಕೆ ಸಹಿತ ಮೊದಲಾದ ಚಟುವಟಿಕೆಯಲ್ಲಿ ಮಂಜು ವಿಟ್ಲ ಅವರು ತೊಡಗಿಸಿಕೊಂಡಿದ್ದರು.

    ಬಿ.ಸಿ.ರೋಡು ಪರಿಸರ ಮತ್ತು ಅವರ ಆಪ್ತ ವಲಯದಲ್ಲಿ ‘ಮಂಜಣ್ಣ’ ಎಂದೇ ಚಿರಪರಿಚಿತರಾಗಿದ್ದ ಇವರು ಸಾಹಿತ್ಯ, ಸಾಂಸ್ಕೃತಿಕ ಕ್ಷೇತ್ರದ ಸಂಘಟಕರಾಗಿಯೂ ಗುರುತಿಸಿಕೊಂಡಿದ್ದರು. ಅಲ್ಲದೇ ಹಿರಿಯ ಚಿತ್ರ ಕಲಾವಿದರಾಗಿ, ಕಾರ್ಯಕ್ರಮ ನಿರೂಪಕನಾಗಿ, ಸಂಪನ್ಮೂಲ ವ್ಯಕ್ತಿಯಾಗಿ ಅಪಾರ ಜನಮನ್ನಣೆ ಗಳಿಸಿದ್ದರು. ಮೂಲತಃ ಇವರು ವಿಟ್ಲದ ನಿವಾಸಿ. ಸದಾ ನಗುಮುಖದ ಸರಳ, ಸ್ನೇಹಜೀವಿಯಾಗಿದ್ದ ಇವರು ಹಲವಾರು ತುಳು, ಕನ್ನಡ, ಪೌರಾಣಿಕ ನಾಟಕಗಳ ಹಾಸ್ಯ ಪಾತ್ರದಲ್ಲಿ ಮಿಂಚಿದ್ದಲ್ಲದೆ 1000ಕ್ಕೂ ಮಿಕ್ಕಿ ನಾಟಕಗಳನ್ನು ನಿರ್ದೇಶಿಸಿದ್ದಾರೆ. ಅಲ್ಲದೇ ಇವರು ಅಭಿನಯಿಸಿದ್ದ ‘ಚೋಮನ ದುಡಿ’ ನಾಟಕದ ಚೋಮನ ಪಾತ್ರ ಇವರಿಗೆ ಹೆಚ್ಚು ಮನ್ನಣೆ ದೊರಕಿಸಿಕೊಟ್ಟಿತ್ತು.

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರು ಶಕ್ತಿನಗರದ ಕಲಾಂಗಣದಲ್ಲಿ ‘ನಿಮ್ಣೆಂ ಉತರ್’ ನಾಟಕ ಪ್ರದರ್ಶನ
    Next Article ತೆಕ್ಕಟ್ಟೆ ಮಹಾಲಿಂಗೇಶ್ವರ ದೇಗುಲದಲ್ಲಿ ಅರ್ಥಾಂಕುರ-2 ಮರುಚಾಲನೆ
    roovari

    Add Comment Cancel Reply


    Related Posts

    ಬೆಂಗಳೂರಿನ ಕಲಾಗ್ರಾಮದಲ್ಲಿ ‘ಭಾರತ ರಂಗ ಮಹೋತ್ಸವ ಹಾಗೂ ರಂಗ ಪರಿಷೆ’ | ಫೆಬ್ರವರಿ 01ರಿಂದ 06

    January 31, 2026

    ವಿಶ್ವ ಕೊಂಕಣಿ ನಾಟಕ ಮಹೋತ್ಸವ ಹಾಗೂ ಪ್ರಶಸ್ತಿ ಪದಾನ ಸಮಾರಂಭ | ಜನವರಿ 31 ಮತ್ತು ಫೆಬ್ರವರಿ 01

    January 30, 2026

    ಪ್ರಸಿದ್ಧ ಹಾಸ್ಯಗಾರ ಮಹೇಶ ಮಣಿಯಾಣಿಯವರು ‘ವನಜ-ಸುಜನಾ ರಂಗಮನೆ ಪ್ರಶಸ್ತಿ’ಗೆ ಆಯ್ಕೆ

    January 29, 2026

    ಬಿ.ವಿ. ಕಾರಂತ ನೆನಪಿನ ‘ಮಂಚಿ ನಾಟಕೋತ್ಸವ’ | ಜನವರಿ 29 ಮತ್ತು 30

    January 26, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.