ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಮುಖ್ಯ ದತ್ತಿ ಪ್ರಶಸ್ತಿಗಳಲ್ಲೊಂದಾದ ‘ಶ್ರೀಮತಿ ಲಿಂಗಮ್ಮ ಮತ್ತು ಡಾ.ಚಿಕ್ಕಕೊಮಾರಿಗೌಡ ಹಾರೋಕೊಪ್ಪ’ ಪುರಸ್ಕಾರದ ಪ್ರದಾನ ಸಮಾರಂಭ ದಿನಾಂಕ 23 ಜೂನ್ 2025 ರಂದು ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಎಲೆರಾಂಪುರದ ಕುಂಚಿಟಿಗರ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ.ಹನುಮಂತನಾಥ ಮಹಾಸ್ವಾಮಿಗಳು ಮಾತನಾಡಿ “ಕನ್ನಡ ಸಾಹಿತ್ಯ ಪರಿಷತ್ತು ಪ್ರಶಸ್ತಿಗಳ ಗೌರವವನ್ನು ಉಳಿಸುವ ಮಹತ್ತರ ಕಾರ್ಯವನ್ನು ಮಾಡುತ್ತಿದೆ. ಅಕ್ಷರ ಸಂಸ್ಕೃತಿಯಂತೆಯೇ ನೆಲೆ ಜಲ ಸಂಸ್ಕೃತಿಯನ್ನೂ ಉಳಿಸುವ ಮಹತ್ವದ ಕೆಲಸವನ್ನು ಮಾಡುತ್ತಿದೆ” ಎಂದರು.
ಇದೇ ಸಂದರ್ಭದಲ್ಲಿ 48ನೆಯ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಡಾ. ಜಯದೇವಿತಾಯಿ ಲಿಗಾಡೆಯವರ 113ನೆಯ ಮತ್ತು 86ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ವಹಿಸಿದ್ದ ಡಾ.ಎಚ್.ಎಸ್.ವೆಂಕಟೇಶ ಮೂರ್ತಿಯವರ 81ನೆಯ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ನುಡಿ ನಮನವನ್ನು ಸಲ್ಲಿಸಲಾಯಿತು. ಈ ಇಬ್ಬರೂ ಮಹನೀಯರಿಗೆ ನುಡಿನಮನ ಸಲ್ಲಿಸಿದ ನಾಡೋಜ ಡಾ.ಮಹೇಶ ಜೋಶಿಯವರು ಗಡಿಭಾಗದಲ್ಲಿ ಅದರಲ್ಲಿಯೂ ವಿಶೇಷವಾಗಿ ಬೆಳಗಾವಿ ಭಾಗದಲ್ಲಿ ಕನ್ನಡ ಕಹಳೆಯನ್ನು ಮೊಳಗಿಸಿದ ಡಾ.ಜಯದೇವಿ ತಾಯಿ ಲಿಗಾಡೆ ಮತ್ತು ‘ಅಗ್ನಿಯಿಂದ ಎದ್ದ ಬೆಳಕಾಗಿ’ ಬದುಕಿನ ನೋವುಗಳನ್ನು ಹಾಡಾಗಿಸಿದ ಡಾ.ಎಚ್.ಎಸ್.ವೆಂಕಟೇಶ ಮೂರ್ತಿಯವರ ಸಾಂಸ್ಕೃತಿಯ ಮಹತ್ವವನ್ನು ನೆನಪು ಮಾಡಿ ಕೊಂಡರು.
ಸಾಹಿತ್ಯ ಪರಿಷತ್ತಿನ ಕೋಶಾಧ್ಯಕ್ಷರಾದ ಬಿ. ಎಂ. ಪಟೇಲ್ ಪಾಂಡು ಅವರು ಕಾರ್ಯಕ್ರಮವನ್ನು ನಿರೂಪಿಸಿದರೆ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ ಅವರು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಿಬ್ಬಂದಿಗಳು , ಕನ್ನಡ ಪ್ರೇಮಿಗಳು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
Subscribe to Updates
Get the latest creative news from FooBar about art, design and business.
Previous Articleಖಿದ್ಮಾ ರಾಜ್ಯಮಟ್ಟದ ಭಾಷಣ ಸ್ಪರ್ಧೆ | ಜೂನ್ 30