ಮಂಗಳೂರು : ಸಂಗೀತ ಪರಿಷತ್ ಮಂಗಳೂರು ಇದರ ವತಿಯಿಂದ ಭಾರತೀಯ ವಿದ್ಯಾಭವನ ಮಂಗಳೂರು ಮತ್ತು ರಾಮಕೃಷ್ಣ ಮಠ ಮಂಗಳೂರು ಇವುಗಳ ಸಹಯೋಗದೊಂದಿಗೆ ಹಾಗೂ ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ಪ್ರಸ್ತುತ ಪಡಿಸುವ ‘ಶ್ರಾವಣ ಸಂಗೀತೋತ್ಸವ 2026’ವನ್ನು ದಿನಾಂಕ 22 ಮತ್ತು 23 ಆಗಸ್ಟ್ 2026ರಂದು ಮಂಗಳೂರಿನ ಮಂಗಳಾದೇವಿಯಲ್ಲಿರುವ ರಾಮಕೃಷ್ಣ ಮಠದ ಅಮೃತ ಭವನದಲ್ಲಿ ಆಯೋಜಿಸಲಾಗಿದೆ.
ದಿನಾಂಕ 22 ಆಗಸ್ಟ್ 2026ರಂದು ಮಧ್ಯಾಹ್ನ 3-30 ಗಂಟೆಗೆ ವಾರ್ಷಿಕ ಮಹಾಸಭೆ ನಡೆಯಲಿದೆ. ಸಂಜೆ 5-00 ಗಂಟೆಗೆ ಬೆಂಗಳೂರಿನ ಶ್ರೀಮತಿ ಉಷಾ ರಾಮಕೃಷ್ಣ ಇವರ ಹಾಡುಗಾರಿಕೆಗೆ ಬೆಂಗಳೂರಿನ ಕುಮಾರಿ ಸಿ.ವಿ. ಶ್ರುತಿ ವಯೋಲಿನ್, ಮೈಸೂರಿನ ಎ. ರಾಧೇಶ್ ಇವರು ಮೃದಂಗದಲ್ಲಿ ಮತ್ತು ಹರಿಹರಪುರದ ಚಿ. ಧೀಮಂತ್ ಭಟ್ಟ ಘಟಂನಲ್ಲಿ ಸಹಕರಿಸಲಿದ್ದಾರೆ.
ದಿನಾಂಕ 23 ಆಗಸ್ಟ್ 2026ರಂದು ಮಧ್ಯಾಹ್ನ 3-00 ಗಂಟೆಗೆ ಮಂಗಳೂರಿನ ಕುಮಾರಿ ಸುಧೀಕ್ಷಾ ಆರ್. ಇವರ ಹಾಡುಗಾರಿಕೆಗೆ ಮಂಗಳೂರಿನ ಕುಮಾರಿ ಧನಶ್ರೀ ಶಬರಾಯ ಇವರು ಮಯಲಿನ್ ಮತ್ತು ಮಂಗಳೂರಿನ ಅವಿನಾಶ್ ಬೆಳ್ಳಾರೆ ಇವರು ಮೃದಂಗದಲ್ಲಿ ಸಾಥ್ ನೀಡಲಿದ್ದಾರೆ. ಸಂಜೆ 5-00 ಗಂಟೆಗೆ ಬೆಂಗಳೂರಿನ ಕುಮಾರಿ ಅದಿತಿ ಬಿ. ಪ್ರಹ್ಲಾದ್ ಇವರ ಹಾಡುಗಾರಿಕೆಗೆ ಬೆಂಗಳೂರಿನ ಕುಮಾರಿ ಸಿ.ವಿ. ಶ್ರುತಿ ವಯೋಲಿನ್, ಮೈಸೂರಿನ ಎ. ರಾಧೇಶ್ ಇವರು ಮೃದಂಗದಲ್ಲಿ ಮತ್ತು ಪುತ್ತೂರಿನ ಬಾಲಕೃಷ್ಣ ಹೊಸಮನೆ ಇವರು ಮೋರ್ಸಿಂಗ್ ನಲ್ಲಿ ಸಹಕರಿಸಲಿದ್ದಾರೆ.

