ಬೆಂಗಳೂರು : ಒಡನಾಡಿ ಬಂಧು ಸಿ.ಜಿ.ಕೆ. -75 ಮಾಸದ ನೆನಪು ಸರಣಿ ಕಾರ್ಯಕ್ರಮ -13ದಲ್ಲಿ ವಿಜಯನಗರ ಬಿಂಬ (ರಿ.) ಅರ್ಪಿಸುವ ಮೊಲಿಯೇರ್ ನ ‘ಬೂರ್ಷ್ವ ದಿ ಜೆಂಟಿಲ್ಹೋಮ್ಮೀ’ ನಾಟಕದ ರೂಪಾಂತರ ‘ಶತಮರ್ಕಟ’ ನಾಟಕ ಪ್ರದರ್ಶನವನ್ನು ದಿನಾಂಕ 21 ಮೇ 2026ರಂದು ಸಂಜೆ 6-30 ಗಂಟೆಗೆ ಬೆಂಗಳೂರಿನ ಜೆ.ಸಿ. ರಸ್ತೆಯಲ್ಲಿರುವ ನಯನ ರಂಗಮಂದಿರದಲ್ಲಿ ಆಯೋಜಿಸಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಪ್ರದರ್ಶನಗೊಳ್ಳುವ ಈ ನಾಟಕವನ್ನು ಡಾ. ಎಸ್.ವಿ. ಕಶ್ಯಪ್ ಇವರು ರಚನೆ ಮತ್ತು ನಿರ್ದೇಶನ ಮಾಡಿರುತ್ತಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಡಾ. ಎಲ್.ಎನ್. ಮುಕುಂದ್ ರಾಜ್ ಇವರು ಸಿ.ಜಿ.ಕೆ. ಇವರೊಂದಿಗಿನ ಒಡನಾಟದ ನೆನಪು ಹಂಚಿಕೊಳ್ಳಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 98452 65967, 98441 52967, 98457 34967, 98800 33018 ಮತ್ತು 98440 17881 ಸಂಖ್ಯೆಯನ್ನು ಸಂಪರ್ಕಿಸಿರಿ.

