Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ವೀಣಾ ವಾದನ ಗಂಧರ್ವ ಆರ್. ಕೆ. ಸೂರ್ಯನಾರಾಯಣ

    June 14, 2025

    ‘ಮಾತೋಶ್ರೀ ಶಂಕರಮ್ಮ ಪ. ಬಳಿಗಾರ್’ ಪ್ರಶಸ್ತಿ ಪ್ರದಾನ ಸಮಾರಂಭ | ಜೂನ್ 22

    June 14, 2025

    ಉದ್ಘಾಟನೆಗೊಂಡ ‘ಯಕ್ಷಾಂತರಂಗ’ದ ಉಚಿತ ಯಕ್ಷಗಾನ ಹೆಜ್ಜೆ ತರಗತಿ

    June 14, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ರಂಗಚಿನ್ನಾರಿ ಇದರ ಮಹಿಳಾ ಘಟಕ ನಾರಿ ಚಿನ್ನಾರಿಯಿಂದ ‘ಶರದ್ವಿಲಾಸ’ | ಅಕ್ಟೋಬರ್ 29ರಂದು
    Bharathanatya

    ರಂಗಚಿನ್ನಾರಿ ಇದರ ಮಹಿಳಾ ಘಟಕ ನಾರಿ ಚಿನ್ನಾರಿಯಿಂದ ‘ಶರದ್ವಿಲಾಸ’ | ಅಕ್ಟೋಬರ್ 29ರಂದು

    October 27, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾಸರಗೋಡು : ಕಾಸರಗೋಡು ಇಲ್ಲಿನ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಸ್ಥೆ ರಂಗಚಿನ್ನಾರಿ ಕಾಸರಗೋಡು (ರಿ.) ಇವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇದರ ಸಹಯೋಗದೊಂದಿಗೆ ರಂಗಚಿನ್ನಾರಿ ಇದರ ಮಹಿಳಾ ಘಟಕ ನಾರಿ ಚಿನ್ನಾರಿಯ 10ನೇ ಸರಣಿ ಕಾರ್ಯಕ್ರಮ ‘ಶರದ್ವಿಲಾಸ’ ದಿನಾಂಕ 29-10- 2023 ಆದಿತ್ಯವಾರ ಅಪರಾಹ್ನ ಗಂಟೆ 2.30 ರಿಂದ ಕಾಸರಗೋಡು ಕರಂದಕ್ಕಾಡು ಇಲ್ಲಿನ ಪದ್ಮಗಿರಿ ಕಲಾಕುಟೀರದಲ್ಲಿ ನಡೆಯಲಿದೆ.

    ಕಾರ್ಯಕ್ರಮವನ್ನು ಹೆಸರಾಂತ ಲೇಖಕಿ ವಿಜಯಾ ಸುಬ್ರಹ್ಮಣ್ಯ ಕುಂಬಳೆ ಉದ್ಘಾಟಿಸಲಿದ್ದು, ನಾರಿ ಚಿನ್ನಾರಿಯ ಕಾರ್ಯಾಧ್ಯಕ್ಷರಾದ ಸವಿತಾ ಟೀಚರ್ ಅಧ್ಯಕ್ಷತೆ ವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಕೊರಗ ಸಮುದಾಯದ ಮೊದಲ ಮಹಿಳಾ ಸಾಧಕಿ ಮೀನಾಕ್ಷಿ ಬೊಡ್ಡೋಡಿ ಹಾಗೂ ಮಹಿಳಾ ಉದ್ಯಮಿ ಬಿಂದು ದಾಸ್ ಇವರಿಗೆ ಗೌರವಾರ್ಪಣೆ ನಡೆಯಲಿದೆ. ಕವಯತ್ರಿ ವನಜಾಕ್ಷಿ ಚೆಂಬ್ರಕಾನ ಮೀನಾಕ್ಷಿ ಬೊಡ್ಡೋಡಿ ಇವರನ್ನು ಹಾಗೂ ನಾರಿ ಚಿನ್ನಾರಿಯ ಜತೆ ಕಾರ್ಯದರ್ಶಿ ಸರ್ವಮಂಗಳ ಜಯ್ ಪುಣಿಚಿತ್ತಾಯ ಬಿಂದು ದಾಸ್ ಇವರನ್ನು ಪರಿಚಯಿಸಲಿದ್ದಾರೆ.

    ಸಭಾಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಅಪರ್ಣಾ ಶೆಟ್ಟಿ ಮತ್ತು ನಂದನ ಇವರಿಂದ ಭರತನಾಟ್ಯ, ಕಾವ್ಯ ಎನ್. ಇವರಿಂದ ಕನ್ನಡ ಭಾವಗೀತೆ, ಧನ್ಯಾ ಕೃಷ್ಣಪ್ರಸಾದ್ ಇವರಿಂದ ಮೋಹಿನಿಯಾಟ್ಟಂ, ಸರೋಜ ಸುಬ್ರಹ್ಮಣ್ಯ ಭಟ್ ಇವರಿಂದ ಶಾಸ್ತ್ರೀಯ ಸಂಗೀತ, ಪ್ರಿಯಾಂಕ ರಜಿತ್ ಇವರಿಂದ ನೃತ್ಯ ರೂಪಕ, ಸುಜಾತ ಕನಿಯಾಲ ಇವರಿಂದ ತುಳು ಜಾನಪದ ಗೀತೆ, ಅನ್ವಿತಾ ಕಾಮತ್ ಇವರಿಂದ ವೀಣಾ ವಾದನ, ಶೀನಾ ಶಿವದಾಸ್ ಇವರಿಂದ ಮಲಯಾಳ ಜಾನಪದ ಹಾಡು ಹಾಗೂ ಶ್ರೀ ಲಕ್ಷ್ಮೀ ಶೆಣೈ ಇವರಿಂದ ಹರಿಕಥೆ ಕಾರ್ಯಕ್ರಮ ನಡೆಯಲಿದೆ.
    ಈ ಕಾರ್ಯಕ್ರಮಕ್ಕೆ ನಾರಿ ಚಿನ್ನಾರಿಯ ಅಧ್ಯಕ್ಷರಾದ ಸವಿತಾ ಟೀಚರ್, ಪ್ರಧಾನ ಕಾರ್ಯದರ್ಶಿಯಾದ ದಿವ್ಯಾ ಗಟ್ಟಿ ಪರಕ್ಕಿಲ, ‘ನಾರಿ ಚಿನ್ನಾರಿ’ಯ ಸದಸ್ಯೆಯರು ಹಾಗೂ ರಂಗ ಚಿನ್ನಾರಿಯ ಕಾಸರಗೋಡು ಚಿನ್ನಾ, ಸತ್ಯನಾರಾಯಣ ಕೆ., ಕೆ. ಸತೀಶ್ಚಂದ್ರ ಭಂಡಾರಿ ಹಾಗೂ ಮನೋಹರ ಶೆಟ್ಟಿ ಎಲ್ಲರಿಗೂ ಆತ್ಮೀಯ ಸ್ವಾಗತ ಬಯಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀ ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟಿಯವರಿಗೆ ಕಡಬದ್ವಯ ಸಂಸ್ಮರಣಾ ಯಕ್ಷಗಾನ ಪ್ರಶಸ್ತಿ – 2023 | ಅಕ್ಟೋಬರ್ 29ರಂದು
    Next Article ನಾಟ್ಯ ಪರಂಪರ ದಶಮಾನೋತ್ಸವ -2023 | ಅಕ್ಟೋಬರ್ 28
    roovari

    Add Comment Cancel Reply


    Related Posts

    ವಿಶೇಷ ಲೇಖನ – ವೀಣಾ ವಾದನ ಗಂಧರ್ವ ಆರ್. ಕೆ. ಸೂರ್ಯನಾರಾಯಣ

    June 14, 2025

    ಬೆಂಗಳೂರಿನಲ್ಲಿ ರಾಜ್ಯಮಟ್ಟದ ‘ಕನ್ನಡ ಜಾನಪದ ಸಮ್ಮೇಳನ’ದಲ್ಲಿ ಜಾನಪದ ಸ್ಪರ್ಧೆ | ಕೊನೆಯ ದಿನಾಂಕ ಜೂನ್ 25

    June 14, 2025

    ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಯಕ್ಷಗಾನ ಸಪ್ತಾಹ ಹಾಗೂ ಅಷ್ಟಾವಧಾನ | ಜೂನ್ 15 ರಿಂದ 21

    June 14, 2025

    ಮುಂಬೈಯ ಪ್ರಥ್ವಿ ಥಿಯೇಟರ್ ನಲ್ಲಿ ‘ಉದಯಸ್ವರ’ ಸಂಗೀತ ಕಛೇರಿ | ಜೂನ್ 15

    June 14, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.