Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ 52ನೇ ವಿವೇಕ ವಾಣಿ ಸರಣಿ ಉಪನ್ಯಾಸ

    February 14, 2026

    ಪ್ರೊ. ಬಿ.ಎ. ವಿವೇಕ ರೈಯವರ ‘ಪಡುವಣ ತೀರದ ಕನ್ನಡ ನಾಡಿನ’ ಕೃತಿ ಲೋಕಾರ್ಪಣೆ

    February 14, 2026

    ಮುಂಬೈಯಲ್ಲಿ ಪಯಣ ಪ್ರಸ್ತುತ ಪಡಿಸುವ ‘ತಲ್ಕಿ’ ನಾಟಕ | ಫೆಬ್ರವರಿ 16

    February 14, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರಿನಲ್ಲಿ ದಿವಂಗತ ಶರವು ರಾಮಕೃಷ್ಣ ಶಾಸ್ತ್ರಿ ಸಂಸ್ಮರಣಾ ಪ್ರಶಸ್ತಿ ಪ್ರದಾನ
    Awards

    ಮಂಗಳೂರಿನಲ್ಲಿ ದಿವಂಗತ ಶರವು ರಾಮಕೃಷ್ಣ ಶಾಸ್ತ್ರಿ ಸಂಸ್ಮರಣಾ ಪ್ರಶಸ್ತಿ ಪ್ರದಾನ

    April 24, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಶರವು ಶ್ರೀ ಮಹಾಗಣಪತಿ ದೇವಸ್ಥಾನದ ಕಾಲಾವಧಿ ಮಹೋತ್ಸವದ ಸಮಾರೋಪ ಸಮಾರಂಭ ಹಾಗೂ ದಿವಂಗತ ಶರವು ರಾಮಕೃಷ್ಣ ಶಾಸ್ತ್ರಿ ಸಂಸ್ಮರಣಾ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 17-04-2024 ರಂದು ಮಂಗಳೂರಿನ ಶರವು ದೇವಸ್ಥಾನದ ವಠಾರದಲ್ಲಿ ನಡೆಯಿತು.

    ಶರವು ರಾಮಕೃಷ್ಣ ಶಾಸ್ತ್ರಿ ಸಂಸ್ಮರಣಾ ಪ್ರಶಸ್ತಿಯನ್ನು ಧಾರ್ಮಿಕ , ಕಲಾ, ವಿದ್ಯಾ, ಹಾಗೂ ಅತ್ಯುತ್ತಮ ಸಾಮಾಜಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಮಾನ್ಯರಿಗೆ ನೀಡುತ್ತಾ ಬಂದಿದ್ದು, ಈ ಸಾಲಿನ ಪ್ರಶಸ್ತಿಯನ್ನು ವೇದಮೂರ್ತಿ ಅತ್ತೂರು ಜಯರಾಮ ಉಡುಪರಿಗೆ ನೀಡಿ ಗೌರವಿಸಲಾಯಿತು. ಪ್ರಶಸ್ತಿಯು ಚಿನ್ನದ ಪದಕ, ಗೌರವ ಸಂಭಾವನೆ, ಗೌರವ ಪತ್ರವನ್ನು ಒಳಗೊಂಡಿತ್ತು.

    ಶರವು ಕ್ಷೇತ್ರದ ಶಿಲೆ ಶಿಲೆ ಮೋಕ್ತೇಸರಾದ ಶರವು ರಾಘವೇಂದ್ರ ಶಾಸ್ತ್ರಿ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಬಿ. ರಘುನಾಥ ಸೋಮಯಾಜಿ ಭಾಗವಹಿಸಿದ್ದರು. ಸುಧಾಕರ ರಾವ್ ಪೇಜಾವರ ಇವರು ಶರವು ರಾಮಕೃಷ್ಣ ಶಾಸ್ತ್ರಿ ಸಂಸ್ಮರಣೆ ಮತ್ತು ಪ್ರಶಸ್ತಿ ಪುರಸ್ಕೃತರಾದ ಅತ್ತೂರು ಜಯರಾಮ ಉಡುಪರ ಅಭಿನಂದನೆಗೈದರು. ವೇದಿಕೆಯಲ್ಲಿ ಡಾಕ್ಟರ್ ಸುಧೇಶ್ ಶಾಸ್ತ್ರಿ ಶರವು, ರಾಹುಲ್ ಶಾಸ್ತ್ರಿ ಶರವು, ಪ್ರದೀಪ್ ಕುಮಾರ್ ಕಲ್ಕೂರ ಮತ್ತು ಗಿರಿ ಪ್ರಕಾಶ್ ತಂತ್ರಿ ಪೊಳಲಿ ಉಪಸ್ಥಿತರಿದ್ದರು. ಪ್ರಕಾಶ್ ಚಂದ್ರ ರಾವ್ ಸ್ವಾಗತಿಸಿ, ಅನಂತ ರಾಮ್ ವಂದಿಸಿದರು.

    ಪ್ರಶಸ್ತಿಯನ್ನು ಪಡೆದ ಉಡುಪರು ಮಂಗಳೂರು ನೆಲ್ಲಿಕಾಯಿ ರಾಘವೇಂದ್ರ ಮಠದ ಪ್ರಧಾನ ಅರ್ಚಕರಾಗಿ ಕಳೆದ 50 ವರ್ಷಗಳಿಗಿಂತಲೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದಾರೆ. ಮತ್ತು ಸ್ವತಃ ಸಂಗೀತ, ಚಿತ್ರ, ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಕದ್ರಿ ಮಲ್ಲಿಕಾ ಕಲಾ ವೃಂದದ ಮಕ್ಕಳ ಸಂಗೀತ ಮತ್ತು ನೃತ್ಯ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸುಮಾರು ನಲವತ್ತು ಮಂದಿ ಭಾಗವಹಿಸಿ ನೆರೆದ ಪ್ರೇಕ್ಷಕರನ್ನು ರಂಜಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನಲ್ಲಿ ‘ಶ್ರೀ ಶ್ಯಾಮ ಶಾಸ್ತ್ರಿಗಳಿಗೆ ನಮನ’ ಕಾರ್ಯಕ್ರಮ | ಏಪ್ರಿಲ್ 27
    Next Article ಕೋಡಿಕಲ್ಲಿನಲ್ಲಿ ‘ಭಕ್ತ ಅಂಬರೀಶ’ ಹರಿಕಥಾ ಕಾಲಕ್ಷೇಪ
    roovari

    Add Comment Cancel Reply


    Related Posts

    ಬೆಂಗಳೂರು ವಿ.ವಿ.ಯಲ್ಲಿ ‘ಕಾವ್ಯ ಶಿವರಾತ್ರಿ’ ಅಹೋರಾತ್ರಿ ಕಾವ್ಯ ಗಾಯನ | ಫೆಬ್ರವರಿ 15

    February 14, 2026

    ಕಲಾವಿದ ಲಕ್ಷ್ಮಣ ಶೆಟ್ಟಿ ತಾರೆಮಾರ್ ಇವರಿಗೆ ‘ಬೊಂಡಾಲ ಪ್ರಶಸ್ತಿ’ ಪ್ರದಾನ | ಫೆಬ್ರವರಿ 19 ಮತ್ತು 20

    February 13, 2026

    ಸಂಘಟಕ, ಪತ್ರಕರ್ತ, ಸಾಹಿತಿ ಜಯಾನಂದ ಪೆರಾಜೆಗೆ ‘ಕವಿಕಾವ್ಯ ವಿಭೂಷಣ ಪ್ರಶಸ್ತಿ’

    February 13, 2026

    ತೊಕ್ಕೊಟ್ಟು ಒಳಪೇಟೆಯಲ್ಲಿ ‘ವೀರರಾಣಿ ಅಬ್ಬಕ್ಕ ಉತ್ಸವ 2025-2026’ | ಫೆಬ್ರವರಿ 14

    February 12, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.