Subscribe to Updates

    Get the latest creative news from FooBar about art, design and business.

    What's Hot

    ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಶ್ರೀಮತಿ ಜಲಜಾ ಶೇಖರ್ ಆಯ್ಕೆ

    January 13, 2026

    ಪುಸ್ತಕ ವಿಮರ್ಶೆ | ಮಾಲತಿ ಪಟ್ಟಣಶೆಟ್ಟಿಯವರ ‘ಹೂ ದಂಡಿ’

    January 13, 2026

    ‘ಶ್ರೀಮತಿ ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಜನವರಿ 25

    January 13, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಯಶಸ್ವೀ ಕಲಾವೃಂದದ ‘ಸಿನ್ಸ್ 1999 ಶ್ವೇತಯಾನ’ದ ಶ್ವೇತ ಸಂಜೆ -2
    Yakshagana

    ಯಶಸ್ವೀ ಕಲಾವೃಂದದ ‘ಸಿನ್ಸ್ 1999 ಶ್ವೇತಯಾನ’ದ ಶ್ವೇತ ಸಂಜೆ -2

    February 28, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ತೆಕ್ಕಟ್ಟೆ : ಧಮನಿ ಹಾಗೂ ದಿಮ್ಸಾಲ್ ಸಂಸ್ಥೆಯ ಸಹಕಾರದೊಂದಿಗೆ ತೆಕ್ಕಟ್ಟೆ ಕೊಮೆಯ ಯಶಸ್ವೀ ಕಲಾವೃಂದದ “ಸಿನ್ಸ್ 1999 ಶ್ವೇತಯಾನ”ದ ಶ್ವೇತ ಸಂಜೆ-2ರ ಕಾರ್ಯಕ್ರಮವು ಕೊಮೆಯ ಹೆಗ್ಡೆಕೆರೆ ಬೊಬ್ಬರ್ಯ ದೈವಸ್ಥಾನದಲ್ಲಿ ದಿನಾಂಕ 24-02-2024ರಂದು ನಡೆಯಿತು.

    ಈ ಕಾರ್ಯಕ್ರಮದಲ್ಲಿ ಡಯೆಟ್ ಉಡುಪಿಯ ಹಿರಿಯ ಉಪನ್ಯಾಸಕರಾದ ಶ್ರೀ ಯೋಗ ನರಸಿಂಹಸ್ವಾಮಿ ಇವರು ರಸರಂಗ ಕೋಟ ಸಂಸ್ಥೆಯ ಕಲಾವಿದರನ್ನು ಗೌರವಿಸಿ ಸಭೆಯನ್ನುದ್ದೇಶಿಸಿ ಮಾತನ್ನಾಡುತ್ತಾ “ಶಿಕ್ಷಣವೆನ್ನುವುದು ಪ್ರತಿಯೊಬ್ಬರ ಹಕ್ಕು. ಸಂಪೂರ್ಣ ಸಾಕ್ಷರತೆಯ ಉದ್ದೇಶವಾಗಿರಿಸಿಕೊಂಡು ಸರಕಾರ ಸಾರುತ್ತಿರುವ ಶಿಕ್ಷಣದೊಳಗಿನ ಸಾರ ಎಲ್ಲರನ್ನೂ ತಲುಪಬೇಕೆಂದಾದರೆ ಸಾರ್ವತ್ರಿಕವಾದ ಶ್ರಮ ಬೇಕಾಗುತ್ತದೆ. ನವಭಾರತ ಆಯೋಜಿಸಲ್ಪಟ್ಟಿದ್ದ ನವಭಾರತ ಸಾಕ್ಷರತಾ ಕಾರ್ಯಕ್ರಮವನ್ನು ಎಲ್ಲರೂ ಯಶಸ್ವಿಗೊಳಿಸಬೇಕು” ಎಂದು ಹೇಳಿದರು.

    25ನೇ ರಜತ ಸಂಭ್ರಮವನ್ನು ಆಚರಿಸಿಕೊಂಡ ಸಂಸ್ಥೆಯ ವಾರಾಂತ್ಯದ ಕಾರ್ಯಕ್ರಮವು ವಿಭಿನ್ನ ಕಲಾ ಪ್ರಕಾರದೊಂದಿಗೆ ಸಂಪನ್ನಗೊಳ್ಳುವುದರೊಂದಿಗೆ ವಿವಿಧ ಕಲಾವಿದರ ಕಾರ್ಯಕ್ರಮವು ಸಂಸ್ಥೆಯ ವೇದಿಕೆಯಲ್ಲಿ ವಿಭಿನ್ನ ಪರಿಕಲ್ಪನೆಯಲ್ಲಿ ಪ್ರಸ್ತುತಿಗೊಳ್ಳಲಿದೆ ಎಂದು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಗಣಪತಿ ಟಿ. ಶ್ರೀಯಾನ್ ಹೇಳಿದರು.

    ಸಿನ್ಸ್ 1999 ಶ್ವೇತಯಾನ ಕಾರ್ಯಾಧ್ಯಕ್ಷ ಸುಜಯ್ ಶೆಟ್ಟಿ ಹಾಗೂ ಗೋಪಾಲ ಪೂಜಾರಿ ಕೊಮೆ, ಪ್ರಾಚಾರ್ಯ ದೇವದಾಸ್ ರಾವ್ ಕೂಡ್ಲಿ, ಗೋಪಾಲ ಪೂಜಾರಿ ಕುಂದಾಪುರ, ಸುಧಾ ಮಣೂರು, ಪ್ರಿಯಾ, ಮೇಘನಾ ಉಪಸ್ಥಿತರಿದ್ದರು. ಶಂಕರನಾರಾಯಣ ಉಪಾಧ್ಯಾಯ ಸ್ವಾಗತಿಸಿ, ಪಂಚಮಿ ವೈದ್ಯ ಧನ್ಯವಾದಗೈದರು. ಹೆರಿಯ ಮಾಸ್ಟರ್ ಕಾರ್ಯಕ್ರಮ ನಿರೂಪಣೆ ಮಾಡಿದರು. ಬಳಿಕ ರಸರಂಗ ಕೋಟ ಇವರಿಂದ ಅಗರಿ ಭಾಸ್ಕರ್ ರಾವ್ ವಿರಚಿತ ಯಕ್ಷಗಾನ ಪ್ರಸಂಗ “ರಾಣಿ ಅಪ್ರಮೇಯಿ” ರಂಗದಲ್ಲಿ ಪ್ರಸ್ತುತಿಗೊಂಡಿತು.

    Share. Facebook Twitter Pinterest LinkedIn Tumblr WhatsApp Email
    Previous Articleಬೆಳ್ತಂಗಡಿಯ ಪುತ್ರಬೈಲಿನಲ್ಲಿ ತಾಳಮದ್ದಳೆ
    Next Article ಜಿ. ಪಿ. ಐ. ಇ. ಆರ್.  ರಾಷ್ಟ್ರೀಯ ರಂಗೋತ್ಸವದ ಬಿತ್ತಿಪತ್ರ ಬಿಡುಗಡೆ
    roovari

    Add Comment Cancel Reply


    Related Posts

    ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ‘ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ’ದ ಸಮಾರೋಪ ಸಮಾರಂಭ

    January 12, 2026

    ಉಳಿಯ ಮನೆಯ ಸುಧಾ ಮಂದಿರದಲ್ಲಿ ವಾರದ ಕೂಟ ತಾಳಮದ್ದಳೆ

    January 12, 2026

    ಸಹ್ಯಾದ್ರಿ ಕಾಲೇಜಿನಲ್ಲಿ ಉದ್ಘಾಟನೆಗೊಂಡ ‘ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ 2025-26’

    January 12, 2026

    ಶ್ರೀ ಆಂಜನೇಯ ಮಂತ್ರಾಲಯದಲ್ಲಿ ಸಂಘದ ಪಾಕ್ಷಿಕ ತಾಳಮದ್ದಳೆ

    January 12, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.