Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಡಾ. ಕೆ. ಚಿನ್ನಪ್ಪ ಗೌಡ ಇವರ ‘ಸಿರಿಸಂಧಿ’ ಕೃತಿ ಬಿಡುಗಡೆ | ಫೆಬ್ರವರಿ 10
    Book Release

    ಡಾ. ಕೆ. ಚಿನ್ನಪ್ಪ ಗೌಡ ಇವರ ‘ಸಿರಿಸಂಧಿ’ ಕೃತಿ ಬಿಡುಗಡೆ | ಫೆಬ್ರವರಿ 10

    February 9, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಉಡುಪಿಯ ಎಂ.ಜಿ.ಎಂ. ಕಾಲೇಜಿನ ಆವರಣದಲ್ಲಿರುವ ಪ್ರಾದೇಶಿಕ ಜಾನಪದ ರಂಗಕಲೆಗಳ ಅಧ್ಯಯನ ಕೇಂದ್ರ (ಮಾಹೆ) ಹಾಗೂ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಇವರ ಸಹಯೋಗದಲ್ಲಿ ‘ಸಿರಿಸಂಧಿ’ ಕೃತಿ ಬಿಡುಗಡೆ ಕಾರ್ಯಕ್ರಮವು ದಿನಾಂಕ 10-02-2024ರಂದು ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ. ಜನಪದ ಗಾಯಕ ಮಾಚಾರು ಗೋಪಾಲ ನಾಯ್ಕ ಹೇಳಿದ ತುಳು ಸಿರಿಕಾವ್ಯವನ್ನು ಪುಸ್ತಕ ರೂಪಕ್ಕಿಳಿಸಿದ ನಿವೃತ್ತ ಕುಲಪತಿ ಡಾ. ಕೆ. ಚಿನ್ನಪ್ಪ ಗೌಡ ಇವರು ಈ ಕೃತಿಯ ಲೇಖಕರಾಗಿದ್ದಾರೆ.

    ಉಡುಪಿಯ ಎಂ.ಜಿ.ಎಂ. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಲಕ್ಷ್ಮೀ ನಾರಾಯಣ ಕಾರಂತ ಇವರ ಉಪಸ್ಥಿತಿಯಲ್ಲಿ ಸಹ ಕುಲಾಧಿಪತಿಗಳಾದ ಡಾ. ಎಚ್.ಎಸ್. ಬಲ್ಲಾಳ್ ಇವರು ಕೃತಿ ಅನಾವರಣ ಮಾಡಲಿದ್ದಾರೆ. ವಿಮರ್ಶಕರಾದ ಡಾ. ಬಿ. ಜನಾರ್ದನ ಭಟ್ ಕೃತಿ ವಿಮರ್ಶೆ ಮಾಡಲಿದ್ದು, ಪ್ರಾದೇಶಿಕ ಜಾನಪದ ರಂಗಕಲೆಗಳ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಡಾ. ಬಿ.ಎ. ವಿವೇಕ ರೈ ಇವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವರು.

    ದಿವಂಗತ ಮಾಚಾರು ಗೋಪಾಲ ನಾಯ್ಕ ಅವರು ತುಳು ಸಿರಿಕಾವ್ಯವನ್ನು ಹಲವು ಸಂದರ್ಭಗಳಲ್ಲಿ ಹಾಡಿದ ಜನಪದ ಗಾಯಕ. ಅವರು ಮೌಖಿಕ ಪರಂಪರೆಯ ಹಲವು ಸಂಧಿ ಪಾಡ್ಡನ, ಕತೆ- ಕಬಿತೆಗಳ ಕಣಜ. ಸಿರಿ ಜಾತ್ರೆಯಲ್ಲಿ ಕುಮಾರನಾಗಿ ಹಲವು ದಶಕಗಳ ಕಾಲ ಸೇವೆ ಸಲ್ಲಿಸಿದ ಅವರು, ಸಿರಿ ತಂಡದ ಮಾರ್ಗದರ್ಶಕರಾಗಿದ್ದರು. ಅವರ ಸಿರಿಕಾವ್ಯದ ಮೂಲ ತುಳು ಪಠ್ಯವು ಇಂಗ್ಲೀಷ್ ಅನುವಾದ ಸಹಿತ ಎರಡು ಸಂಪುಟಗಳಲ್ಲಿ ಈಗಾಗಲೇ ಪ್ರಕಟವಾಗಿದೆ. ಈ ತುಳು ಪಠ್ಯವು ಕನ್ನಡ ಅನುವಾದ ಮತ್ತು ಪ್ರಸ್ತಾವನೆಯೊಂದಿಗೆ ಈಗ ಪ್ರಕಟವಾಗುತ್ತಿದೆ ಎಂದು ಕೃತಿಯ ಲೇಖಕ ಚಿನ್ನಪ್ಪ ಗೌಡ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನ ಕಲಾಸಕ್ತರಿಗೆ ನೃತ್ಯಾಂಗನ್ ಟ್ರಸ್ಟಿನಿಂದ ನೃತ್ಯ ರಸದೌತಣ
    Next Article ಉಪ್ಪಿನಕುದ್ರು ಗೊಂಬೆ ಮನೆಯಲ್ಲಿ ‘ವೈವಿಧ್ಯಮಯ ಕಾರ್ಯಕ್ರಮಗಳು’ | ಫೆಬ್ರವರಿ 11
    roovari

    Add Comment Cancel Reply


    Related Posts

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025

    ಖ್ಯಾತ ಸಾಹಿತಿ ಪ್ರೊ. ಜಿ.ಎಸ್. ಸಿದ್ಧಲಿಂಗಯ್ಯ ನಿಧನ

    May 8, 2025

    ಆಳ್ವಾಸ್‌ನ ಶಿವರಾಮ ಕಾರಂತ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ

    May 7, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.