Subscribe to Updates

    Get the latest creative news from FooBar about art, design and business.

    What's Hot

    ‘ದಾಸವಾಣಿ’ ಹವಲ್ದಾರ್ ತಂಡದವರಿಂದ ದಾಸರ ಕೃತಿಗಳ ಅಮೋಘ ಗಾಯನ ಕಾರ್ಯಕ್ರಮ | ಜೂನ್ 01

    May 31, 2025

    ನಟನ ರಂಗಶಾಲೆಯಲ್ಲಿ ಮಕ್ಕಳ ‘ಅಭಿನಯ ಮತ್ತು ರಂಗ ತರಬೇತಿ’ | ಜೂನ್ 08

    May 31, 2025

    ಶಿರಸಿಯ ರಂಗಧಾಮದಲ್ಲಿ ಸನ್ಮಾನ, ಪ್ರತಿಭಾ ಪುರಸ್ಕಾರ ಮತ್ತು ಯಕ್ಷಗಾನ ಪ್ರದರ್ಶನ | ಜೂನ್ 01

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home »  ಕಲ್ಕೂರ ಪ್ರತಿಷ್ಠಾನದಿಂದ ಹಿರಿಯ ಸಾಹಿತಿ ಶ್ರೀಮತಿ ಮನೋರಮಾ ಎಂ. ಭಟ್ ಇವರಿಗೆ ನುಡಿನಮನ
    Uncategorized

     ಕಲ್ಕೂರ ಪ್ರತಿಷ್ಠಾನದಿಂದ ಹಿರಿಯ ಸಾಹಿತಿ ಶ್ರೀಮತಿ ಮನೋರಮಾ ಎಂ. ಭಟ್ ಇವರಿಗೆ ನುಡಿನಮನ

    September 24, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಮಂಗಳೂರಿನ ಕಲ್ಕೂರ ಪ್ರತಿಷ್ಠಾನದ ವತಿಯಿಂದ ಇತ್ತೀಚೆಗೆ ನಿಧನರಾದ ಹಿರಿಯ ಸಾಹಿತಿ ಶ್ರೀಮತಿ ಮನೋರಮಾ ಎಂ. ಭಟ್ ಇವರಿಗೆ ನುಡಿನಮನ ಕಾರ್ಯಕ್ರಮವು ದಿನಾಂಕ 23 ಸೆಪ್ಟೆಂಬರ್ 2024ರಂದು ಮಂಗಳೂರಿನ ಕಲ್ಕೂರ ಪ್ರತಿಷ್ಠಾನದ ಕಚೇರಿಯಲ್ಲಿ ನಡೆಯಿತು.

    ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷರಾದ ಎಸ್. ಪ್ರದೀಪ ಕುಮಾರ ಕಲ್ಕೂರ “ಅರ್ಥಧಾರಿ ಹಾಗೂ ಖ್ಯಾತ ವಕೀಲರಾದ ದಿ. ಮಹಾಬಲ ಭಟ್ಟರ ಪತ್ನಿ ಹಿರಿಯ ಸಾಹಿತಿ ಶ್ರೀಮತಿ ಮನೋರಮಾ ಎಂ. ಭಟ್ ಅವರು ಸರಳ ಹಾಗೂ ಸುಂದರವಾದ ನಿರೂಪಣೆಯೊಂದಿಗೆ ಔಚಿತ್ಯಪೂರ್ಣ ಕಥೆಗಳನ್ನು ರಚಿಸುವ ಮೂಲಕ ಸಾಹಿತ್ಯ ರಂಗವನ್ನು ಪ್ರವೇಶಿಸಿ ಓರ್ವ ಪ್ರಸಿದ್ದ ಮಹಿಳಾ ಸಾಹಿತಿಯಾಗಿ ಪ್ರಸಿದ್ದರಾಗಿದ್ದರು. ಪತಿಯ ಅಗಲಿಕೆಯ ಬಳಿಕ ಏಕಾಂಗಿ ಜೀವನವನ್ನು ನಿರ್ವಹಿಸಿ ಕೊನೆ ದಿನಗಳಲ್ಲಿ ಆಶ್ರಮವಾಸಿಯಾಗಿದ್ದರು. ‘ಹೊಸಹಾದಿ’, ‘ನಿರ್ಧಾರ’ ಇತ್ಯಾದಿ ಅನೇಕ ಉತ್ತಮವಾದ ಕೃತಿಗಳನ್ನು ರಚಿಸಿ ಹೆಸರು ಗಳಿಸಿದ್ದರು. ತಾಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸಹಿತ ಅನೇಕ ಪ್ರಶಸ್ತಿ ಪುರಸ್ಕಾರಗಳಿಗೆ ಭಾಜನರಾಗಿರುವುದನ್ನು ಕಲ್ಕೂರ ಸ್ಮರಿಸಿದರು. ಅಗ್ರಮಾನ್ಯ ಸಾಹಿತಿ ದಿ. ಮುಳಿಯ ತಿಮ್ಮಪ್ಪಯ್ಯ ಶತಮಾನೋತ್ಸವ ಪ್ರಶಸ್ತಿ ಮಂಡಳಿಯ ವರಿಷ್ಠರಾಗಿ ಎರಡು ದಶಕಗಳ ಕಾಲ ಸಾಹಿತ್ಯ ರಂಗದ ಸಾಧಕರನೇಕರಿಗೆ ಪ್ರಶಸ್ತಿ ನೀಡಿ ಗೌರವಿಸಿರುವ ಹೆಮ್ಮೆ ಇವರದಾಗಿದೆ.” ಎಂದರು.

    ಶ್ರದ್ಧಾಂಜಲಿ ಸಭೆಯಲ್ಲಿ ಗಣ್ಯರನೇಕರು ಉಪಸ್ಥಿತರಿದ್ದು ದಿವಂಗತರಿಗೆ ನುಡಿ ನಮನ ಸಲ್ಲಿಸಿದರು. ಕನ್ನಡ ಸಾಹಿತ್ಯ ಪರಿಷತ್ ಇದರ ಮಾಜಿ ರಾಜ್ಯಾಧ್ಯಕ್ಷ ಡಾ. ಹರಿಕೃಷ್ಣ ಪುನರೂರು, ಪ್ರೊ. ಜಿ. ಕೆ. ಭಟ್ ಸೇರಾಜೆ, ಹಿರಿಯ ಯಕ್ಷಗಾನ ಪ್ರಸಂಗ ಕರ್ತ ಪೊಳಲಿ ನಿತ್ಯಾನಂದ ಕಾರಂತ, ಗಣೇಶ್ ಚೇತನ್ ಮುಳಿಯ, ಕವಿ ಮಹಮದ್ ಬಡ್ಡೂರು, ಹೆಚ್. ಜನಾರ್ದನ ಹಂದೆ, ನಿವೃತ್ತ ಅಧ್ಯಾಪಕಿ ಶ್ರೀಮತಿ ರತ್ನಾವತಿ ಬೈಕಾಡಿ, ಸಾಮಾಜಿಕ ಕಾರ್ಯಕರ್ತೆ ವಿಜಯಲಕ್ಷ್ಮೀ ಬಿ. ಶೆಟ್ಟಿ, ಸುಧಾಕರ ರಾವ್ ಪೇಜಾವರ ಮೊದಲಾದವರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಪುಸ್ತಕ ಬಹುಮಾನಕ್ಕಾಗಿ ಲಲಿತಕಲಾ ಅಕಾಡೆಮಿಯಿಂದ ಕೃತಿಗಳ ಆಹ್ವಾನ
    Next Article ಮೂಡುಬಿದಿರೆಯ ಸಮಾಜಮಂದಿರ ಸಭಾದಲ್ಲಿ ಡಾ. ನಾ. ಮೊಗಸಾಲೆಯವರಿಗೆ 80ರ ಅಭಿನಂದನಾ ಸಮಾರಂಭ
    roovari

    Comments are closed.

    Related Posts

    ಸಂಭ್ರಮದಿಂದ ನಡೆದ ‘ಸಮರ್ಪಣಂ ಕಲೋತ್ಸವ – 2025’

    April 4, 2025

    ಸುಲೋಚನಾ ಪಿ. ಕೆ. ಇವರ ‘ಸತ್ಯದರ್ಶನ’ ಕೃತಿಗೆ ‘ಜಿ. ಪಿ. ರಾಜರತ್ನಂ ಸಂಸ್ಮರಣ ದತ್ತಿ ಪ್ರಶಸ್ತಿ’

    March 22, 2025

    ಜಾಗೃತಿ ಟ್ರಸ್ಟ್ ವತಿಯಿಂದ ‘ಯೋಗಪಥ’ ಕಾದಂಬರಿ ಲೋಕಾರ್ಪಣೆ ಮತ್ತು ಡಾ. ರಾಜಕುಮಾರ್ ಪ್ರಶಸ್ತಿ ಪ್ರದಾನ | ಫೆಬ್ರವರಿ 25

    February 22, 2025

    ಬೆಂಗಳೂರಿನ ಬಿ.ಎಂ.ಶ್ರೀ ಕಲಾಭವನದಲ್ಲಿ ‘ವಾಣಿ ಸ್ಮರಣೆ’ ಒಂದು ಸ್ಮರಣೀಯ ಕಾರ್ಯಕ್ರಮ | ಫೆಬ್ರವರಿ 25

    February 21, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.