Subscribe to Updates

    Get the latest creative news from FooBar about art, design and business.

    What's Hot

    ಖಿದ್ಮಾ ಫೌಂಡೇಶನ್ ಇದರ ರಾಜ್ಯ ಮಟ್ಟದ ಲೇಖನ ಸ್ಪರ್ಧೆಯ ಫಲಿತಾಂಶ ಪ್ರಕಟ

    June 2, 2025

    ಮಡಿಕೇರಿಯಲ್ಲಿ ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನೋತ್ಸವ ಮತ್ತು ದತ್ತಿ ಪ್ರಶಸ್ತಿ ಪ್ರದಾನ | ಜೂನ್ 04

    June 2, 2025

    ಯಕ್ಷಗಾನ ಕಲಾರಂಗದ ಸುವರ್ಣ ಸಡಗರದಲ್ಲಿ ಯಕ್ಷಗಾನ ಕಲಾವಿದರ

    June 2, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಶಾರದಾ ಪದವಿಪೂರ್ವ ಕಾಲೇಜಿನಲ್ಲಿ ಅಂತರ್ ಕಾಲೇಜು ಮಟ್ಟದ ಶಾರದಾ ಮಹೋತ್ಸವ ಸಾಂಸ್ಕೃತಿಕ ಸ್ಪರ್ಧೆ-2023
    Competition

    ಶಾರದಾ ಪದವಿಪೂರ್ವ ಕಾಲೇಜಿನಲ್ಲಿ ಅಂತರ್ ಕಾಲೇಜು ಮಟ್ಟದ ಶಾರದಾ ಮಹೋತ್ಸವ ಸಾಂಸ್ಕೃತಿಕ ಸ್ಪರ್ಧೆ-2023

    September 16, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು: ಮಂಗಳೂರಿನ ಶಾರದಾ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ನಡೆದ ಅಂತರ್ ಕಾಲೇಜು ಮಟ್ಟದ ಶಾರದಾ ಮಹೋತ್ಸವ ಸಾಂಸ್ಕೃತಿಕ ಸ್ಪರ್ಧೆಯು ದಿನಾಂಕ 09-09-2023 ರಂದು ನಡೆಯಿತು.

    ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪ್ರಸಿದ್ಧ ಹರಿದಾಸರು ಮತ್ತು ನ್ಯಾಯವಾದಿಗಳಾದ ಶ್ರೀ ಕಲಾರತ್ನ ಶಂನಾಡಿಗ ಕುಂಬ್ಳೆ “ಶಿಕ್ಷಣದ ಗುರಿ ಕೇವಲ ಅಂಕಗಳಿಕೆ ಮತ್ತು ಉದ್ಯೋಗ ಸಂಪಾದನೆಗೆ ಮಾತ್ರ ಸೀಮಿತವಾಗಬಾರದು. ವಿದ್ಯಾರ್ಥಿಗಳು ಪಠ್ಯದ ಜೊತೆಗೆ ನಮ್ಮ ಪರಂಪರಾಗತ ಕಲೆ, ಸಾಹಿತ್ಯ, ಸಂಸ್ಕೃತಿಗಳ ಬಗ್ಗೆಯೂ ಅರಿವು ಹೊಂದಿರಬೇಕು. ಆಗ ಮಾತ್ರ ವ್ಯಕ್ತಿತ್ವ ಪರಿಪೂರ್ಣವಾಗಲು ಸಾಧ್ಯ.” ಎಂದು ಅಭಿಪ್ರಾಯಪಟ್ಟರು.

    ಕಾರ್ಯಕ್ರಮದಲ್ಲಿ ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಎಂ.ಬಿ.ಪುರಾಣಿಕ್ ಅಧ್ಯಕ್ಷತೆ ವಹಿಸಿದ್ದರು. ಅಪರ್ಣಾ, ಅನಘಾ, ಸಾಕ್ಷಿ ಪ್ರಾರ್ಥಿಸಿ, ಸಂಖ್ಯಾಶಾಸ್ತ್ರ ವಿಭಾಗದ ಮುಖ್ಯಸ್ಥೆ ಸ್ಮಿತಾ ಪೈ ಸ್ವಾಗತಿಸಿದರು. ಪ್ರಾಂಶುಪಾಲ ಮಹಾಬಲೇಶ್ವರ ಭಟ್ ಸೊಡಂಕೂರು ಪ್ರಸ್ತಾವಿಕ ಮಾತುಗಳನ್ನಾಡಿ, ಉಪ ಪ್ರಾಂಶುಪಾಲ ಪ್ರಕಾಶ್ ನಾಯ್ಡ ಅತಿಥಿಗಳನ್ನು ಪರಿಚಯಿಸಿದರು. ಸಂಸ್ಕೃತ ವಿಭಾಗ ಮುಖ್ಯಸ್ಥ ರಮೇಶ ಆಚಾರ್ಯ ವಂದಿಸಿ, ಉಪನ್ಯಾಸಕಿ ಮಾಧವಿ.ಬಿ ಕಾರ್ಯಕ್ರಮ ನಿರ್ವಹಿಸಿದರು.

    ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ವಿಶ್ವಸ್ಥ ಸುಧಾಕರ ರಾವ್‌ ಪೇಜಾವರ, ಹೊಸದಿಗಂತ ದೈನಿಕದ ಸ್ಥಾನೀಯ ಸಂಪಾದಕ ಪ್ರಕಾಶ್‌ ಇಳಂತಿಲ, ಶಾರದಾ ಪದವಿ ಕಾಲೇಜಿನ ಪ್ರಾಂಶುಪಾಲೆ ಮೀನಾ ಪಣಿಕರ್ ಉಪಸ್ಥಿತರಿದ್ದರು. ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ 20ಕ್ಕೂ ಅಧಿಕ ಕಾಲೇಜಿನ 600 ವಿದ್ಯಾರ್ಥಿಗಳು ಭಾಗವಹಿಸಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಉಡುಪಿಯಲ್ಲಿ ಕರ್ನಾಟಕ ಕರಾವಳಿ ನೃತ್ಯಕಲಾ ಪರಿಷತ್ತಿನ ‘ಕಿಶೋರ ಪ್ರತಿಭೋತ್ಸವ 2023’
    Next Article ಕಾಸರಗೋಡಿನಲ್ಲಿ ಜಿಲ್ಲಾ ಮಟ್ಟದ ಕುಣಿತ ಭಜನಾ ಸ್ಪರ್ಧೆ 
    roovari

    Add Comment Cancel Reply


    Related Posts

    ಖಿದ್ಮಾ ಫೌಂಡೇಶನ್ ಇದರ ರಾಜ್ಯ ಮಟ್ಟದ ಲೇಖನ ಸ್ಪರ್ಧೆಯ ಫಲಿತಾಂಶ ಪ್ರಕಟ

    June 2, 2025

    ಕನ್ನಡದ ಯುವ ಲೇಖಕರಿಗಾಗಿ ಕಥೆ ಮತ್ತು ಕಾವ್ಯ ಸ್ಪರ್ಧೆ | ಕೊನೆಯ ದಿನಾಂಕ ಜೂನ್ 20

    June 2, 2025

    ಅಂತರ್ಜಾಲ ಆಧಾರಿತ ಅಂತರ್ರಾಜ್ಯಮಟ್ಟದ ಚಿತ್ರ ಕಾವ್ಯ ರಚನೆ ಸ್ಪರ್ಧೆ

    May 30, 2025

    ‘ಕವನ ವಾಚನ ವಿಡಿಯೋ ಸ್ಪರ್ಧೆ 2025’ | ಕೊನೆಯ ದಿನಾಂಕ ಜೂನ್ 15

    May 28, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.