Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಗೋಪಾಡಿಯಲ್ಲಿ ಯಶಸ್ವೀ ಕಲಾವೃಂದದ ‘ಸಿನ್ಸ್ 1999 ಶ್ವೇತಯಾನ’ದಲ್ಲಿ ‘7ನೇ ಅರ್ಥಾಂಕುರ’ ಕಾರ್ಯಕ್ರಮ
    Yakshagana

    ಗೋಪಾಡಿಯಲ್ಲಿ ಯಶಸ್ವೀ ಕಲಾವೃಂದದ ‘ಸಿನ್ಸ್ 1999 ಶ್ವೇತಯಾನ’ದಲ್ಲಿ ‘7ನೇ ಅರ್ಥಾಂಕುರ’ ಕಾರ್ಯಕ್ರಮ

    March 5, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಗೋಪಾಡಿ : ಯಶಸ್ವೀ ಕಲಾವೃಂದದ ‘ಸಿನ್ಸ್ 1999 ಶ್ವೇತಯಾನ’ ಕಾರ್ಯಕ್ರಮದಲ್ಲಿ ‘7ನೇ ಅರ್ಥಾಂಕುರ’ ಹೊಸ ಅರ್ಥಧಾರಿಗಳ ಪರಿಶೋಧ ಕಾರ್ಯಕ್ರಮವು ದಿನಾಂಕ 03-03-2024ರಂದು ಗೋಪಾಡಿಯ ಶ್ರೀ ಬೊಬ್ಬರ್ಯ ದೈವಸ್ಥಾನದಲ್ಲಿ ನಡೆಯಿತು.

    ಕಾರ್ಯಕ್ರಮದಲ್ಲಿ ಪ್ರಾಯೋಜಕರಾದ ಚಂದ್ರಶೇಖರ ಇವರನ್ನು ಅಭಿನಂದಿಸಿ ಮಾತನ್ನಾಡಿದ ಯಕ್ಷಗುರು ಕೃಷ್ಣಮೂರ್ತಿ ಉರಾಳ “ಮುಂದಿನ ತಲೆಮಾರಿಗೆ ಹಾಗೂ ಯಕ್ಷಗಾನ ತಾಳಮದ್ದಳೆಗೆ ಅರ್ಥಧಾರಿಗಳನ್ನು ತಯಾರಿ ಮಾಡುವ ಮತ್ತು ಇತರ ಹಲವಾರು ವಿಭಾಗದ ಕಲಾ ಚಟುವಟಿಕೆಯನ್ನು ನೆರವೇರಿಸುತ್ತಾ ಬಂದ ಸಂಸ್ಥೆಯ ಕಾರ್ಯಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಗೋಪಾಡಿಯ ಗಂಗಾ ಪ್ರೊಡೆಕ್ಟ್ ಮಾಲಕರಾದ ಚಂದ್ರಶೇಖರ್ ಪ್ರಾಯೋಜಕತ್ವವನ್ನು ನಿರ್ವಹಿಸಿಕೊಂಡು ಕಲಾಸಕ್ತಿಯನ್ನು ಮೆರೆದಿದ್ದಾರೆ. ಇವರ ಕಲಾವಂತಿಕೆಯ ಪ್ರೇಕ್ಷಕನಾಗಿ, ಪ್ರೋತ್ಸಾಹಕನಾಗಿ ಮನಮೆಚ್ಚಿ ಹೃದಯದಿಂದ ಕೊಟ್ಟ ಕೊಡುಗೆ ನಿಜಕ್ಕೂ ಶ್ಲಾಘನೀಯ.” ಎಂದರು.

    ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ಉಪನ್ಯಾಸಕ ಸುಜಯೀಂದ್ರ ಹಂದೆ ಮಾತನಾಡಿ “ಉದ್ಘಾಟನೆಯ ಕಾರ್ಯಕ್ರಮಗಳು ದಾಖಲೆಯ ಕಾರ್ಯಕ್ರಮವಾದವು. ರಾಜಕೀಯ ನೇತಾರರು, ವೈದ್ಯರುಗಳು, ಉದ್ಯಮಿಗಳು ಎಲ್ಲರೂ ಪ್ರಥಮವಾಗಿ ರಂಗದಲ್ಲಿ ಅಭಿನಯಿಸಿದ ಹಿರಿಮೆ ಸಂಸ್ಥೆಯದ್ದು. ವಿವಿಧ ಕಲಾ ಪ್ರಕಾರಗಳ ತರಗತಿಗಳನ್ನು ನಡೆಸುತ್ತಾ ಸಾಗಿ ಬಂದ ಸಂಸ್ಥೆ 25ನೇ ವರ್ಷಕ್ಕೆ ಹೊಸ ಭಾಷ್ಯ ಬರೆಯಲು ಹೊರಟಿದೆ. ಇದಕ್ಕೆ ಕಲಾ ವಲಯದ ಸಹಕಾರ ಈ ಸಂದರ್ಭದಲ್ಲಿ ಅತ್ಯಂತ ಅಗತ್ಯ.” ಎಂದು ಅಭಿಪ್ರಾಯಪಟ್ಟರು.

    ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಕೋಟ ಸುದರ್ಶನ ಉರಾಳ, ಉಪನ್ಯಾಸಕ ಅರ್ಥಧಾರಿ ರಾಘವೇಂದ್ರ ತುಂಗ, ಪ್ರಶಾಂತ್ ಆಚಾರ್ ಕೆಳಕಳಿ, ಕಾರ್ಯದರ್ಶಿ ವೆಂಕಟೇಶ ವೈದ್ಯ ಉಪಸ್ಥಿತರಿದ್ದರು. ಬಳಿಕ ಹೊಸ ಅರ್ಥಧಾರಿಗಳ ಪರಿಶೋಧ ಕಾರ್ಯಕ್ರಮದಲ್ಲಿ ‘ಜಾಂಬವತಿ ಕಲ್ಯಾಣ’ ಕಥಾನಕ ತಾಳಮದ್ದಳೆಗಳ ರೂಪದಲ್ಲಿ ರಂಗದಲ್ಲಿ ಪ್ರಸ್ತುತಿಗೊಂಡಿತು.

    Share. Facebook Twitter Pinterest LinkedIn Tumblr WhatsApp Email
    Previous Articleಅಂತರ್ ವಿ.ವಿ ಯುವಜನೋತ್ಸವ ರಂಗಭೂಮಿ ಸ್ಪರ್ಧೆಯಲ್ಲಿ ಮಂಗಳೂರು ವಿ.ವಿ.ಗೆ ಸಮಗ್ರ ಪ್ರಶಸ್ತಿ
    Next Article ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಾಜಗೋಪುರದಲ್ಲಿ ತಾಳಮದ್ದಳೆ
    roovari

    Add Comment Cancel Reply


    Related Posts

    ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಾಜಗೋಪುರದಲ್ಲಿ ತಾಳಮದ್ದಳೆ

    May 7, 2025

    ಕೀರಿಕ್ಕಾಡು ಸ್ಮಾರಕ ಸಭಾಭವನದಲ್ಲಿ ಪಾರ್ತಿಸುಬ್ಬ ವಿರಚಿತ ‘ಪಂಚವಟಿ’ ಯಕ್ಷಗಾನ ತಾಳಮದ್ದಳೆ

    May 7, 2025

    ಕನ್ನರ್ಪಾಡಿಯಲ್ಲಿ ನೂತನ ‘ಶ್ರೀ ಜಯದುರ್ಗಾ ಪರಮೇಶ್ವರಿ ಯಕ್ಷಗಾನ ಕಲಾಮಂಡಳಿ’ ಉದ್ಘಾಟನೆ

    May 6, 2025

    ಪರಿಚಯ ಲೇಖನ | ‘ಬೆಳೆಯುವ ಯಕ್ಷಸಿರಿ’ ಸಚಿನ್ ಶೆಟ್ಟಿ ನಾಗರಕೊಡಿಗೆ

    May 6, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.