Subscribe to Updates

    Get the latest creative news from FooBar about art, design and business.

    What's Hot

    ಜಯಲಕ್ಷ್ಮೀ ಎಸ್. ಜೋಕಟ್ಟೆಯವರ ‘ಕವಿತೆಗಳು’ ಕವನ ಸಂಕಲನ ಬಿಡುಗಡೆ

    January 7, 2026

    ಹಿರಿಯ ಯಕ್ಷಗಾನ ಭಾಗವತ ಕಡತೋಕಾ ಲಕ್ಷ್ಮೀನಾರಾಯಣ ನಿಧನ

    January 7, 2026

    ಸಂಭ್ರಮದಿಂದ ಸಂಪನ್ನಗೊಂಡ ಮಂಗಳೂರು ತಾಲೂಕು ‘ಬ್ಯಾರಿ ಸಾಹಿತ್ಯ ಸಮ್ಮೇಳನ’

    January 7, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಅಭಿನಯ ಕಲೆಯಿಂದ ಕೌಶಲ್ಯ ಅಭಿವೃದ್ಧಿ’ ರಂಗ ತರಬೇತಿ ಶಿಬಿರ
    Camp

    ‘ಅಭಿನಯ ಕಲೆಯಿಂದ ಕೌಶಲ್ಯ ಅಭಿವೃದ್ಧಿ’ ರಂಗ ತರಬೇತಿ ಶಿಬಿರ

    June 12, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಯಕ್ಷ ರಂಗಾಯಣ ಕಾರ್ಕಳ ವತಿಯಿಂದ ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ‘ಅಭಿನಯ ಕಲೆಯಿಂದ ಕೌಶಲ್ಯ ಅಭಿವೃದ್ಧಿ’ ಒಂದು ದಿನದ ರಂಗ ತರಬೇತಿ ಶಿಬಿರವು ಉಡುಪಿಯ ಅಜ್ಜರಕಾಡು ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪಿ.ಜಿ.ಎ.ವಿ. ಸಭಾಂಗಣದಲ್ಲಿ ದಿನಾಂಕ 05-06-2024ರಂದು ನಡೆಯಿತು.

    ಈ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ. ಜಿ. ಶಂಕ‌ರ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಭಾಸ್ಕರ್ ಶೆಟ್ಟಿ ಎಸ್. “ರಂಗ ಅಭಿನಯ, ಅಭಿನಯ ಕಲೆ, ರಂಗ ಕೌಶಲ್ಯಗಳಿಗೆ ನಿಕಟವಾದ ಸಂಬಂಧವಿದ್ದು, ಜಾಗತೀಕರಣ ಮತ್ತು ಜಾಗತೀಕರಣೋತ್ತರ ಸಂದರ್ಭ ಪ್ರಪಂಚದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಕೌಶಲ್ಯಗಳಿಗೆ ಪ್ರಾಶಸ್ತ್ಯ ಸಿಗುತ್ತಿದೆ. ಕಲಿಕೆ ನಿಂತ ನೀರಾಗಬಾರದು, ನಿರಂತರವಾಗಿದ್ದರೆ ಮಾತ್ರ ಕೌಶಲ್ಯವನ್ನು ಗಳಿಸಲು ಸಾಧ್ಯ. ನಮ್ಮ ಬದುಕಿನ ವಿವಿಧ ಸ್ತರಗಳಲ್ಲಿ ಅರ್ಥಗರ್ಭಿತ ಜೀವನ ಕಟ್ಟಿಕೊಳ್ಳಲು ರಂಗ ತರಬೇತಿ ಶಿಬಿರಗಳು ಉಪಯುಕ್ತವಾಗಿವೆ. ಅಂತಹ ಕೌಶಲ್ಯವನ್ನು ಬೆಳೆಸಿಕೊಂಡು ಸುಂದರ ಬದುಕು ಕಟ್ಟಿಕೊಳ್ಳಿ” ಎಂದು ಶಿಬಿರಾರ್ಥಿಗಳಿಗೆ ಹೇಳಿದರು.

    ರಂಗ ತರಬೇತಿ ಶಿಬಿರವು ಖ್ಯಾತ ರಂಗ ನಿರ್ದೇಶಕರಾದ ಶ್ರೀ ಬಾಸುಮ ಕೊಡಗು ಇವರ ಸಾರಥ್ಯದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ರಂಗ ಶಿಬಿರದಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು. ಕಾಲೇಜು ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಶ್ರೀಮತಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ಉಪನ್ಯಾಸಕ ಚಂದ್ರ ನಿರೂಪಿಸಿ, ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ನಿಕೇತನ ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಗುಂಡ್ಮಿಯ ಸದಾನಂದ ರಂಗ ಮಂಟಪದಲ್ಲಿ ‘ನೆನಪಿನಂಗಳದಲ್ಲಿ ನಾವುಡರು ಧಾರೇಶ್ವರರ ನುಡಿನಮನ’ ಜೂನ್ 17  
    Next Article ಸೇರಾಜೆ ಸೀತಾರಾಮ ಭಟ್ಟ ಮತ್ತು ಜಬ್ಬಾರ ಸಮೊ ಇವರಿಗೆ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’
    roovari

    Add Comment Cancel Reply


    Related Posts

    ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ಕಾಲಚಕ್ರ’ ನಾಟಕ ಪ್ರದರ್ಶನ | ಜನವರಿ 02

    January 2, 2026

    ‘ರಂಗಭೂಮಿ ರಂಗಶಿಕ್ಷಣ ಮಕ್ಕಳ ನಾಟಕೋತ್ಸವ’ದಲ್ಲಿ ನಾಟಕ ಪ್ರದರ್ಶನ

    January 2, 2026

    ಬೆಂಗಳೂರಿನ ವೆಂಕಟಗಿರಿ ಸಭಾಂಗಣದಲ್ಲಿ ‘ಪಂಚಮ ಪದ’ ನಾಟಕ ಪ್ರದರ್ಶನ | ಜನವರಿ 02 

    January 1, 2026

    ಕವಿ, ಸಾಹಿತಿ ಯೋಗೀಶ್ ಕಾಂಚನ್ ಬೈಕಂಪಾಡಿ ನಿಧನ

    December 31, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.