Subscribe to Updates

    Get the latest creative news from FooBar about art, design and business.

    What's Hot

    ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 10

    May 31, 2025

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಡ್ಯದಲ್ಲಿ ಅಯೋಜಿತವಾಗಿರುವ 87ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಬರಹಗಾರ ಗೊ.ರು. ಚನ್ನಬಸಪ್ಪನವರ ಆಯ್ಕೆ
    Literature

    ಮಂಡ್ಯದಲ್ಲಿ ಅಯೋಜಿತವಾಗಿರುವ 87ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಬರಹಗಾರ ಗೊ.ರು. ಚನ್ನಬಸಪ್ಪನವರ ಆಯ್ಕೆ

    November 27, 2024Updated:January 7, 2025No Comments3 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಮಂಡ್ಯದಲ್ಲಿ ದಿನಾಂಕ 20 ಡಿಸಂಬರ್ 2024ರಿಂದ 22 ಡಿಸೆಂಬರ್ 2024ರವರೆಗೆ ಅಯೋಜಿತವಾಗಿರುವ 87ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಬರಹಗಾರ, ಜನಪದ ವಿದ್ವಾಂಸ ಗೊ.ರು. ಚನ್ನಬಸಪ್ಪನವರು ಆಯ್ಕೆಯಾಗಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಕಾರ್ಯಕಾರಿ ಸಮಿತಿಯಲ್ಲಿ ಸರ್ವಾನುಮತದಿಂದ ಈ ನಿರ್ಣಯವನ್ನು ತೆಗೆದುಕೊಳ್ಳಲಾಯಿತೆಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿಯವರು ದಿನಾಂಕ 20 ನವೆಂಬರ್ 2024ರಂದು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದ ಪತ್ರಿಕಾ ಗೋಷ್ಟಿಯಲ್ಲಿ ತಿಳಿಸಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿಯ 60 ಸದಸ್ಯರಲ್ಲಿ 53 ಜನ ಭಾಗವಹಿಸಿದ್ದು, ಐತಿಹಾಸಿಕವೆಂದು ತಿಳಿಸಿದ ಅವರು ಸೌಹಾರ್ದಯುತ ವಾತಾವರಣದಲ್ಲಿ ಈ ಚರ್ಚೆ ನಡೆದು ಗೊ.ರು.ಚ. ಅವರ ಆಯ್ಕೆಯಾಯಿತು. ಆಯ್ಕೆಯ ನಂತರ ನಾಡೋಜ ಡಾ. ಮಹೇಶ ಜೋಷಿಯವರು ದೂರವಾಣಿಯ ಮೂಲಕ ಗೊ.ರು. ಚನ್ನಬಸಪ್ಪನವರಿಗೆ ವಿಷಯವನ್ನು ತಿಳಿಸಿ ಅಭಿನಂದಿಸಿದಾಗ ಅವರು ಅತ್ಯಂತ ಸಂತೋಷದಿಂದ ತಮ್ಮ ಒಪ್ಪಿಗೆಯನ್ನು ಸೂಚಿಸಿದ್ದನ್ನೂ ನಾಡೋಜ ಡಾ.ಮಹೇಶ ಜೋಶಿ ಪತ್ರಿಕಾ ಗೋಷ್ಟಿಯಲ್ಲಿ ಹಂಚಿಕೊಂಡರು.

    ಕನ್ನಡ ಸಾಹಿತ್ಯ ಸಮ್ಮೇಳನಗಳ ಇತಿಹಾಸದಲ್ಲಿಯೇ ಮೊದಲ ಸಲ ಸಮ್ಮೇಳನಾಧ್ಯಕ್ಷರ ಆಯ್ಕೆ ಸಾರ್ವಜನಿಕವಾಗಿ ಸಾಕಷ್ಟು ಕುತೂಹಲವನ್ನು ಕೆರಳಿಸಿತ್ತು. ಸಾರ್ವಜನಿಕರಿಂದಲೇ ಅನೇಕ ಹೆಸರುಗಳು ಪ್ರಸ್ತಾಪವಾಗಿದ್ದು ವಿಶೇಷವಾಗಿತ್ತು. ಕನ್ನಡ ಸಾಹಿತ್ಯ ಪರಿಷತ್ತಿನ ನಿಬಂಧನೆ (33)ರಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಸ್ತಾಪವಿದ್ದು, ಇದರಲ್ಲಿ ಸಮ್ಮೇಳನಾಧ್ಯಕ್ಷತೆಯ ಕುರಿತು ಯಾವ ಮಾನದಂಡವನ್ನು ನಿಗಧಿ ಪಡಿಸಿಲ್ಲದ ಹಿನ್ನೆಲೆಯಲ್ಲಿ ಎಲ್ಲಾ ಅಭಿಪ್ರಾಯಗಳನ್ನು ಕನ್ನಡ ಸಾಹಿತ್ಯ ಪರಿಷತ್ತು ಮುಕ್ತವಾಗಿ ಸ್ವೀಕರಿಸಿ ಪರಿಶೀಲಿಸಿತು ಎಂದು ಪತ್ರಿಕಾ ಗೋಷ್ಟಿಯಲ್ಲಿ ನಾಡೋಜ ಡಾ.ಮಹೇಶ ಜೋಶಿಯವರು ವಿವರಿಸಿದರು.

    ಇಂದು ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಹಲವಾರು ಹೆಸರುಗಳು ಪರಿಗಣನೆಗೆ ಬಂದವು. ಹಿರಿತನ ಮತ್ತು ಕನ್ನಡಕ್ಕೆ ಸಲ್ಲಿಸಿರುವ ಅಪಾರ ಸೇವೆಯ ಹಿನ್ನೆಲೆಯಲ್ಲಿ ಗೊ.ರು. ಚನ್ನಬಸಪ್ಪನವರ ಹೆಸರನ್ನು ಎಲ್ಲರೂ ಏಕಕಂಠದಿಂದ ಒಪ್ಪಿಗೆ ಸೂಚಿಸಿ ಸರ್ವಾನುಮತದ ಆಯ್ಕೆಗೆ ಕಾರಣರಾದರು. ಪರಿಶೀಲನೆಗೆ ಬಂದ ಹೆಸರುಗಳಾದ ಪ್ರೊ. ಟಿ.ವಿ. ವೆಂಕಟಾಚಲ ಶಾಸ್ತ್ರಿ, ಹಂಪ. ನಾಗರಾಜಯ್ಯ, ಸಿದ್ದಲಿಂಗ ಪಟ್ಟಣಶೆಟ್ಟಿ, ಡಾ. ಸುಧಾಮೂರ್ತಿ, ಡಾ. ಲತಾ ರಾಜಶೇಖರ್, ನಾ. ಮೊಗಸಾಲೆ ಇವರಿಗಿಂತ ಗೊ.ರು. ಚನ್ನಬಸಪ್ಪನವರ (94 ವರ್ಷ, ಆರು ತಿಂಗಳು) ಹಿರಿತನವನ್ನು ಆಯ್ಕೆ ಸಂದರ್ಭದಲ್ಲಿ ಗಮನಿಸಲಾಯಿತು. ಜಾನಪದ ಭೀಷ್ಮ ಎನ್ನಿಸಿಕೊಂಡ ಇವರು ನಾಡು-ನುಡಿ-ನೆಲ-ಜಲದ ಕುರಿತು ಸದಾ ತುಡಿಯುತ್ತಿರುವ ಶ್ರೇಷ್ಠ ಚಿಂತಕ ಎನ್ನುವುದನ್ನು ಪರಿಗಣಿಸಿ, ಕನ್ನಡಕ್ಕೆ ನೀಡಿದ ಕೊಡುಗೆ, ಕನ್ನಡ ಸಾಹಿತ್ಯ ಪರಿಷತ್ತನ್ನು ಬೆಳೆಸುವಲ್ಲಿ ವಹಿಸಿದ ಪಾತ್ರವನ್ನೂ ಈ ಸಂದರ್ಭದಲ್ಲಿ ಗಮನಿಸಲಾಯಿತು. 1994ರಲ್ಲಿ ಮಂಡ್ಯದಲ್ಲಿ ಚದುರಂಗರ ಅಧ್ಯಕ್ಷತೆಯಲ್ಲಿ 63ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆದಾಗ ಗೊ.ರು.ಚ. ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದರು. ಮೂವತ್ತು ವರ್ಷಗಳ ನಂತರ ಮಂಡ್ಯದಲ್ಲಿಯೇ ಅಯೋಜನೆಗೊಳ್ಳುತ್ತಿರುವ 87ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅವರು ಅಧ್ಯಕ್ಷರಾಗುತ್ತಿರುವುದು ಅರ್ಥಪೂರ್ಣವಾಗಿದೆ ಎಂದು ನಾಡೋಜ ಡಾ.ಮಹೇಶ ಜೋಶಿಯವರು ಬಣ್ಣಿಸಿದರು. ಸಮ್ಮೇಳನಾಧ್ಯಕ್ಷತೆಗೆ ಒಬ್ಬರನ್ನು ಮಾತ್ರ ಆಯ್ಕೆ ಮಾಡುವ ಅನಿವಾರ್ಯತೆಯ ಹಿನ್ನೆಲೆಯಲ್ಲಿ ಗೊ.ರು.ಚ. ಅವರನ್ನು ಪರಿಗಣಿಸಲಾಯಿತು.

    ಕನ್ನಡ ಸಾಹಿತ್ಯಲೋಕಕ್ಕೆ ಅದರಲ್ಲೂ ಜಾನಪದ ಸಾಹಿತ್ಯಕ್ಕೆ ಅಪಾರ ಸೇವೆ ಸಲ್ಲಿಸಿರುವ ಗೊ.ರು. ಚೆನ್ನಬಸಪ್ಪನವರು ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಗೊಂಡೇದಹಳ್ಳಿಯಲ್ಲಿ 18 ಮೇ 1930ರಂದು ಜನಿಸಿದರು. 1948 ವರ್ಷದಲ್ಲಿ ಶಾಲಾ ಶಿಕ್ಷಕರಾಗಿ ತಮ್ಮ ವೃತ್ತಿ ಜೀವನವನ್ನು ಆರಂಭಿಸಿದ ಚನ್ನಬಸಪ್ಪನವರು ಗಾಂಧೀಗ್ರಾಮದಲ್ಲಿ ಸಮಾಜಶಿಕ್ಷಣ ತರಬೇತಿಯನ್ನು ಪಡೆದರು. ಭೂದಾನ ಚಳುವಳಿ, ವಯಸ್ಕರ ಶಿಕ್ಷಣ ಮತ್ತು ಸೇವಾದಳಗಳಲ್ಲಿ ಚನ್ನಬಸಪ್ಪನವರು ನಿಷ್ಠಾವಂತರಾಗಿ ಸೇವೆ ಸಲ್ಲಿಸಿದ್ದಾರೆ. ಚನ್ನಬಸಪ್ಪನವರು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಪ್ರಧಾನ ಕಮಿಷನರ್ ಆಗಿ ಸಹಾ ಮಹತ್ವದ ಸೇವೆ ಸಲ್ಲಿಸಿದವರು. ಇವರು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಗಳಾಗಿ ಮತ್ತು ಅಧ್ಯಕ್ಷರಾಗಿ (1992-95) ಸೇವೆ ಸಲ್ಲಿಸಿ ಅನೇಕ ಮಹತ್ವಪೂರ್ಣ ಕಾರ್ಯಕ್ರಮಗಳನ್ನು ನಡೆಸಿದ್ದಾರೆ. ಅವರ ಅಧಿಕಾರಾವಧಿಯಲ್ಲಿ ನೂರೈವತ್ತಕ್ಕೂ ಹೆಚ್ಚು ಮಹತ್ವ ಪೂರ್ಣ ಕೃತಿಗಳನ್ನು ಕನ್ನಡ ಸಾಹಿತ್ಯ ಪರಿಷತ್ತು ಪ್ರಕಟಿಸಿತು. ಚನ್ನಬಸಪ್ಪನವರು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಕೂಡ ಕಾರ್ಯನಿರ್ವಹಿಸಿದ್ದಾರೆ.

    ಮಹಾದೇವಿ, ಸದಾಶಿವ ಶಿವಾಚಾರ್ಯ, ಕರ್ನಾಟಕ ಪ್ರಗತಿಪಥ, ಚೆಲುವಾಂಬಿಕೆ, ಕುನಾಲ, ಸಾಕ್ಷಿ ಕಲ್ಲು, ಬೆಳ್ಳಕ್ಕಿ ಹಿಂಡು ಬೆದರ್ಯಾವೊ, ಬಾಗೂರು ನಾಗಮ್ಮ, ಗ್ರಾಮ ಗೀತೆಗಳು, ವಿಭೂತಿ, ಕರ್ನಾಟಕ ಜನಪದ ಕಲೆಗಳು ಹೀಗೆ ಐವತ್ತಕ್ಕೂ ಹೆಚ್ಚು ಕೃತಿಗಳನ್ನು ಗೊ.ರು. ಚನ್ನಬಸಪ್ಪನವರು ಸಾಹಿತ್ಯದ ಎಲ್ಲಾ ಪ್ರಕಾರಗಳಲ್ಲಿಯೂ ರಚಿಸಿ ಕನ್ನಡ ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸಿದ್ದಾರೆ. ಮಾಗಿದ ತಮ್ಮ ಹಿರಿಯ ವಯಸ್ಸಿನಲ್ಲಿಯೂ ನಗೆಮೊಗದಿಂದ ಕನ್ನಡ ಸೇವೆಯಲ್ಲಿ ನಿರತರಾಗಿರುವ ಗೊ.ರು. ಚನ್ನಬಸಪ್ಪನವರ ಆಯ್ಕೆಯನ್ನು ಎಲ್ಲಾ ವಲಯಗಳಿಂದಲೂ ಮುಕ್ತವಾಗಿ ಪ್ರಶಂಸಿಸಲಾಗುತ್ತಿದೆ. ಮುಂದೆ ನಡೆಯಲಿರುವ 87ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸಲು ಎಲ್ಲರ ಸಹಕಾರವನ್ನು ಕೋರಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಡಾ. ಪದ್ಮಿನಿ ನಾಗರಾಜು, ನೇ.ಭ. ರಾಮಲಿಂಗ ಶೆಟ್ಟಿ, ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕೋಶಾಧ್ಯಕ್ಷರಾದ ಬಿ.ಎಂ. ಪಟೇಲ್ ಪಾಂಡು ಪತ್ರಿಕಾ ಗೋಷ್ಟಿಯಲ್ಲಿ ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಪರಕ್ಕಿಲದಲ್ಲಿ ಡಾ. ಯು. ಮಹೇಶ್ವರಿ ಬದುಕು ಬರಹದ ‘ಸಾಹಿತ್ಯ ಸಲ್ಲಾಪ’
    Next Article ಇಂಟಾಕ್ ಮಂಗಳೂರು ‘ವಿಶ್ವ ಪರಂಪರೆಯ ಸಪ್ತಾಹ’ದಲ್ಲಿ ಕರಾವಳಿಯ ವಿಶಿಷ್ಟ ಕಲೆಯಾದ ‘ಕಾವಿ ಕಲೆ’ಯ ಕುರಿತು ಉಪನ್ಯಾಸ
    roovari

    Add Comment Cancel Reply


    Related Posts

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025

    ವಿಶೇಷ ಲೇಖನ – ಜೈನ ಸಾಹಿತ್ಯದ ಖ್ಯಾತ ವಿದ್ವಾಂಸ ಡಾ. ಎಸ್. ಪಿ. ಪಾಟೀಲ್

    May 31, 2025

    ಉಪ್ಪಳದ ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ತುಲುವೆರೆ ಕಲ ವರ್ಸೊಚ್ಚಯ | ಜೂನ್ 01

    May 30, 2025

    ಕೀನ್ಯಾದ ಪ್ರಸಿದ್ಧ ಲೇಖಕ ಗೂಗಿ ವಾ ಥಿಯಾಂಗೋ ವಿಧಿವಶ

    May 30, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.