ಕಾರ್ಕಳ: ಇಲ್ಲಿನ ಕಲ್ಲೊಟ್ಟೆ ನಿವಾಸಿ ಹೆಸರಾಂತ ಶಿಲ್ಪಿ ಶೇಷಪ್ಪ ಆಚಾರ್ಯ ಅಲ್ಪ ಕಾಲದ ಅಸೌಖ್ಯದಿಂದಾಗಿ 12 ಜೂನ್ 2025 ರಂದು ರಾತ್ರಿ ನಿಧನ ಹೊಂದಿದರು. ಅವರಿಗೆ 68ವರ್ಷ ವಯಸ್ಸಾಗಿತ್ತು.
ಅನೇಕ ದೇವಾಲಯಗಳನ್ನು ಹಾಗೂ ವಿಗ್ರಹಗಳನ್ನು ನಿರ್ಮಿಸಿರುವ ಇವರು ಮಂಗಳೂರು ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಶ್ರೀ ಕಾಳಿಕಾಂಬೆಯ ಶಿಲಾಮಯ ಗರ್ಭ ಗುಡಿಯ ನಿರ್ಮಾಣ ಮಾಡಿದ್ದರು. ಶಿಲ್ಪ ಕ್ಷೇತ್ರದಲ್ಲಿ ಇವರು ಸಲ್ಲಿಸಿದ ಗಣನೀಯ ಸೇವೆಗೆ ಅನೇಕ ದೇವಸ್ಥಾನ, ಸಂಘ ಸಂಸ್ಥೆಯವರು ಇವರನ್ನು ಸನ್ಮಾನಿಸಿದ್ದರು. ಪತ್ನಿ, ಓರ್ವ ಪುತ್ರಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುತ್ತಾರೆ.
Subscribe to Updates
Get the latest creative news from FooBar about art, design and business.
Previous Articleಶ್ರೀನಿವಾಸ್ ನಾಯಕ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ವಿವೇಕ ವಾಣಿ -46 ಕಾರ್ಯಕ್ರಮ
Next Article ಲೋಕಾರ್ಪಣೆಗೊಂಡ ‘ಬ್ಯಾರಿ ಬಾಸೆ ಪಡಿಕೋರು’ ಕೃತಿ