Subscribe to Updates

    Get the latest creative news from FooBar about art, design and business.

    What's Hot

    ಪರಿಚಯ ಲೇಖನ | ಯಕ್ಷರಂಗದ ಕ್ರಿಯಾಶೀಲ ಪ್ರತಿಭೆ – ಸುಜನ್ ಕುಮಾರ್ ಅಳಿಕೆ

    May 25, 2025

    ವಿಶೇಷ ಲೇಖನ | ಸುಗಮ ಸಂಗೀತದ ಸರದಾರ ‘ಯಶವಂತ ಹಳಿಬಂಡಿ’

    May 25, 2025

    ಶ್ರೀ ಕ್ಷೇತ್ರ ಪಂಚಲಿಂಗದಲ್ಲಿ ಕಿರು ನಾಟಕ, ನೃತ್ಯ ನಮನ ಮತ್ತು ಯಕ್ಷಗಾನ ಪ್ರದರ್ಶನ | ಮೇ 25 ಮತ್ತು 26

    May 24, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಹಿರಿಯ ಸಾಹಿತಿ ಪಾಲ್ತಾಡಿ ರಾಮಕೃಷ್ಣ ಆಚಾರ್ ನಿಧನ
    Folk

    ಹಿರಿಯ ಸಾಹಿತಿ ಪಾಲ್ತಾಡಿ ರಾಮಕೃಷ್ಣ ಆಚಾರ್ ನಿಧನ

    May 8, 20241 Comment2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಕನ್ನಡ ಹಾಗೂ ತುಳು ಸಾಹಿತಿ, ತುಳು ಜಾನಪದ ವಿದ್ವಾಂಸ ಪಾಲ್ತಾಡಿ ರಾಮಕೃಷ್ಣ ಆಚಾರ್ ಪುತ್ತೂರಿನ ಸ್ವಗೃಹದಲ್ಲಿ ಮಂಗಳವಾರ ದಿನಾಂಕ 07-05-2024ರಂದು ನಿಧನರಾದರು ಅವರಿಗೆ 79ವರ್ಷ ವಯಸ್ಸಾಗಿತ್ತು.

    ಕಾವ್ಯ, ಸಣ್ಣಕತೆ, ನಾಟಕ, ವಿಮರ್ಶೆ ರಚನೆಯಲ್ಲಿ ತೊಡಗಿದ್ದ ಶ್ರೀಯುತರು ಜಾನಪದ ಕ್ಷೇತ್ರದ ಸಂಶೋಧನೆಯ ಮೂಲಕ ತುಳುನಾಡಿನ ಪರಂಪರೆಯನ್ನು ಜನರಿಗೆ ತಿಳಿಸುವಲ್ಲಿ ಹಾಗೂ ಅವುಗಳ ರಕ್ಷಣೆಗೆ ತಮ್ಮದೇ ಅದ ಕೊಡುಗೆ ನೀಡಿದ್ದರು. ಕೆದಂಬಾಡಿ ರಾಮೇಗೌಡರ ನೇತೃತ್ವದಲ್ಲಿ ಬ್ರಿಟಷರ ವಿರುದ್ಧ 1830ರ ದಶಕದಲ್ಲಿ ನಡೆದಿದ್ದ ತುಳುನಾಡಿನ ಪ್ರಥಮ ಸ್ವಾತಂತ್ರ್ಯ ಸಂಗ್ರಾಮವನ್ನು ಬೆಳಕಿಗೆ ತರುವಲ್ಲೂ ಅವರ ಪಾತ್ರ ಮಹತ್ವದ್ದಾಗಿತ್ತು.

    ಬೆಟ್ಟಂಪಾಡಿ ಹಾಗೂ ಪಾಣಾಜೆ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಪ್ರಾಥಮಿಕ ಶಿಕ್ಷಣ, ಬೆಳ್ಳಾರೆ ಬೋರ್ಡ್ ಹೈಸ್ಕೂಲ್‌ನಲ್ಲಿ ಪ್ರೌಢ ಶಿಕ್ಷಣ ಪಡೆದಿದ್ದ ಅವರು ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ ಪಿ.ಯು.ಸಿ. ಪೂರೈಸಿದರು. ನಂತರ ಉಜಿರೆಯ ಸರಕಾರಿ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ಟಿ. ಸಿ. ಎಚ್. ಶಿಕ್ಷಣ ಪಡೆದಿದ್ದರು.

    ಪುತ್ತೂರು ತಾಲ್ಲೂಕಿನ ಕುಂತೂರು ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಕನಾಗಿ ತಮ್ಮ ವೃತ್ತಿ ಜೀವನ ಪ್ರಾರಂಭಿಸಿದ ಇವರು ನಂತರ ಕೆಲ್ಲೂರು, ಕಾವು, ಮಾಡೂರು, ಸಾಮೆತ್ತಡ್ಕ ಮೊದಲಾದ ಕಡೆ ಸೇವೆ ಸಲ್ಲಿಸಿದ್ದರು. ಈ ನಡುವೆ ಬಿ.ಎ ಬಿ.ಎಡ್ ಹಾಗೂ ಧಾರವಾಡ ವಿಶ್ವವಿದ್ಯಾಲಯದಿಂದ ಎಂ.ಎ ಶಿಕ್ಷಣ ಪಡೆದು ಉಪ್ಪಿನಂಗಡಿ, ಬೊಕ್ಕಪಟ್ಟ ಬೆಟ್ಟಂಪಾಡಿ ಮತ್ತು ಕಾಣಿಯೂರಿನ ಪದವಿ ಪೂರ್ವ ಕಾಲೇಜುಗಳಲ್ಲಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ ಇವರು ಸವಣೂರಿನ ವಿದ್ಯಾರಶ್ಮಿ ಶಿಕ್ಷಕ ತರಬೇತಿ ಶಿಕ್ಷಣ ಸಂಸ್ಥೆಯಲ್ಲಿ ಗೌರವ ಪ್ರಾಚಾರ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ತುಳುನಾಡಿನ ಜಾನಪದ ಸಂಶೋಧನೆಗೆ ಹಾಗೂ ಶಾಲೆಗಳಲ್ಲಿ ತುಳು ಕಲಿಕೆಗೆ ಉತ್ತೇಜನ ನೀಡಿದ್ದರು.

    ಪಾಲ್ತಾಡಿಯವರು ವಿದ್ಯಾರ್ಥಿಯಾಗಿದ್ದಾಗಲೇ ಸಾಹಿತ್ಯದಲ್ಲಿ ಆಸಕ್ತಿಯನ್ನು ಹೊಂದಿದ್ದರು. 1979ರಲ್ಲಿ ಬಾಂಗ್ಲಾ ವಿಜಯ ಎಂಬ ಯಕ್ಷಗಾನ ಪ್ರಸಂಗ ರಚನೆ ಅವರ ಸಾಹಿತ್ಯದ ಬದುಕಿಗೆ ಮುನ್ನುಡಿ ಬರೆಯಿತು. ಕನ್ನಡ ಸಂಘ, ತುಳು ಸಂಘ, ಯಕ್ಷಗಾನ ಸಂಘ, ಸಮುದಾಯ ಸಂಘ ಇಂತಹ ಕೂಟಗಳನ್ನು ಆರಂಭಿಸಿ ತುಳು ಭಾಷೆಯ ಬೆಳವಣಿಗಾಗಿ ಶ್ರಮಿಸಿದ್ದಾರೆ. ಅವರ ಪಿಎಚ್. ಡಿ. ಅಧ್ಯಯನ ಪ್ರಬಂಧ ‘ನಲಿಕೆ ಜನಾಂಗದ ಕುಣಿತಗಳು’ ಕೃತಿ  ತುಳುನಾಡಿನ ಕುಣಿತ ಪ್ರಕಾರಗಳನ್ನು ಹೊರ ಜಗತ್ತಿಗೆ ಪರಿಚಯಿಸಿದೆ.

    ‘ಕಿರಣ’, ‘ಮೆಲುಕಾಡಿದಾಗ’, ‘ಅಜಕೆ’ (ತುಳು), ‘ದುನಿಪು’ (ತುಳು) ‘ಪಚ್ಚೆಕುರಲ್’ (ತುಳು) ಕವನಸಂಕಲನಗಳನ್ನು ರಚಿಸಿರುವ ಇವರು  ‘ತುಳು ಸಂಸ್ಕೃತಿದ ಪೊಲಬು’, ‘ನಾಗ ಬೆರ್ಮೆರ್’, ‘ತುಳು ಕಲ್ಪುಗ’, ‘ಕೆದಂಬಾಡಿ ರಾಮ ಗೌಡೆರ್’, ‘ಅತ್ತಾವರ ಆತಂತಾಚಾರ್ಯರ್’, ‘ನಾಗ ಬೆರ್ಮೆ’, ‘ಕೆನರಾ ರೈತ ಬಂಡಾಯ’, ‘ತುಳುನಾಡಿನ ಪಾಣಾರರು’. ‘ತುಳುನಾಡಿನ ಜನಪದ ಕಥೆಗಳು’, ‘ವಿಶಿಷ್ಟ ತುಳುನಾಡು’ ಮುಂತಾದ ಕೃತಿಗಳನ್ನು ರಚಿಸಿದ್ದಾರೆ.  

    ಶ್ರೀಯುತರು ಪತ್ನಿ ಸುಮಾ ಆರ್. ಆಚಾರ್, ಪುತ್ರಿಯರಾದ ಕಿರಣ ಪಿ. ಆರ್, ಸುಪ್ರಿಯ ಪಿ. ಆರ್, ಮಗ ಹರ್ಷವರ್ಧನ ಪಿ. ಆರ್ ಮತ್ತು  ಅಪಾರ ಬಂಧು ಮಿತ್ರರು ಹಾಗೂ ಸಾಹಿತ್ಯಾಭಿಮಾನಿಗಳನ್ನು ಅಗಲಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಪುತ್ತೂರಿನಲ್ಲಿ ‘ಅಟ್ಟಾಮುಟ್ಟಾ’ ಮಕ್ಕಳ ಬೇಸಿಗೆ ಶಿಬಿರ | ಮೇ 11ರಿಂದ 14
    Next Article ಉಡುಪಿಯ ಯಕ್ಷಗಾನ ಕೇಂದ್ರ ಇಂದ್ರಾಳಿಯಲ್ಲಿ ಯಕ್ಷಗಾನ ವೇಷಭೂಷಣ ಮತ್ತು ಬಣ್ಣಗಾರಿಕೆ ತರಬೇತಿ ಶಿಬಿರದ ಉದ್ಘಾಟನೆ
    roovari

    1 Comment

    1. Shashiraj Rao Kavoor on May 8, 2024 9:54 pm

      ಬಹಳ ಬೇಸರದ ವಿಷಯ. ಅಂತಿಮ ನಮನಗಳು

      Reply

    Add Comment Cancel Reply


    Related Posts

    ಪರಿಚಯ ಲೇಖನ | ಯಕ್ಷರಂಗದ ಕ್ರಿಯಾಶೀಲ ಪ್ರತಿಭೆ – ಸುಜನ್ ಕುಮಾರ್ ಅಳಿಕೆ

    May 25, 2025

    ಶ್ರೀ ಕ್ಷೇತ್ರ ಪಂಚಲಿಂಗದಲ್ಲಿ ಕಿರು ನಾಟಕ, ನೃತ್ಯ ನಮನ ಮತ್ತು ಯಕ್ಷಗಾನ ಪ್ರದರ್ಶನ | ಮೇ 25 ಮತ್ತು 26

    May 24, 2025

    ಪುಸ್ತಕ ವಿಮರ್ಶೆ | ‘ವ್ಯಥೆ ಕಥೆ’ ಕನ್ನಡದ ವಿಶಿಷ್ಟವಾದ ಕಿರು ಕಾದಂಬರಿ

    May 24, 2025

    ‘ಭಾಷಾಂತರ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಜೂನ್ 20

    May 24, 2025

    1 Comment

    1. Shashiraj Rao Kavoor on May 8, 2024 9:54 pm

      ಬಹಳ ಬೇಸರದ ವಿಷಯ. ಅಂತಿಮ ನಮನಗಳು

      Reply

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.