Subscribe to Updates

    Get the latest creative news from FooBar about art, design and business.

    What's Hot

    ‘ದಾಸವಾಣಿ’ ಹವಲ್ದಾರ್ ತಂಡದವರಿಂದ ದಾಸರ ಕೃತಿಗಳ ಅಮೋಘ ಗಾಯನ ಕಾರ್ಯಕ್ರಮ | ಜೂನ್ 01

    May 31, 2025

    ನಟನ ರಂಗಶಾಲೆಯಲ್ಲಿ ಮಕ್ಕಳ ‘ಅಭಿನಯ ಮತ್ತು ರಂಗ ತರಬೇತಿ’ | ಜೂನ್ 08

    May 31, 2025

    ಶಿರಸಿಯ ರಂಗಧಾಮದಲ್ಲಿ ಸನ್ಮಾನ, ಪ್ರತಿಭಾ ಪುರಸ್ಕಾರ ಮತ್ತು ಯಕ್ಷಗಾನ ಪ್ರದರ್ಶನ | ಜೂನ್ 01

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಹಿರಿಯ ಸಾಹಿತಿ ಬಾಲಸುಬ್ರಹ್ಮಣ್ಯ ಕಂಜರ್ಪಣೆ ಇವರು ಉಪನ್ಯಾಸದ ಉಪನ್ಯಾಸಕರಾಗಿ ಆಯ್ಕೆ
    Literature

    ಹಿರಿಯ ಸಾಹಿತಿ ಬಾಲಸುಬ್ರಹ್ಮಣ್ಯ ಕಂಜರ್ಪಣೆ ಇವರು ಉಪನ್ಯಾಸದ ಉಪನ್ಯಾಸಕರಾಗಿ ಆಯ್ಕೆ

    December 17, 2024Updated:January 7, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಡಿಕೇರಿ : ಬಾಲಸುಬ್ರಹ್ಮಣ್ಯ ಕಂಜರ್ಪಣೆ ಇವರು ಕೊಡಗು ಜಿಲ್ಲೆಯ ಹಿರಿಯ ಸಾಹಿತಿ, ವೃತ್ತಿಯಲ್ಲಿ ವಕೀಲರು. ಮಂಡ್ಯದಲ್ಲಿ ದಿನಾಂಕ 20 ಡಿಸಂಬರ್ 2024ರಿಂದ 22 ಡಿಸೆಂಬರ್ 2024ರವರೆಗೆ ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ವಿಶೇಷ ಉಪನ್ಯಾಸದ ಉಪನ್ಯಾಸಕರಾಗಿ ಆಯ್ಕೆಯಾಗಿದ್ದು, ಇವರು ಭಾರತ ಸಂವಿಧಾನ 75ರ ಕುರಿತಾಗಿ ಉಪನ್ಯಾಸ ಮಂಡಿಸಲಿದ್ದಾರೆ.

    ದಿನಾಂಕ 05 ಮೇ 1954ರಂದು ಕಂಜರ್ಪಣೆ ಪರಮೇಶ್ವರಯ್ಯರವರ ಪುತ್ರನಾಗಿ ಜನಿಸಿದ ಇವರು ತಮ್ಮ ವಿದ್ಯಾಭ್ಯಾಸವನ್ನು ಸುಳ್ಯ ಪುತ್ತೂರಿನಲ್ಲಿ ಮುಗಿಸಿ ಉಡುಪಿಯ ಲಾ ಕಾಲೇಜಿನಿಂದ ಕಾನೂನು ಪದವಿಯನ್ನು, ಮೈಸೂರು ವಿಶ್ವವಿದ್ಯಾನಿಲಯದಿಂದ ಎಂ.ಎ ಪದವಿಯನ್ನು ಪಡೆದಿದ್ದಾರೆ. ವಕೀಲರಾಗಿ 1976ರಿಂದ ಕೊಡಗಿನಲ್ಲಿ ಪ್ರಸಿದ್ಧರಾಗಿದ್ದ ಇವರು ಮಡಿಕೇರಿ ಸರಕಾರಿ ಹಿರಿಯ ಕಾಲೇಜಿನಲ್ಲಿ ಒಂದು ವರ್ಷ ಇಂಗ್ಲೀಷ್ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದಾರೆ.

    ಸಾಹಿತ್ಯ, ಸಂಗೀತ, ಕ್ರೀಡೆ ಇವುಗಳಲ್ಲಿ ಅಪಾರ ಆಸಕ್ತಿ ಹೊಂದಿರುವ ಇವರು ಮೂರು ಕವನಗಳು, ಒಂದು ಕಥಾ ಸಂಕಲನ, ಮೂರು ಬದುಕು ಬರಹದ ಕೃತಿಗಳು, ಒಂದು ಸಾಮಾಜಿಕ ಸಾಹಿತಿಕ ಲೇಖನಗಳ ಸಂಗ್ರಹ, ಒಂದು ಕಾನೂನು ನ್ಯಾಯ ಸಂಬಂಧಿ ಲೇಖನಗಳ ಸಂಗ್ರಹ, ಒಂದು ಸಾಹಿತ್ಯ ಪ್ರಬಂಧ, ಒಂದು ಲಲಿತ ಪ್ರಬಂಧ ಹೀಗೆ ಸಾಹಿತ್ಯ ಸೇವೆಯಲ್ಲಿ ತೊಡಗಿದ್ದಾರೆ. ಕರ್ನಾಟಕ ಅನುವಾದ ಸಾಹಿತ್ಯ ಅಕಾಡೆಮಿ ಮತ್ತು ಕುವೆಂಪು ಭಾಷಾ ಭಾರತಿ ಪ್ರಾಧಿಕಾರಕ್ಕಾಗಿ ವಿಲ್ ದುರಂತ ನಾಗರಿಕತೆಯ ಕಥೆಯನ್ನು ರೂಪಿಸಿದ್ದಾರೆ. ರಾಜ್ಯಾದ್ಯಂತ ಪ್ರವಾಸಗಳು, ಕನ್ನಡದ ಬಹುತೇಕ ಎಲ್ಲಾ ಪತ್ರಿಕೆಗಳಲ್ಲಿ ವಿಮರ್ಶೆಯು ಸೇರಿದಂತೆ ಎಲ್ಲ ಬಗೆಯ ಲೇಖನಗಳು, ಕತೆ, ಕವಿತೆ, ಪ್ರಕಟಣೆ ಮಾಡಿದ್ದಾರೆ. ನಾಲ್ಕು ಬಾರಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಗೋಷ್ಠಿಯಲ್ಲಿ ಪ್ರಬಂಧ ಮಂಡಿಸಿದ್ದಾರೆ. ದಸರಾ ಕವಿಗೋಷ್ಠಿಯಲ್ಲಿ ಭಾಗವಹಿಸಿದ್ದಾರೆ. ಆಕಾಶವಾಣಿ ಮತ್ತು ದೂರದರ್ಶನದ ಸಂದರ್ಶನಗಳಲ್ಲಿ ಗೋಷ್ಠಿಗಳಲ್ಲಿ ಭಾಗವಹಿಸಿರುತ್ತಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಪ್ರಕಟನಾ ಸಮಿತಿಯ ಸದಸ್ಯರು ಕೂಡ ಆಗಿದ್ದರು. ಇವರು ಈ ಬಾರಿಯ ಸಮ್ಮೇಳನದಲ್ಲಿ “ಭಾರತ ಸಂವಿಧಾನ 75” ಕುರಿತು ವಿಶ್ಲೇಷಣಾತ್ಮಕ ಪ್ರಬಂಧ ಮಂಡಿಸಲಿದ್ದಾರೆ. ಇವರಿಗೆ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತಿನ ಸದಸ್ಯರ ಪರವಾಗಿ ಜಿಲ್ಲಾಧ್ಯಕ್ಷ ಎಂ.ಪಿ. ಕೇಶವ ಕಾಮತ್ ಅಭಿನಂದಿಸಿರುತ್ತಾರೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ತಿಳಿಸಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಪ್ರೊ. ಶಂಕರ್ ಅಭಿನಂದನಾ ಸಮಾರಂಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ, ಗೋಷ್ಠಿಗಳು ಮತ್ತು ಪುಸ್ತಕ ಬಿಡುಗಡೆ
    Next Article ಉಡುಪಿಯ ರಂಗಭೂಮಿ (ರಿ.) ಇದರ 45ನೆಯ ರಾಜ್ಯ ಮಟ್ಟದ ಕನ್ನಡ ನಾಟಕ ಸ್ಪರ್ಧೆ – 2024ರ ಫಲಿತಾಂಶ
    roovari

    Add Comment Cancel Reply


    Related Posts

    ವಿಶೇಷ ಲೇಖನ – ಜೈನ ಸಾಹಿತ್ಯದ ಖ್ಯಾತ ವಿದ್ವಾಂಸ ಡಾ. ಎಸ್. ಪಿ. ಪಾಟೀಲ್

    May 31, 2025

    ಉಪ್ಪಳದ ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ತುಲುವೆರೆ ಕಲ ವರ್ಸೊಚ್ಚಯ | ಜೂನ್ 01

    May 30, 2025

    ಕೀನ್ಯಾದ ಪ್ರಸಿದ್ಧ ಲೇಖಕ ಗೂಗಿ ವಾ ಥಿಯಾಂಗೋ ವಿಧಿವಶ

    May 30, 2025

    ಖ್ಯಾತ ಸಾಹಿತಿ ಎಚ್. ಎಸ್. ವೆಂಕಟೇಶಮೂರ್ತಿ ನಿಧನ

    May 30, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.