Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ಬೆಸೆಂಟ್ ಮಂದಿರದಲ್ಲಿ ‘ಗುರು ಪೂಣಿ೯ಮಾ’

    July 18, 2025

    ಯಕ್ಷದೇಗುಲ ಕಾಂತಾವರದ ‘ಯಕ್ಷೋಲ್ಲಾಸ’ | ಜುಲೈ 20

    July 18, 2025

    ಕೋಟೆಕಣಿ ಶ್ರೀ ರಾಮನಾಥ ಸಾಂಸ್ಕೃತಿಕ ಭವನದಲ್ಲಿ ಸಮಾರೋಪಗೊಂಡ ಯಕ್ಷಗಾನ ತರಬೇತಿ

    July 18, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಗುತ್ತಿಗಾರಿನಲ್ಲಿ ಸುಳ್ಯ ತಾಲೂಕು ಘಟಕದ ಕ.ಸಾ.ಪ. ವತಿಯಿಂದ ಸರಣಿ ಕಾರ್ಯಕ್ರಮ
    Literature

    ಗುತ್ತಿಗಾರಿನಲ್ಲಿ ಸುಳ್ಯ ತಾಲೂಕು ಘಟಕದ ಕ.ಸಾ.ಪ. ವತಿಯಿಂದ ಸರಣಿ ಕಾರ್ಯಕ್ರಮ

    July 18, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಸುಳ್ಯ : ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಪರಿಸರ ಜಾಗೃತಿಯಾನ, ಪರಿಸರ ಗೀತೆ ಗಾಯನ ಹಾಗೂ ಔಷಧ ಸಸ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧಾ ಸರಣಿ ಕಾರ್ಯಕ್ರಮವು ದಿನಾಂಕ 16 ಜುಲೈ 2025ರಂದು ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇಲ್ಲಿ ನಡೆಯಿತು.

    ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಉಪನ್ಯಾಸ ನೀಡಿದ ಪರಿಸರ ಪ್ರೇಮಿ, ಪ್ರಗತಿಪರ ಕೃಷಿಕ ಯಶೋಚಂದ್ರ ಪರಮಲೆ “ನಾವು ಎಷ್ಟೇ ತಾಂತ್ರಿಕವಾಗಿ ಬೆಳೆದರು ಪರಿಸರವೇ ನಮ್ಮ ಜೀವಾಳ. ಅದನ್ನು ಮುಂದಿನ ಪೀಳಿಗೆಗೆ ಮುಟ್ಟಿಸುವುದು ನಮ್ಮ ಕರ್ತವ್ಯ, ಪರಿಸರವನ್ನು ಸಂರಕ್ಷಿಸೋಣ” ಎಂದು ಹೇಳಿದರು.

    ಸಭಾಧ್ಯಕ್ಷತೆಯನ್ನು ಕ.ಸಾ.ಪ. ಅಧ್ಯಕ್ಷ ಚಂದ್ರಶೇಖರ ಪೇರಾಲು ವಹಿಸಿದ್ದರು. ವೇದಿಕೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪಂಜ ಹೋಬಳಿ ಘಟಕದ ಅಧ್ಯಕ್ಷರಾದ ಬಾಬು ಗೌಡ, ಅಚ್ರಪ್ಪಾಡಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ತೇಜಸ್ವಿ ಕಡಪಳ, ಕಾರ್ಯಕ್ರಮ ಸಂಯೋಜಕರಾದ ಯೋಗೀಶ್ ಹೊಸೊಳಿಕೆ, ಕಾಲೇಜು ಪ್ರಾಂಶುಪಾಲರಾದ ಚೆನ್ನಮ್ಮ ಪಿ., ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಪೂರ್ಣಿಮಾ ಯಂ., ಎನ್.ಡಿ.ಎಂ.ಸಿ. ಅಧ್ಯಕ್ಷರಾದ ಕೇಶವ ಗೌಡ ಕಾಂತಿಲ, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ವಿಶ್ವನಾಥ ನಾಲ್ತಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

    ಈ ಸಂದರ್ಭದಲ್ಲಿ ಯಶೋಚಂದ್ರ ಪರಮಲೆಯವರನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾಭೋಧಿನಿ ಬಾಳಿಲ ಇದರ ನಿವೃತ್ತ ಮುಖ್ಯ ಶಿಕ್ಷಕರಾದ ಶಿವರಾಮ ಶಾಸ್ತ್ರಿ, ಬಿಳಿನೆಲೆ ಪ್ರೌಢಶಾಲಾ ನಿವೃತ್ತ ಹಿಂದಿ ಶಿಕ್ಷಕರಾದ ದುಗ್ಗಪ್ಪ ಕುಳ್ಳಂಪ್ಪಾಡಿ, ಪದವಿ ಪೂರ್ವ ಕಾಲೇಜು ಪಂಜ ಇದರ ನಿವೃತ್ತ ಪ್ರಾಂಶುಪಾಲರಾದ ವೆಂಕಪ್ಪ ಕೇನಾಜೆ, ಸಿ.ಆರ್.ಪಿ. ಕುಶಾಲಪ್ಪ ತುಂಬತ್ತಾಜೆ, ನಿವೃತ್ತ ರಾಜ್ಯಶಾಸ್ತ್ರ ಉಪನ್ಯಾಸಕರಾದ ರಾಮಚಂದ್ರ ಪಳಂಗಾಯ ಉಪಸ್ಥಿತರಿದ್ದರು.

    ಭಾವನ ಸುಗಮ ಸಂಗೀತ ಬಳಗದ ಕೆ.ಆರ್. ಗೋಪಾಲಕೃಷ್ಣ ಹಾಗೂ ಗಾಯಕಿ ಕುಮಾರಿ ಲಿಪಿಶ್ರೀ ಇವರಿಂದ ಪರಿಸರ ಗೀತಾ ಗಾಯನ ಕಾರ್ಯಕ್ರಮ ನಡೆಯಿತು. ಅಂತೆಯೇ ಔಷಧ ಸಸ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಭಾಷಣ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಯಿತು. ಪಂಜ ಹೋಬಳಿ ಘಟಕದ ಅಧ್ಯಕ್ಷರಾದ ಬಾಬು ಗೌಡ ಅಚ್ರಪ್ಪಾಡಿ ಸ್ವಾಗತಿಸಿ, ಕಾಲೇಜು ಪ್ರಾಂಶುಪಾಲರಾದ ಚೆನ್ನಮ್ಮ ಪಿ. ವಂದಿಸಿ, ಉಪನ್ಯಾಸಕರಾದ ರಂಜಿತ್ ಅಂಬೆಕಲ್ಲು ಕಾರ್ಯಕ್ರಮ ನಿರೂಪಿಸಿದರು.

    baikady Literature Music roovari
    Share. Facebook Twitter Pinterest LinkedIn Tumblr WhatsApp Email
    Previous Articleಮೊರಾರ್ಜಿ ದೇಸಾಯಿ ವಸತಿ ಶಾಲೆ ಯಡಾಡಿ-ಮತ್ಯಾಡಿಯಲ್ಲಿ ಉದ್ಘಾಟನೆಗೊಂಡ ಯಕ್ಷಶಿಕ್ಷಣ
    Next Article ಕರ್ನಾಟಕ ಪಬ್ಲಿಕ್ ಸ್ಕೂಲ್ ಬಿದ್ಕಲ್ ಕಟ್ಟೆಯಲ್ಲಿ ಪ್ರಾರಂಭಗೊಂಡ ಯಕ್ಷಶಿಕ್ಷಣ
    roovari

    Add Comment Cancel Reply


    Related Posts

    ಮಂಗಳೂರಿನ ಬೆಸೆಂಟ್ ಮಂದಿರದಲ್ಲಿ ‘ಗುರು ಪೂಣಿ೯ಮಾ’

    July 18, 2025

    ಯಕ್ಷದೇಗುಲ ಕಾಂತಾವರದ ‘ಯಕ್ಷೋಲ್ಲಾಸ’ | ಜುಲೈ 20

    July 18, 2025

    ಕೋಟೆಕಣಿ ಶ್ರೀ ರಾಮನಾಥ ಸಾಂಸ್ಕೃತಿಕ ಭವನದಲ್ಲಿ ಸಮಾರೋಪಗೊಂಡ ಯಕ್ಷಗಾನ ತರಬೇತಿ

    July 18, 2025

    ಕರ್ನಾಟಕ ಪಬ್ಲಿಕ್ ಸ್ಕೂಲ್ ಬಿದ್ಕಲ್ ಕಟ್ಟೆಯಲ್ಲಿ ಪ್ರಾರಂಭಗೊಂಡ ಯಕ್ಷಶಿಕ್ಷಣ

    July 18, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.