Subscribe to Updates

    Get the latest creative news from FooBar about art, design and business.

    What's Hot

    ಭರತಾಂಜಲಿಯ ತ್ರಿಂಶತ್ ಪ್ರಯುಕ್ತ ‘ನೃತ್ಯ ರತ್ನ ಶೋಧ’ ಭರತನಾಟ್ಯ ಸ್ಪರ್ಧೆ | ಕೊನೆಯ ದಿನಾಂಕ ಆಗಸ್ಟ್ 31

    August 18, 2025

    ಮೈಸೂರಿನಲ್ಲಿ ಉದ್ಘಾಟನೆಗೊಂಡ ‘ನಿರಂತರ ಸಹಜ ರಂಗ – 2025’ ಶಿಬಿರ

    August 18, 2025

    ವಿವೇಕಾನಂದ ಕಾಲೇಜಿನಲ್ಲಿ ವಿವೇಕ ಸ್ಮೃತಿ 19ನೇ ಅವತರಣಿಕೆ

    August 18, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ವಿವಿಧ ಕ್ಷೇತ್ರದ ಆರು ಸಾಧಕರಿಗೆ 2024ನೇ ಸಾಲಿನ ‘ಶರಣ ಸಂಕುಲ ರತ್ನ ರಾಷ್ಟ್ರೀಯ ಪ್ರಶಸ್ತಿ’| ಡಿಸೆಂಬರ್ 29
    Awards

    ವಿವಿಧ ಕ್ಷೇತ್ರದ ಆರು ಸಾಧಕರಿಗೆ 2024ನೇ ಸಾಲಿನ ‘ಶರಣ ಸಂಕುಲ ರತ್ನ ರಾಷ್ಟ್ರೀಯ ಪ್ರಶಸ್ತಿ’| ಡಿಸೆಂಬರ್ 29

    December 20, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಹಾಸನ : ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ(ರಿ.) ಬೆಂಗಳೂರು ವತಿಯಿಂದ ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಎಡೆಯೂರು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿ ದೇವಾಲಯದ ಆವರಣದಲ್ಲಿ ಹಮ್ಮಿಕೊಂಡಿರುವ ಅಖಿಲ ಕರ್ನಾಟಕ ಪ್ರಥಮ ಶರಣ ಸಾಹಿತ್ಯ ಸಮ್ಮೇಳನ ಸಮಾರಂಭದಲ್ಲಿ ರಾಜ್ಯದ ವಿವಿಧ ಕ್ಷೇತ್ರದ ಆರು ಸಾಧಕರಿಗೆ 2024ನೇ ಸಾಲಿನ “ಶರಣ ಸಂಕುಲ ರತ್ನ ರಾಷ್ಟ್ರೀಯ ಪ್ರಶಸ್ತಿ” ನೀಡಿ ಗೌರವಿಸಲಾಗುತ್ತದೆ ಎಂದು ಸಂಸ್ಥಾಪಕ ಅಧ್ಯಕ್ಷ ಕೊಟ್ರೇಶ್ ಎಸ್. ಉಪ್ಪಾರ್ ತಿಳಿಸಿದ್ದಾರೆ.
    ಟ್ರಸ್ಟಿಗಳಾದ ನಾಗರಾಜ್ ದೊಡ್ಡಮನಿ, ಎಚ್. ಎಸ್. ಬಸವರಾಜ್, ವಾಸು ಸಮುದ್ರವಳ್ಳಿ, ಡಾ. ಪಿ. ದಿವಾಕರ ನಾರಾಯಣ, ದೇಸು ಆಲೂರು, ಡಾ. ಎಚ್. ಕೆ. ಹಸೀನಾ, ಲತಾಮಣಿ ಎಂ. ಕೆ. ತುರುವೇಕೆರೆ ಮುಂತಾದವರನ್ನೊಳಗೊಂಡ ಆಯ್ಕೆ ಸಮಿತಿಯು ಎನ್. ಶೈಲಜಾ ಹಾಸನ (ಸಾಹಿತ್ಯ ಕ್ಷೇತ್ರ), ಸೈಯದ್ ಮುಹೀಬುಲ್ಲಾ ಖಾದ್ರಿ (ಪಾರಂಪರಿಕ ವೈದ್ಯಕೀಯ ಕ್ಷೇತ್ರ), ಮಹೇಶ್ ಎನ್. (ಮಾಧ್ಯಮ ಕ್ಷೇತ್ರ), ಚಂದ್ರಪ್ಪ ಕೆ. ಆರ್. (ಮುದ್ರಣ ಕ್ಷೇತ್ರ), ಸಿದ್ದೇಶ್ ಕುಮಾರ್ ವೈ.ಟಿ. (ಸಂಗೀತ ಕ್ಷೇತ್ರ) ಹಾಗೂ ವೈ. ಎಸ್. ರಮೇಶ್ (ಸಂಘಟನಾ ಕ್ಷೇತ್ರ) ಈ ಆರು ಮಂದಿ ಸಾಧಕರನ್ನು ಆಯ್ಕೆ ಮಾಡಿದೆ.
    ದಿನಾಂಕ 29 ಡಿಸೆಂಬರ್ 2024ರ ಭಾನುವಾರ ನಡೆಯಲಿರುವ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿರುವುದು. ಕಾರ್ಯಕ್ರಮದಲ್ಲಿ ಕಲ್ಬುರ್ಗಿ ಜಿಲ್ಲೆಯ ಶ್ರೀ ತೋಂಟದಾರ್ಯ ಅನುಭವ ಮಂಟಪ ಆಳಂದ ಮಠದ ಶ್ರೀ ಕೋರಣೇಶ್ವರ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದು, ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಎಲ್. ಎನ್. ಮುಕುಂದರಾಜ್ ಸಮ್ಮೇಳನ ಉದ್ಘಾಟಿಸಲಿದ್ದಾರೆ. ತುಮಕೂರಿನ ಹಿರಿಯ ಸಾಹಿತಿ ಹಾಗೂ ಹೋರಾಟಗಾರ್ತಿ ಡಾ. ಬಿ. ಸಿ. ಶೈಲಾ ನಾಗರಾಜ್ ಅಧ್ಯಕ್ಷತೆ ವಹಿಸಲಿದ್ದಾರೆ. ನಾಡಿನ ವಿವಿಧ ಕ್ಷೇತ್ರಗಳ ಸಾಧಕರಿಗೆ ಕುಣಿಗಲ್ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಡಾ. ಎಚ್. ಡಿ. ರಂಗನಾಥ್ ಹಾಗೂ ರಾಜ್ಯ ಉಪಾಧ್ಯಕ್ಷರಾದ ಟಿ. ಸತೀಶ್ ಜವರೇಗೌಡ ಇವರು  ‘ಶರಣ ಸಂಕುಲ ರತ್ನ ರಾಷ್ಟ್ರೀಯ ಪುರಸ್ಕಾರ’ ಪ್ರದಾನ ಮಾಡಲಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleತೆಕ್ಕಟ್ಟೆ ಹಯಗ್ರೀವ ಕಲ್ಯಾಣ ಮಂಟಪದಲ್ಲಿ ಗೌರವ ಸನ್ಮಾನ ಮತ್ತು ಯಕ್ಷಗಾನ ಪ್ರದರ್ಶನ ‘ಸುವರ್ಣ ಪರ್ವ -5’ | ಡಿಸೆಂಬರ್ 25
    Next Article ಬೆಳಗಾವಿಯ ಲೋಕಮಾನ್ಯ ರಂಗ ಮಂದಿರದಲ್ಲಿ ‘ಗಂಗಾವತರಣ’ ನಾಟಕ ಪ್ರದರ್ಶನ | ಡಿಸೆಂಬರ್ 25
    roovari

    Add Comment Cancel Reply


    Related Posts

    ಅರ್ಥಪೂರ್ಣವಾಗಿ ಜರಗಿದ ಹಂದಾಡಿ ಬಾಲಕೃಷ್ಣ ನಾಯಕ್ ಇವರ ಪ್ರಥಮ ಪುಣ್ಯತಿಥಿ

    August 16, 2025

    ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ‘ಉಮ್ಮಕ್ಕೆನ ನೆಂಪು’ | ಆಗಸ್ಟ್ 17

    August 16, 2025

    ನೂತನ ರವೀಂದ್ರ ಮಂಟಪದಲ್ಲಿ ಸೇಡಿಯಾಪು ಪ್ರಶಸ್ತಿ ಹಾಗೂ ಕಡೆಂಗೋಡ್ಲು ಕಾವ್ಯ ಪ್ರಶಸ್ತಿ ಪ್ರದಾನ | ಆಗಸ್ಟ್ 16

    August 14, 2025

    ಉಡುಪಿ ಕಿದಿಯೂರಿನಲ್ಲಿ ‘ಪಣಿಯಾಡಿ ಕಾದಂಬರಿ ಪ್ರಶಸ್ತಿ’ ಪ್ರದಾನ | ಆಗಸ್ಟ್ 17

    August 13, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.